AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಘೋಷಣೆ​ ಆಯ್ತು ಕೆಜಿಎಫ್​ ಚಾಪ್ಟರ್​ 2 ರಿಲೀಸ್​ ದಿನಾಂಕ

KGF Chapter 2 Release Date: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಕೆಜಿಎಫ್​-2 ದಸರಾ ಪ್ರಯುಕ್ತ ಅಕ್ಟೋಬರ್​ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ಸೊಂಕು ಕಾಣಿಸಿಕೊಂಡಿದ್ದರಿಂದ ಅದು ಸಾಧ್ಯವಾಗಿರಲ್ಲ. ಈಗ ಸಿನಿಮಾ ರಿಲೀಸ್​ ಡೇಟ್​ ಘೋಷಣೆ ಆಗಿದ್ದು, ಸಿನಿ ಪ್ರಿಯರು ಸಖತ್​ ಖುಷಿ ಆಗಿದ್ದಾರೆ.

KGF Chapter 2: ಘೋಷಣೆ​ ಆಯ್ತು ಕೆಜಿಎಫ್​ ಚಾಪ್ಟರ್​ 2 ರಿಲೀಸ್​ ದಿನಾಂಕ
ಯಶ್​
ರಾಜೇಶ್ ದುಗ್ಗುಮನೆ
|

Updated on:Jan 29, 2021 | 6:45 PM

Share

ಕೆಜಿಎಫ್​ ಚಾಪ್ಟರ್​ 2 ಟೀಸರ್​ ರಿಲೀಸ್​ ಆದ ನಂತರ ಸಿನಿಮಾದ ಹವಾ ಹೆಚ್ಚಿದೆ. ಟೀಸರ್​ ನೋಡಿದವರು ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂದು ತುದಿಗಾಲಿನಲ್ಲಿ ನಿಂತಿದ್ದರು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಚಿತ್ರದ ನಿರ್ದೇಶಕ ಪ್ರಶಾಂತ್​ ಸಿನಿಮಾ ರಿಲೀಸ್​ ದಿನಾಂಕದ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

ಕೆಜಿಎಫ್​-2 ಜುಲೈ 16ರಂದು  ರಿಲೀಸ್​  ಆಗಲಿದೆ. ಈ ಮೊದಲು ಚಿತ್ರಮಂದಿರದಲ್ಲಿ ಶೇ.50 ಆಸನಗಳಿಗೆ ಮಾತ್ರ ಅವಕಾಶ ಇತ್ತು. ಆದರೆ, ಈಗ ಈ ನಿಯಮವನ್ನು ಕೇಂದ್ರ ಸರ್ಕಾರ ಸಡಿಲ ಮಾಡಿದೆ. ಜುಲೈ ವೇಳೆಗೆ ಶೇ. 100 ಆಸನ ವ್ಯವಸ್ಥೆಗೆ ಅವಕಾಶ ಮಾಡಿಕೊಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಇದು ಕೆಜಿಎಫ್​ ಸಿನಿಮಾಗೆ ಪ್ಲಸ್​ ಪಾಯಿಂಟ್ ಆಗಲಿದೆ​.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಕೆಜಿಎಫ್​-2 ದಸರಾ ಪ್ರಯುಕ್ತ ಕಳೆದ ಅಕ್ಟೋಬರ್​ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ಸೊಂಕು ಕಾಣಿಸಿಕೊಂಡಿದ್ದರಿಂದ ಅದು ಸಾಧ್ಯವಾಗಿರಲ್ಲ. ಈಗ ಸಿನಿಮಾ ರಿಲೀಸ್​ ಡೇಟ್​ ಘೋಷಣೆ ಆಗಿದ್ದು, ಸಿನಿ ಪ್ರಿಯರು ಸಖತ್​ ಖುಷಿ ಆಗಿದ್ದಾರೆ. ಒಂದೇ ಬಾರಿಗೆ ಐದು ಭಾಷೆಗಳಲ್ಲಿ ಕೆಜಿಎಫ್​-2 ರಿಲೀಸ್​ ಆಗ್ತಿರೋದು ವಿಶೇಷ.

https://twitter.com/hombalefilms/status/1355139129382735873/photo/1

ಕೆಜಿಎಫ್​ ಚಾಪ್ಟರ್​-2ನಲ್ಲಿ ಯಶ್​ ಲೀಡ್​ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಮುಖ ಖಳನಾಗಿ ಬಾಲಿವುಡ್​ ನಟ ಸಂಜಯ್​ ದತ್​ ಕಾಣಿಸಿಕೊಂಡಿದ್ದಾರೆ. ಹಿಂದಿ ನಟಿ ರವೀನಾ ಟಂಡನ್​ ಈ ಚಿತ್ರದಲ್ಲಿ ರಾಜಕಾರಣಿ ಪಾತ್ರ ಮಾಡಿದ್ದಾರೆ. ಯೂಟ್ಯೂಬ್​ನಲ್ಲಿ ಕೆಜಿಎಫ್​-2 ಸಿನಿಮಾ ಟೀಸರ್​ ದಾಖಲೆ ವೀಕ್ಷಣೆ ಕಂಡಿದೆ.

ಕೆಜಿಎಫ್ ಚಾಪ್ಟರ್​-2​ ಟೀಸರ್​ ಯೂಟ್ಯೂಬ್​ನಿಂದ ಗಳಿಸಿದ್ದೆಷ್ಟು ಗೊತ್ತಾ?

Published On - 6:32 pm, Fri, 29 January 21

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ