AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಜಾಹೀರಾತಿನಲ್ಲಿ ಕಾಣಿಸಿಕೊಂಡ ಯಶ್; ಸಖತ್ ಫನ್ನಿ ಆಗಿದೆ ಅಡ್ವಟೈಸ್​ಮೆಂಟ್

ಯಶ್ ಹೊಸ ಸಿನಿಮಾ ಯಾವ ನಿರ್ದೇಶಕರ ಜೊತೆ ಇರಬಹುದು ಎನ್ನುವ ಗುಟ್ಟು ಹೊರಬಿದ್ದಿಲ್ಲ. ಹೀಗಿರುವಾಗಲೇ ಯಶ್ ವಿವಿಧ ಬ್ರ್ಯಾಂಡ್​ಗಳಿಗೆ ಪ್ರಚಾರ ನೀಡುತ್ತಿದ್ದಾರೆ.

ಹೊಸ ಜಾಹೀರಾತಿನಲ್ಲಿ ಕಾಣಿಸಿಕೊಂಡ ಯಶ್; ಸಖತ್ ಫನ್ನಿ ಆಗಿದೆ ಅಡ್ವಟೈಸ್​ಮೆಂಟ್
ಯಶ್
ರಾಜೇಶ್ ದುಗ್ಗುಮನೆ
|

Updated on: Apr 17, 2023 | 7:11 AM

Share

ನಟ ಯಶ್ (Yash) ರೇಂಜ್ ಬದಲಾಗಿದೆ. ‘ಕೆಜಿಎಫ್ 2’ ಸಿನಿಮಾ ಮೂಲಕ ಅವರ ಖ್ಯಾತಿ ವಿಶ್ವಮಟ್ಟದಲ್ಲಿ ಹಬ್ಬಿದೆ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಈ ಬಗ್ಗೆ ಶೀಘ್ರವೇ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗಲೇ ಯಶ್ ಅವರು ವಿವಿಧ ಜಾಹೀರಾತಿಗೆ ಪ್ರಚಾರ ರಾಯಭಾರಿ ಆಗುತ್ತಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳು ಯಶ್ ಅವರಿಗೆ ಆಹ್ವಾನ ನೀಡುತ್ತಿವೆ. ಈಗ ಅವರು ಹೊಸ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಸಖತ್ ಫನ್ನಿ ಆಗಿದೆ.

‘ಕೆಜಿಎಫ್ 2’ ಮಾಡಿರುವ ದಾಖಲೆಗಳು ಹಲವು. ಯಶ್​ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು. ಈ ಕಾರಣಕ್ಕೆ ಯಶ್ ಮುಂದಿನ ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಕಾಳಜಿವಹಿಸುತ್ತಿದ್ದಾರೆ. ಅವರ ಹೊಸ ಸಿನಿಮಾ ಯಾವ ನಿರ್ದೇಶಕರ ಜೊತೆ ಇರಬಹುದು ಎನ್ನುವ ಗುಟ್ಟು ಹೊರಬಿದ್ದಿಲ್ಲ. ಹೀಗಿರುವಾಗಲೇ ಯಶ್ ವಿವಿಧ ಬ್ರ್ಯಾಂಡ್​ಗಳಿಗೆ ಪ್ರಚಾರ ನೀಡುತ್ತಿದ್ದಾರೆ.

ವಿಲನ್ ಹೆಸರಿನ ಪರ್ಫ್ಯೂಮ್​ ಇದೆ. ಯಶ್ ಈ ಕಂಪನಿಯ ಪ್ರಚಾರ ರಾಯಭಾರಿ ಆಗಿದ್ದಾರೆ. ಈಗ ವಿಲನ್ ಎಕ್ಸ್​ಟ್ರೀಮ್ ಹೆಸರಿನ ಫೇಸ್​ವಾಶ್ ರಿವೀಲ್ ಮಾಡಲಾಗಿದೆ. ಇದರ ಜಾಹೀರಾತಿನಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಯಶ್ ಕಾರಿನ ಮೇಲೆ ಕುಳಿತಿರುತ್ತಾರೆ. ಆಗ ಗನ್​ನಿಂದ ಬುಲೆಟ್ ಫೈರ್ ಆಗುತ್ತದೆ. ಅದು ಕಾರಿನ ಗಾಜಿಗೆ ಹೊಡೆಯುತ್ತದೆ. ಮುಂದಿನ ಬುಲೆಟ್ ಯಶ್ ಮುಖವನ್ನು ಸವರಿಕೊಂಡು ಹೋಗುತ್ತದೆ. ಆ ಬುಲೆಟ್ ಚಾಕೋಲೇಟ್ ಆಗಿ ಬದಲಾಗುತ್ತದೆ! ಅದನ್ನು ಯಶ್ ತಿನ್ನುತ್ತಾರೆ. ಯಶ್ ಅವರು ಬಳಕೆ ಮಾಡಿದ ಚಾಕೋಲೇಟ್ ಫ್ಲೇವರ್​ನ ಫೇಸ್​ವಾಶ್​ನಿಂದಲೇ ಬುಲೆಟ್ ಚಾಕೋಲೇಟ್ ಆಗಿ ಬದಲಾಗುತ್ತದೆ. ಈ ಜಾಹೀರಾತಿಗೆ ಹಲವರು ಹಲವು ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Yash: ಯಶ್​ ಮನೆ ಬಾಗಿಲು ತಟ್ಟಿದ ರಾಜಕೀಯ ಮುಖಂಡರು; ರಾಕಿಂಗ್ ಸ್ಟಾರ್ ನಿರ್ಧಾರ ಏನು?

ಯಶ್ ಇತ್ತೀಚೆಗೆ ಪೆಪ್ಸಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಮಿಂಚಿದ್ದರು. ಯಶ್ ಅವರಿಗೆ ಈ ಮೊದಲು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲು ಆಫರ್ ಬಂದಿತ್ತು ಎನ್ನಲಾಗಿದೆ. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದ್ದರು. ಪಾನ್ ಮಸಾಲ ಸೇವನೆ ಆರೋಗ್ಯಕ್ಕೆ ಹಾನಿಕರ. ಹೀಗಾಗಿ ಯಶ್ ಅವರು ಇದನ್ನು ಪ್ರೋತ್ಸಾಹಿಸಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್