AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಯಶ್ ಹೊಸ ಲುಕ್ ಹಿಂದಿನ ಅಸಲಿಕಥೆ ಹೇಳಿದ ಹೇರ್​ಸ್ಟೈಲಿಸ್ಟ್

ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಇತ್ತೀಚೆಗೆ ಅವರ ಹೊಸ ಹೇರ್​ಸ್ಟೈಲ್​ ವೈರಲ್ ಆಗಿದೆ. ಅವರ ಹೊಸ ಹೇರ್​ಸ್ಟೈಲ್ ವೈರಲ್ ಆಗಿದೆ. ಈಗ ಯಶ್ ಅವರ ಹೊಸ ಹೇರ್​ಸ್ಟೈಲಿಸ್ಟ್ ಇದರ ಅಸಲಿ ವಿಚಾರ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

Yash: ಯಶ್ ಹೊಸ ಲುಕ್ ಹಿಂದಿನ ಅಸಲಿಕಥೆ ಹೇಳಿದ ಹೇರ್​ಸ್ಟೈಲಿಸ್ಟ್
ಯಶ್
ರಾಜೇಶ್ ದುಗ್ಗುಮನೆ
|

Updated on: Jul 23, 2024 | 12:08 PM

Share

ಯಶ್ ಅವರು ಇತ್ತೀಚೆಗೆ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಮದುವೆಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಯಶ್ ಅವರು ಹೊಸ ಹೇರ್​ಸ್ಟೈಲ್​ನಲ್ಲಿ ಕಾಣಿಸಿಕೊಂಡಿದ್ದರು. ಅವರು ತಲೆ ಕೂದಲನ್ನು ಶಾರ್ಟ್ ಮಾಡಿಸಿದ್ದರು. ಇದಕ್ಕೆ ಕಾರಣ ಏನು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಯಶ್ ಹೇರ್​ಸ್ಟೈಲಿಸ್ಟ್ ಅಲೆಕ್ಸ್ ವಿಜಯಕಾಂತ್ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇದರ ಹಿಂದಿನ ರಹಸ್ಯ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ.

‘ನಾವು ಇನ್ನೂ ಹೋಟೆಲ್ ತಲುಪಿರಲಿಲ್ಲ. ಆಗಲೇ ಫೋಟೋಗಳು ಹರಿದಾಡಲು ಆರಂಭಿಸಿದ್ದವು. ಕೆಲವೇ ನಿಮಿಷಗಳಲ್ಲಿ ಇಂಟರ್​ನೆಟ್​ನಲ್ಲಿ ಫೋಟೋ ವೈರಲ್ ಆಯಿತು. ಪ್ರತಿಕ್ರಿಯೆ ಅಗಾಧವಾಗಿತ್ತು. ಈ ಲುಕ್ ಸಾಕಷ್ಟು ಪರಿಣಾಮ ಬೀರಿತ್ತು’ ಎಂದು ಹಿಂದುಸ್ತಾನ್ ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಅಲೆಕ್ಸ್ ವಿಜಯಕಾಂತ್ ಹೇಳಿಕೊಂಡಿದ್ದಾರೆ.

‘ಸ್ಕ್ರಿಪ್ಟ್​ನಿಂದ ಸ್ಫೂರ್ತಿ ಪಡೆದು ಈ ಹೇರ್​ಸ್ಟೈಲ್​ ಮಾಡಿದ್ದೇನೆ. ನಾನು ಮೊದಲು ಸ್ಕ್ರಿಪ್ಟ್ ಕೇಳಿದೆ. ಈ ಕಥೆಗೆ ಸಣ್ಣ ತಲೆಗೂದಲು ಹೊಂದುತ್ತದೆ ಎಂದುಕೊಂಡೆ. ಸಿನಿಮಾದ ಪಾತ್ರ ಏನನ್ನು ಬೇಡುತ್ತದೆಯೋ ಅದೇ ರೀತಿಯಲ್ಲಿ ಹೇರ್​ಸ್ಟೈಲ್ ಮಾಡಿರುವೆ’ ಎಂದು ಮಾಹಿತಿ ನೀಡಿದ್ದಾರೆ ಅವರು.

ಹೇರ್​ಸ್ಟೈಲ್​ನ ನೋಡಿ ಯಶ್ ಅವರು ಯಾವ ರೀತಿಯ ರಿಯಾಕ್ಷನ್ ನೀಡಿದರು ಎನ್ನುವ ಬಗ್ಗೆಯೂ ವಿಜಯಕಾಂತ್ ಅವರು ಮಾತನಾಡಿದ್ದಾರೆ. ‘ಅವರು ನನ್ನನ್ನು ಹಗ್ ಮಾಡಿದರು. ಅಲೆಕ್ಸ್ ನೀವು ಸಾಧಿಸಿದಿರಿ ಎಂದರು’ ಎಂಬುದು ವಿಜಯಕಾಂತ್ ಮಾತು.

ಯಶ್​ಗೆ ಹೇರ್​ಸ್ಟೈಲ್ ಮಾಡುತ್ತಿರುವ ಫೋಟೋನ ಅಲೆಕ್ಸ್ ವಿಜಯಕಾಂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯಶ್ ಅವರು ‘ಕೆಜಿಎಫ್’ ಚಿತ್ರಗಳಿಗಾಗಿ ಉದ್ದ ಕೂದಲು ಬಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೆ ಅವರು ಇದೇ ರೀತಿಯ ಹೇರ್​ಸ್ಟೈಲ್​ನ ಕಾಯ್ದುಕೊಂಡು ಬಂದಿದ್ದರು. ಈಗ ಅದಕ್ಕೆ ಕತ್ತರಿ ಹಾಕಿದ್ದಾರೆ. ಇದನ್ನೂ ಓದಿ: ಸ್ಟೈಲಿಶ್ ಸ್ಟಾರ್ ಎಂದು ಮೆರೆಯುತ್ತಿದ್ದ ಅಲ್ಲು ಅರ್ಜುನ್​ಗೆ ಶಾಕ್​ ಕೊಟ್ಟಿದ್ದ ಯಶ್

ಯಶ್ ಹೇರ್​ಸ್ಟೈಲ್ ಮೊದಲು ರಿವೀಲ್ ಆಗಿದ್ದು ಅನಂತ್ ಅಂಬಾನಿ ಮದುವೆ ಸಂದರ್ಭದಲ್ಲಿ. ಇದಾದ ಬಳಿಕ ಅನೇಕರು ಈ ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ. ಅನೇಕರು ಈ ಹೇರ್​ಸ್ಟೈಲ್​ನ ಫಾಲೋ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ