AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಧದ ಗುಡಿ’ ನಿರ್ದೇಶಕ ಅಮೋಘ ವರ್ಷ ಜತೆ ಡಬ್ಬಿಂಗ್ ಕೆಲಸ ಆರಂಭಿಸಿದ ಯಶ್; ಸಿಕ್ತು ಹೊಸ ಅಪ್​ಡೇಟ್​

ಪುನೀತ್ ರಾಜ್​ಕುಮಾರ್ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ಗೆ ಅಮೋಘವರ್ಷ ಅವರು ನಿರ್ದೇಶನ ಮಾಡಿದ್ದರು. ಈಡಾಕ್ಯುಮೆಂಟರಿಗೆ ಸಾಕಷ್ಟು ಮೆಚ್ಚುಗೆ ಕೇಳಿ ಬಂದಿದೆ. ಈಗ ಅಮೋಘವರ್ಷ ಅವರು ಮತ್ತೊಂದು ಡಾಕ್ಯುಮೆಂಟರಿ ಮಾಡಿದ್ದಾರೆ.

‘ಗಂಧದ ಗುಡಿ’ ನಿರ್ದೇಶಕ ಅಮೋಘ ವರ್ಷ ಜತೆ ಡಬ್ಬಿಂಗ್ ಕೆಲಸ ಆರಂಭಿಸಿದ ಯಶ್; ಸಿಕ್ತು ಹೊಸ ಅಪ್​ಡೇಟ್​
ಯಶ್-ಅಮೋಘವರ್ಷ
TV9 Web
| Edited By: |

Updated on:Nov 10, 2022 | 5:48 PM

Share

ರಾಕಿಂಗ್ ಸ್ಟಾರ್ ಯಶ್ (Yash) ಅವರ ಮುಂದಿನ ಚಿತ್ರ ಯಾವುದು ಎನ್ನುವ ಬಗ್ಗೆ ಸಾಕಷ್ಟು ಕುತೂಹಲ ಇದೆ. ಆದರೆ, ಸದ್ಯಕ್ಕಂತೂ ಈ ಪ್ರಶ್ನೆಗೆ ಉತ್ತರ ಸಿಗೋದು ಅನುಮಾನವೇ. ‘ಕೆಜಿಎಫ್ 2’ ಚಿತ್ರದಿಂದ ಯಶ್ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ಈ ಕಾರಣಕ್ಕೆ ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈಗ ಯಶ್ ಅವರು ಡಬ್ಬಿಂಗ್ ಸ್ಟುಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಅದೂ ‘ಗಂಧದ ಗುಡಿ’ (Gandhada Gudi)ನಿರ್ದೇಶಕ ಅಮೋಘವರ್ಷ ಜತೆ ಅನ್ನೋದು ವಿಶೇಷ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಫೋಟೋ ಹಿಂದಿನ ಕಥೆ ಏನು ಎಂಬುದನ್ನು ಈ ಸ್ಟೋರಿಯಲ್ಲಿ ಓದಿ.

ಪುನೀತ್ ರಾಜ್​ಕುಮಾರ್ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ಗೆ ಅಮೋಘವರ್ಷ ಅವರು ನಿರ್ದೇಶನ ಮಾಡಿದ್ದರು. ಈಡಾಕ್ಯುಮೆಂಟರಿಗೆ ಸಾಕಷ್ಟು ಮೆಚ್ಚುಗೆ ಕೇಳಿ ಬಂದಿದೆ. ಈಗ ಅಮೋಘವರ್ಷ ಅವರು ಮತ್ತೊಂದು ಡಾಕ್ಯುಮೆಂಟರಿ ಮಾಡಿದ್ದಾರೆ. ಬೆಂಗಳೂರನ್ನು ಕಟ್ಟಿದ ನಾಡ ಪ್ರಭು ಕೆಂಪೇ ಗೌಡ ಕುರಿತು ಅಮೋಘವರ್ಷ ಸಾಕ್ಷ್ಯಚಿತ್ರ ಸಿದ್ಧಪಡಿಸಿದ್ದಾರೆ.

ಶುಕ್ರವಾರ (ನವೆಂಬರ್ 11) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡ ಅವರ ಕಂಚಿನ ಪ್ರತಿಮೆ ಅನಾವರಣಗೊಳ್ಳಲಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಂಪೇಗೌಡ ಅವರ ಕುರಿತ ಡಾಕ್ಯುಮೆಂಟರಿ ಪ್ರಸಾರ ಕಾಣಲಿದೆ. ಕೆಂಪೇಗೌಡ ಅವರ ಜೀವನ ಮತ್ತು ಸಾಧನೆಗಳನ್ನು ಈ ಸಾಕ್ಷ್ಯಚಿತ್ರ ಹೇಳಲಿದೆ. ಈ ಡಾಕ್ಯುಮೆಂಟರಿಗೆ ಯಶ್ ಅವರು ಧ್ವನಿ ನೀಡಿದ್ದಾರೆ.  ಈ ಕಾರಣಕ್ಕೆ ಡಬ್ಬಿಂಗ್ ಸ್ಟುಡಿಯೋದಲ್ಲಿ ಇವರು ಕಾಣಿಸಿಕೊಂಡಿದ್ದಾರೆ.

ಯಶ್ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಅದಕ್ಕೂ ಮೊದಲು ಹೊಸದನ್ನು ಮಾಡುವ ಆಲೋಚನೆಯಲ್ಲಿ ಅವರಿದ್ದಾರೆ. ಕಳೆದ ಆರು ವರ್ಷಗಳಿಂದ ಅವರು ‘ಕೆಜಿಎಫ್’ ಸರಣಿ ಸಿನಿಮಾಗಳ ಬಗ್ಗೆ ಗಮನ ಹರಿಸಿದ್ದರು.

ಇದನ್ನೂ ಓದಿ: ‘ಯಶ್ ಮಾತ್ರವಲ್ಲ, ಬಿಟ್ರೆ ಪ್ರಭಾಸ್​ ಹೆಸರನ್ನು ಎಳೆದು ತರ್ತಾರೆ’; ‘ಬ್ರಹ್ಮಾಸ್ತ್ರ’ ಡೈರೆಕ್ಟರ್ ಹೀಗೆ ಹೇಳಿದ್ದೇಕೆ?

ಯಶ್ ಅವರು ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಹೊಸ ಲುಕ್ ವೈರಲ್ ಆಗಿತ್ತು. ಯಶ್ ಅವರನ್ನು ಕಂಡು ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದರು. ಯಶ್ ಅವರ ಕೇಶವಿನ್ಯಾಸ ಸಾಕಷ್ಟು ಬದಲಾಗಿದೆ.

Published On - 5:43 pm, Thu, 10 November 22

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ