AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ವಿಜಯ್​ನ ಮಗುವಂತೆ ಸಂತೈಸಿದ ರಾಕಿಂಗ್ ಸ್ಟಾರ್ ಯಶ್; ಇಲ್ಲಿದೆ ಭಾವುಕ ಕ್ಷಣ

ಯಶ್ ಹಾಗೂ ವಿಜಯ್ ಇಬ್ಬರೂ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಇವರು ಭೇಟಿ ಆಗಿದ್ದಾರೆ. ಈ ಕಾರಣಕ್ಕೆ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಈ ಕಾರಣಕ್ಕೆ ಗೆಳೆಯನ ಸಂತೈಸಲು ಯಶ್ ಅವರು ಆಗಮಿಸಿದ್ದಾರೆ.

Yash: ವಿಜಯ್​ನ ಮಗುವಂತೆ ಸಂತೈಸಿದ ರಾಕಿಂಗ್ ಸ್ಟಾರ್ ಯಶ್; ಇಲ್ಲಿದೆ ಭಾವುಕ ಕ್ಷಣ
ಯಶ್-ವಿಜಯ್
TV9 Web
| Edited By: |

Updated on: Aug 09, 2023 | 12:36 PM

Share

ಸ್ಪಂದನಾ ಅವರನ್ನು ಕಳೆದುಕೊಂಡು ವಿಜಯ್ ರಾಘವೇಂದ್ರ (Vijay Raghavendra) ಅವರು ಕುಗ್ಗಿದ್ದಾರೆ. ಅವರ ಮನಸ್ಸಲ್ಲಿ ನೋವು ತುಂಬಿದೆ. ವಿಜಯ್ ಅವರನ್ನು ಎಲ್ಲರೂ ಸಮಾಧಾನ ಪಡಿಸುತ್ತಿದ್ದಾರೆ. ಯಶ್ ಆಗಮಿಸಿ ವಿಜಯ್ ಅವರನ್ನು ಸಂತೈಸಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ವಿಜಯ್ ಅವರಿಗೆ ಯಶ್ ಅವರು ಧೈರ್ಯ ತುಂಬಿದ್ದಾರೆ. ಧೈರ್ಯದಿಂದ ಮುನ್ನಡೆಯುವಂತೆ ವಿಜಯ್ ಅವರನ್ನು ಹುರಿದುಂಬಿಸಿದ್ದಾರೆ. ಆಗಸ್ಟ್ 6ರ ರಾತ್ರಿ ಸ್ಪಂದನಾ (Spandana) ಮೃತಪಟ್ಟರು. ಇಂದು (ಆಗಸ್ಟ್​ 9) ಅವರ ಅಂತ್ಯಕ್ರಿಯೆ ಬೆಂಗಳೂರಿನ ಹರೀಶ್ಚಂದ್ರ ಘಾಟ್​​ನಲ್ಲಿ ನಡೆಯಲಿದೆ.

ಯಶ್ ಹಾಗೂ ವಿಜಯ್ ಇಬ್ಬರೂ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಇವರು ಭೇಟಿ ಆಗಿದ್ದಾರೆ. ಈ ಕಾರಣಕ್ಕೆ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಈ ಕಾರಣಕ್ಕೆ ಗೆಳೆಯನ ಸಂತೈಸಲು ಯಶ್ ಅವರು ಆಗಮಿಸಿದ್ದಾರೆ. ಈ ವೇಳೆ ಅವರು ವಿಜಯ್ ಜೊತೆ ನಡೆದುಕೊಂಡ ರೀತಿಯ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಯಶ್ ನೇರವಾಗಿ ಸ್ಪಂದನಾ ಪಾರ್ಥಿವ ಶರೀರ ಇಟ್ಟ ಜಾಗಕ್ಕೆ ಆಗಮಿಸಿದರು. ಅಲ್ಲಿ ಕೈ ಮುಗಿದು ಅವರು ವಿಜಯ್ ರಾಘವೇಂದ್ರ ಬಳಿ ತೆರಳಿದರು. ಅಲ್ಲಿ ವಿಜಯ್​​ನ ತಬ್ಬಿ ಸಂತೈಸಿದರು. ವಿಜಯ್​ಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದರು. ಬಳಿಕ ಅಲ್ಲಿಂದ ನಡೆದರು.

ಇದನ್ನೂ ಓದಿ: ಪೋಸ್ ಕೊಡೋದ್ರಲ್ಲಿ ರಾಧಿಕಾ ಪಂಡಿತ್​ನ ಮೀರಿಸಿದ ಆಯ್ರಾ ಯಶ್

ಯಶ್ ಅವರ 19ನೇ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಆದರೆ, ಇಲ್ಲಿಯವರೆಗೆ ಅವರ ಹೊಸ ಸಿನಿಮಾ ಯಾವುದು ಎಂಬುದು ಇಲ್ಲಿಯವರೆಗೆ ಘೋಷಣೆ ಆಗಿಲ್ಲ. ಕಳೆದ ಒಂದೂವರೆ ವರ್ಷಗಳಿಂದ ಈ ಸಿನಿಮಾ ಕೆಲಸದ ಮೇಲೆ ಅವರು ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು