AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಧದ ಗುಡಿ’ ನಿರ್ದೇಶಕ ಅಮೋಘ ವರ್ಷ ಜತೆ ಡಬ್ಬಿಂಗ್ ಕೆಲಸ ಆರಂಭಿಸಿದ ಯಶ್; ಸಿಕ್ತು ಹೊಸ ಅಪ್​ಡೇಟ್​

ಪುನೀತ್ ರಾಜ್​ಕುಮಾರ್ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ಗೆ ಅಮೋಘವರ್ಷ ಅವರು ನಿರ್ದೇಶನ ಮಾಡಿದ್ದರು. ಈಡಾಕ್ಯುಮೆಂಟರಿಗೆ ಸಾಕಷ್ಟು ಮೆಚ್ಚುಗೆ ಕೇಳಿ ಬಂದಿದೆ. ಈಗ ಅಮೋಘವರ್ಷ ಅವರು ಮತ್ತೊಂದು ಡಾಕ್ಯುಮೆಂಟರಿ ಮಾಡಿದ್ದಾರೆ.

‘ಗಂಧದ ಗುಡಿ’ ನಿರ್ದೇಶಕ ಅಮೋಘ ವರ್ಷ ಜತೆ ಡಬ್ಬಿಂಗ್ ಕೆಲಸ ಆರಂಭಿಸಿದ ಯಶ್; ಸಿಕ್ತು ಹೊಸ ಅಪ್​ಡೇಟ್​
ಯಶ್-ಅಮೋಘವರ್ಷ
TV9 Web
| Edited By: |

Updated on:Nov 10, 2022 | 5:48 PM

Share

ರಾಕಿಂಗ್ ಸ್ಟಾರ್ ಯಶ್ (Yash) ಅವರ ಮುಂದಿನ ಚಿತ್ರ ಯಾವುದು ಎನ್ನುವ ಬಗ್ಗೆ ಸಾಕಷ್ಟು ಕುತೂಹಲ ಇದೆ. ಆದರೆ, ಸದ್ಯಕ್ಕಂತೂ ಈ ಪ್ರಶ್ನೆಗೆ ಉತ್ತರ ಸಿಗೋದು ಅನುಮಾನವೇ. ‘ಕೆಜಿಎಫ್ 2’ ಚಿತ್ರದಿಂದ ಯಶ್ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ಈ ಕಾರಣಕ್ಕೆ ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈಗ ಯಶ್ ಅವರು ಡಬ್ಬಿಂಗ್ ಸ್ಟುಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಅದೂ ‘ಗಂಧದ ಗುಡಿ’ (Gandhada Gudi)ನಿರ್ದೇಶಕ ಅಮೋಘವರ್ಷ ಜತೆ ಅನ್ನೋದು ವಿಶೇಷ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಫೋಟೋ ಹಿಂದಿನ ಕಥೆ ಏನು ಎಂಬುದನ್ನು ಈ ಸ್ಟೋರಿಯಲ್ಲಿ ಓದಿ.

ಪುನೀತ್ ರಾಜ್​ಕುಮಾರ್ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ಗೆ ಅಮೋಘವರ್ಷ ಅವರು ನಿರ್ದೇಶನ ಮಾಡಿದ್ದರು. ಈಡಾಕ್ಯುಮೆಂಟರಿಗೆ ಸಾಕಷ್ಟು ಮೆಚ್ಚುಗೆ ಕೇಳಿ ಬಂದಿದೆ. ಈಗ ಅಮೋಘವರ್ಷ ಅವರು ಮತ್ತೊಂದು ಡಾಕ್ಯುಮೆಂಟರಿ ಮಾಡಿದ್ದಾರೆ. ಬೆಂಗಳೂರನ್ನು ಕಟ್ಟಿದ ನಾಡ ಪ್ರಭು ಕೆಂಪೇ ಗೌಡ ಕುರಿತು ಅಮೋಘವರ್ಷ ಸಾಕ್ಷ್ಯಚಿತ್ರ ಸಿದ್ಧಪಡಿಸಿದ್ದಾರೆ.

ಶುಕ್ರವಾರ (ನವೆಂಬರ್ 11) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡ ಅವರ ಕಂಚಿನ ಪ್ರತಿಮೆ ಅನಾವರಣಗೊಳ್ಳಲಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಂಪೇಗೌಡ ಅವರ ಕುರಿತ ಡಾಕ್ಯುಮೆಂಟರಿ ಪ್ರಸಾರ ಕಾಣಲಿದೆ. ಕೆಂಪೇಗೌಡ ಅವರ ಜೀವನ ಮತ್ತು ಸಾಧನೆಗಳನ್ನು ಈ ಸಾಕ್ಷ್ಯಚಿತ್ರ ಹೇಳಲಿದೆ. ಈ ಡಾಕ್ಯುಮೆಂಟರಿಗೆ ಯಶ್ ಅವರು ಧ್ವನಿ ನೀಡಿದ್ದಾರೆ.  ಈ ಕಾರಣಕ್ಕೆ ಡಬ್ಬಿಂಗ್ ಸ್ಟುಡಿಯೋದಲ್ಲಿ ಇವರು ಕಾಣಿಸಿಕೊಂಡಿದ್ದಾರೆ.

ಯಶ್ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಅದಕ್ಕೂ ಮೊದಲು ಹೊಸದನ್ನು ಮಾಡುವ ಆಲೋಚನೆಯಲ್ಲಿ ಅವರಿದ್ದಾರೆ. ಕಳೆದ ಆರು ವರ್ಷಗಳಿಂದ ಅವರು ‘ಕೆಜಿಎಫ್’ ಸರಣಿ ಸಿನಿಮಾಗಳ ಬಗ್ಗೆ ಗಮನ ಹರಿಸಿದ್ದರು.

ಇದನ್ನೂ ಓದಿ: ‘ಯಶ್ ಮಾತ್ರವಲ್ಲ, ಬಿಟ್ರೆ ಪ್ರಭಾಸ್​ ಹೆಸರನ್ನು ಎಳೆದು ತರ್ತಾರೆ’; ‘ಬ್ರಹ್ಮಾಸ್ತ್ರ’ ಡೈರೆಕ್ಟರ್ ಹೀಗೆ ಹೇಳಿದ್ದೇಕೆ?

ಯಶ್ ಅವರು ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಹೊಸ ಲುಕ್ ವೈರಲ್ ಆಗಿತ್ತು. ಯಶ್ ಅವರನ್ನು ಕಂಡು ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದರು. ಯಶ್ ಅವರ ಕೇಶವಿನ್ಯಾಸ ಸಾಕಷ್ಟು ಬದಲಾಗಿದೆ.

Published On - 5:43 pm, Thu, 10 November 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು