ಹೊಸ ಜಾಹೀರಾತಿನಲ್ಲಿ ಕಾಣಿಸಿಕೊಂಡ ಯಶ್; ಸಖತ್ ಫನ್ನಿ ಆಗಿದೆ ಅಡ್ವಟೈಸ್​ಮೆಂಟ್

ಯಶ್ ಹೊಸ ಸಿನಿಮಾ ಯಾವ ನಿರ್ದೇಶಕರ ಜೊತೆ ಇರಬಹುದು ಎನ್ನುವ ಗುಟ್ಟು ಹೊರಬಿದ್ದಿಲ್ಲ. ಹೀಗಿರುವಾಗಲೇ ಯಶ್ ವಿವಿಧ ಬ್ರ್ಯಾಂಡ್​ಗಳಿಗೆ ಪ್ರಚಾರ ನೀಡುತ್ತಿದ್ದಾರೆ.

ಹೊಸ ಜಾಹೀರಾತಿನಲ್ಲಿ ಕಾಣಿಸಿಕೊಂಡ ಯಶ್; ಸಖತ್ ಫನ್ನಿ ಆಗಿದೆ ಅಡ್ವಟೈಸ್​ಮೆಂಟ್
ಯಶ್
Follow us
|

Updated on: Apr 17, 2023 | 7:11 AM

ನಟ ಯಶ್ (Yash) ರೇಂಜ್ ಬದಲಾಗಿದೆ. ‘ಕೆಜಿಎಫ್ 2’ ಸಿನಿಮಾ ಮೂಲಕ ಅವರ ಖ್ಯಾತಿ ವಿಶ್ವಮಟ್ಟದಲ್ಲಿ ಹಬ್ಬಿದೆ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಈ ಬಗ್ಗೆ ಶೀಘ್ರವೇ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗಲೇ ಯಶ್ ಅವರು ವಿವಿಧ ಜಾಹೀರಾತಿಗೆ ಪ್ರಚಾರ ರಾಯಭಾರಿ ಆಗುತ್ತಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳು ಯಶ್ ಅವರಿಗೆ ಆಹ್ವಾನ ನೀಡುತ್ತಿವೆ. ಈಗ ಅವರು ಹೊಸ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಸಖತ್ ಫನ್ನಿ ಆಗಿದೆ.

‘ಕೆಜಿಎಫ್ 2’ ಮಾಡಿರುವ ದಾಖಲೆಗಳು ಹಲವು. ಯಶ್​ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು. ಈ ಕಾರಣಕ್ಕೆ ಯಶ್ ಮುಂದಿನ ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಕಾಳಜಿವಹಿಸುತ್ತಿದ್ದಾರೆ. ಅವರ ಹೊಸ ಸಿನಿಮಾ ಯಾವ ನಿರ್ದೇಶಕರ ಜೊತೆ ಇರಬಹುದು ಎನ್ನುವ ಗುಟ್ಟು ಹೊರಬಿದ್ದಿಲ್ಲ. ಹೀಗಿರುವಾಗಲೇ ಯಶ್ ವಿವಿಧ ಬ್ರ್ಯಾಂಡ್​ಗಳಿಗೆ ಪ್ರಚಾರ ನೀಡುತ್ತಿದ್ದಾರೆ.

ವಿಲನ್ ಹೆಸರಿನ ಪರ್ಫ್ಯೂಮ್​ ಇದೆ. ಯಶ್ ಈ ಕಂಪನಿಯ ಪ್ರಚಾರ ರಾಯಭಾರಿ ಆಗಿದ್ದಾರೆ. ಈಗ ವಿಲನ್ ಎಕ್ಸ್​ಟ್ರೀಮ್ ಹೆಸರಿನ ಫೇಸ್​ವಾಶ್ ರಿವೀಲ್ ಮಾಡಲಾಗಿದೆ. ಇದರ ಜಾಹೀರಾತಿನಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಯಶ್ ಕಾರಿನ ಮೇಲೆ ಕುಳಿತಿರುತ್ತಾರೆ. ಆಗ ಗನ್​ನಿಂದ ಬುಲೆಟ್ ಫೈರ್ ಆಗುತ್ತದೆ. ಅದು ಕಾರಿನ ಗಾಜಿಗೆ ಹೊಡೆಯುತ್ತದೆ. ಮುಂದಿನ ಬುಲೆಟ್ ಯಶ್ ಮುಖವನ್ನು ಸವರಿಕೊಂಡು ಹೋಗುತ್ತದೆ. ಆ ಬುಲೆಟ್ ಚಾಕೋಲೇಟ್ ಆಗಿ ಬದಲಾಗುತ್ತದೆ! ಅದನ್ನು ಯಶ್ ತಿನ್ನುತ್ತಾರೆ. ಯಶ್ ಅವರು ಬಳಕೆ ಮಾಡಿದ ಚಾಕೋಲೇಟ್ ಫ್ಲೇವರ್​ನ ಫೇಸ್​ವಾಶ್​ನಿಂದಲೇ ಬುಲೆಟ್ ಚಾಕೋಲೇಟ್ ಆಗಿ ಬದಲಾಗುತ್ತದೆ. ಈ ಜಾಹೀರಾತಿಗೆ ಹಲವರು ಹಲವು ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Yash: ಯಶ್​ ಮನೆ ಬಾಗಿಲು ತಟ್ಟಿದ ರಾಜಕೀಯ ಮುಖಂಡರು; ರಾಕಿಂಗ್ ಸ್ಟಾರ್ ನಿರ್ಧಾರ ಏನು?

ಯಶ್ ಇತ್ತೀಚೆಗೆ ಪೆಪ್ಸಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಮಿಂಚಿದ್ದರು. ಯಶ್ ಅವರಿಗೆ ಈ ಮೊದಲು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲು ಆಫರ್ ಬಂದಿತ್ತು ಎನ್ನಲಾಗಿದೆ. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದ್ದರು. ಪಾನ್ ಮಸಾಲ ಸೇವನೆ ಆರೋಗ್ಯಕ್ಕೆ ಹಾನಿಕರ. ಹೀಗಾಗಿ ಯಶ್ ಅವರು ಇದನ್ನು ಪ್ರೋತ್ಸಾಹಿಸಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ