AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನ ಪಾತ್ರಕ್ಕೆ ಯಶ್ ಲುಕ್ ಟೆಸ್ಟ್ ಮಾಡಿಸಿದ್ದು ನಿಜ? ಬಾಲಿವುಡ್ ಅಂಗಳದಲ್ಲಿ ಕೇಳಿಬಂತು ಹೊಸ ಸುದ್ದಿ

ಯಾವುದೇ ಪ್ರಮುಖ ಪಾತ್ರ ಫೈನಲ್ ಮಾಡುವುದಕ್ಕೂ ಮೊದಲು ಲುಕ್ ಟೆಸ್ಟ್ ಮಾಡಲಾಗುತ್ತದೆ. ಅಂದರೆ, ಅವರು ಪಾತ್ರಕ್ಕೆ ಹೊಂದಿಕೆ ಆಗುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಲಾಗುತ್ತದೆ. ನಿತೇಶ್ ತಿವಾರಿ ಕೂಡ ಯಶ್ ಅವರ ಲುಕ್ ಟೆಸ್ಟ್ ಮಾಡಿದ್ದಾರೆ ಎಂದು ವರದಿ ಆಗಿದೆ.

ರಾವಣನ ಪಾತ್ರಕ್ಕೆ ಯಶ್ ಲುಕ್ ಟೆಸ್ಟ್ ಮಾಡಿಸಿದ್ದು ನಿಜ? ಬಾಲಿವುಡ್ ಅಂಗಳದಲ್ಲಿ ಕೇಳಿಬಂತು ಹೊಸ ಸುದ್ದಿ
ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Aug 24, 2023 | 11:31 AM

ನಟ ಯಶ್ (Yash) ಅವರ ಹೊಸ ಸಿನಿಮಾ ಬಗ್ಗೆ ಹುಟ್ಟಿಕೊಂಡಿರೋ ವದಂತಿಗಳು ಒಂದೆರಡಲ್ಲ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ. ಅವರ ಸಿನಿಮಾ ಕುರಿತು ನಿತ್ಯ ಒಂದಿಲ್ಲೊಂದು ಹೊಸ ಸುದ್ದಿ ಹುಟ್ಟಿಕೊಳ್ಳುತ್ತಲೇ ಇವೆ. ಬಾಲಿವುಡ್​ನಲ್ಲಿ ಸಿದ್ಧವಾಗಲಿರೋ ‘ರಾಮಾಯಣ’ (Ramayana) ಸಿನಿಮಾದಲ್ಲಿ ನಟಿಸಲು ಯಶ್ ಅವರಿಗೆ ಆಫರ್ ನೀಡಲಾಗಿತ್ತು ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ಯಶ್ ಲುಕ್ ಟೆಸ್ಟ್​ಗೆ ಹೋಗಿದ್ದು ನಿಜ ಎನ್ನುತ್ತಿವೆ ಮೂಲಗಳು. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಯಾವುದೇ ಪ್ರಮುಖ ಪಾತ್ರ ಫೈನಲ್ ಮಾಡುವುದಕ್ಕೂ ಮೊದಲು ಲುಕ್ ಟೆಸ್ಟ್ ಮಾಡಲಾಗುತ್ತದೆ. ಅಂದರೆ, ಅವರು ಪಾತ್ರಕ್ಕೆ ಹೊಂದಿಕೆ ಆಗುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಲಾಗುತ್ತದೆ. ಒಂದೊಮ್ಮೆ ಪಾತ್ರಕ್ಕೆ ಹೊಂದಿಕೆ ಆದರೆ ಕಲಾವಿದನನ್ನು ಫೈನಲ್ ಮಾಡಲಾಗುತ್ತದೆ. ಇಲ್ಲವಾದರೆ ಬೇರೊಬ್ಬ ಕಲಾವಿದನ ಹುಡುಕಲಾಗುತ್ತದೆ. ಈಗ ನಿತೇಶ್ ತಿವಾರಿ ಕೂಡ ಯಶ್ ಅವರ ಲುಕ್ ಟೆಸ್ಟ್ ಮಾಡಿದ್ದಾರೆ ಎಂದು ‘ಬಾಲಿವುಡ್ ಹಂಗಾಮ’ ವರದಿ ಮಾಡಿದೆ.

ಈ ವರದಿಯ ಪ್ರಕಾರ ಯಶ್ ಅವರು ರಾವಣನ ಪಾತ್ರಕ್ಕೆ ಲುಕ್ ಟೆಸ್ಟ್ ಮಾಡಿಸಿದ್ದಾರಂತೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್ ಅವರಿಗೆ ಆಫರ್ ನೀಡಿದ್ದು ನಿಜವಂತೆ. ಆದರೆ, ಸೀತೆಯ ಪಾತ್ರಕ್ಕೆ ಆಲಿಯಾ ಅವರನ್ನು ಸಂಪರ್ಕಿಸಿಲ್ಲ ಎಂದು ಬಾಲಿವುಡ್ ಹಂಗಾಮ ವರದಿ ಹೇಳಿದೆ. ಯಶ್ ಅವರ ಆಯ್ಕೆ ವಿಚಾರದಲ್ಲಿ ನಿರ್ದೇಶಕರು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.

ನಿತೇಶ್ ತಿವಾರಿ ಅವರು ‘ರಾಮಾಯಣ’ ಚಿತ್ರವನ್ನು ಮೂರು ಭಾಗಗಳಲ್ಲಿ ತೆರೆಗೆ ತರಲು ನಿರ್ಧರಿಸಿದ್ದಾರೆ. ಒಂದೇ ಭಾಗದಲ್ಲಿ ಎಲ್ಲವನ್ನೂ ಹೇಳಲು ಅಸಾಧ್ಯ. ಈ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಒಂದೊಮ್ಮೆ ಯಶ್ ಅವರು ಈ ಸಿನಿಮಾ ಒಪ್ಪಿಕೊಂಡರೆ ಈ ಚಿತ್ರಕ್ಕಾಗಿ ದೊಡ್ಡ ಕಾಲ್​ಶೀಟ್ ನೀಡಬೇಕಾಗುತ್ತದೆ. ಇದರ ಜೊತೆ ಅವರು ‘ಕೆಜಿಎಫ್ 3’ ಕೆಲಸಗಳಲ್ಲೂ ಭಾಗಿ ಆಗಬೇಕಿದೆ.

ಇದನ್ನೂ ಓದಿ: ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?

ಯಶ್ ಮುಂದಿನ ಚಿತ್ರದ ಬಗ್ಗೆ ಹುಟ್ಟಿಕೊಂಡ ವದಂತಿಗಳು ಹಲವು. ಯಾವುದೂ ಅಧಿಕೃತ ಆಗಿಲ್ಲ. ಹೀಗಾಗಿ, ‘ರಾಮಾಯಣ’ ವಿಚಾರ ನಿಜವೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಯಶ್ ಕಡೆಯಿಂದಲೇ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ