AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಘೋಷಣೆ​ ಆಯ್ತು ಕೆಜಿಎಫ್​ ಚಾಪ್ಟರ್​ 2 ರಿಲೀಸ್​ ದಿನಾಂಕ

KGF Chapter 2 Release Date: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಕೆಜಿಎಫ್​-2 ದಸರಾ ಪ್ರಯುಕ್ತ ಅಕ್ಟೋಬರ್​ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ಸೊಂಕು ಕಾಣಿಸಿಕೊಂಡಿದ್ದರಿಂದ ಅದು ಸಾಧ್ಯವಾಗಿರಲ್ಲ. ಈಗ ಸಿನಿಮಾ ರಿಲೀಸ್​ ಡೇಟ್​ ಘೋಷಣೆ ಆಗಿದ್ದು, ಸಿನಿ ಪ್ರಿಯರು ಸಖತ್​ ಖುಷಿ ಆಗಿದ್ದಾರೆ.

KGF Chapter 2: ಘೋಷಣೆ​ ಆಯ್ತು ಕೆಜಿಎಫ್​ ಚಾಪ್ಟರ್​ 2 ರಿಲೀಸ್​ ದಿನಾಂಕ
ಯಶ್​
ರಾಜೇಶ್ ದುಗ್ಗುಮನೆ
|

Updated on:Jan 29, 2021 | 6:45 PM

Share

ಕೆಜಿಎಫ್​ ಚಾಪ್ಟರ್​ 2 ಟೀಸರ್​ ರಿಲೀಸ್​ ಆದ ನಂತರ ಸಿನಿಮಾದ ಹವಾ ಹೆಚ್ಚಿದೆ. ಟೀಸರ್​ ನೋಡಿದವರು ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂದು ತುದಿಗಾಲಿನಲ್ಲಿ ನಿಂತಿದ್ದರು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಚಿತ್ರದ ನಿರ್ದೇಶಕ ಪ್ರಶಾಂತ್​ ಸಿನಿಮಾ ರಿಲೀಸ್​ ದಿನಾಂಕದ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

ಕೆಜಿಎಫ್​-2 ಜುಲೈ 16ರಂದು  ರಿಲೀಸ್​  ಆಗಲಿದೆ. ಈ ಮೊದಲು ಚಿತ್ರಮಂದಿರದಲ್ಲಿ ಶೇ.50 ಆಸನಗಳಿಗೆ ಮಾತ್ರ ಅವಕಾಶ ಇತ್ತು. ಆದರೆ, ಈಗ ಈ ನಿಯಮವನ್ನು ಕೇಂದ್ರ ಸರ್ಕಾರ ಸಡಿಲ ಮಾಡಿದೆ. ಜುಲೈ ವೇಳೆಗೆ ಶೇ. 100 ಆಸನ ವ್ಯವಸ್ಥೆಗೆ ಅವಕಾಶ ಮಾಡಿಕೊಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಇದು ಕೆಜಿಎಫ್​ ಸಿನಿಮಾಗೆ ಪ್ಲಸ್​ ಪಾಯಿಂಟ್ ಆಗಲಿದೆ​.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಕೆಜಿಎಫ್​-2 ದಸರಾ ಪ್ರಯುಕ್ತ ಕಳೆದ ಅಕ್ಟೋಬರ್​ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ಸೊಂಕು ಕಾಣಿಸಿಕೊಂಡಿದ್ದರಿಂದ ಅದು ಸಾಧ್ಯವಾಗಿರಲ್ಲ. ಈಗ ಸಿನಿಮಾ ರಿಲೀಸ್​ ಡೇಟ್​ ಘೋಷಣೆ ಆಗಿದ್ದು, ಸಿನಿ ಪ್ರಿಯರು ಸಖತ್​ ಖುಷಿ ಆಗಿದ್ದಾರೆ. ಒಂದೇ ಬಾರಿಗೆ ಐದು ಭಾಷೆಗಳಲ್ಲಿ ಕೆಜಿಎಫ್​-2 ರಿಲೀಸ್​ ಆಗ್ತಿರೋದು ವಿಶೇಷ.

https://twitter.com/hombalefilms/status/1355139129382735873/photo/1

ಕೆಜಿಎಫ್​ ಚಾಪ್ಟರ್​-2ನಲ್ಲಿ ಯಶ್​ ಲೀಡ್​ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಮುಖ ಖಳನಾಗಿ ಬಾಲಿವುಡ್​ ನಟ ಸಂಜಯ್​ ದತ್​ ಕಾಣಿಸಿಕೊಂಡಿದ್ದಾರೆ. ಹಿಂದಿ ನಟಿ ರವೀನಾ ಟಂಡನ್​ ಈ ಚಿತ್ರದಲ್ಲಿ ರಾಜಕಾರಣಿ ಪಾತ್ರ ಮಾಡಿದ್ದಾರೆ. ಯೂಟ್ಯೂಬ್​ನಲ್ಲಿ ಕೆಜಿಎಫ್​-2 ಸಿನಿಮಾ ಟೀಸರ್​ ದಾಖಲೆ ವೀಕ್ಷಣೆ ಕಂಡಿದೆ.

ಕೆಜಿಎಫ್ ಚಾಪ್ಟರ್​-2​ ಟೀಸರ್​ ಯೂಟ್ಯೂಬ್​ನಿಂದ ಗಳಿಸಿದ್ದೆಷ್ಟು ಗೊತ್ತಾ?

Published On - 6:32 pm, Fri, 29 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ