AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​-2 ಹಿಂದಿ ಅವತರಣಿಕೆ​ಗೆ ಯಶ್​ ಡಬ್​ ಮಾಡ್ತಾರಾ?; ಇಲ್ಲಿದೆ ಉತ್ತರ

ಕೆಜಿಎಫ್​ ಚಾಪ್ಟರ್​ 1 ಹಿಂದಿ ವರ್ಷನ್​ಗೆ ರಾಕಿ ಪಾತ್ರಕ್ಕೆ ಸಚಿನ್​ ಗೋಲೆ ಅವರು ಕಂಠದಾನ ಮಾಡಿದ್ದರು. ಅವರ ವಾಯ್ಸ್​ ಎಲ್ಲರಿಗೂ ಇಷ್ಟವಾಗಿತ್ತು.

ಕೆಜಿಎಫ್​-2 ಹಿಂದಿ ಅವತರಣಿಕೆ​ಗೆ ಯಶ್​ ಡಬ್​ ಮಾಡ್ತಾರಾ?; ಇಲ್ಲಿದೆ ಉತ್ತರ
ಯಶ್
ರಾಜೇಶ್ ದುಗ್ಗುಮನೆ
|

Updated on: Apr 24, 2021 | 5:48 PM

Share

ಕೆಜಿಎಫ್ ಚಾಪ್ಟರ್- 1 ಸ್ಯಾಂಡಲ್​ವುಡ್​ ಮಾತ್ರವಲ್ಲ ಟಾಲಿವುಡ್​, ಕಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ಈಗ ಕೆಜಿಎಫ್-2 ಸಿನಿಮಾ ನೋಡೋಕೆ ಎಲ್ಲರೂ ಕಾತುರರಾಗಿದ್ದಾರೆ. ಸಿನಿಮಾ ಜುಲೈ 12ರಂದು ತೆರೆಗೆ ಬರುತ್ತಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ಕೆಜಿಎಫ್​-2ಗೆ ಯಾರು ಡಬ್​ ಮಾಡಲಿದ್ದಾರೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಕೆಜಿಎಫ್​ ಚಾಪ್ಟರ್​ 1 ಹಿಂದಿ ವರ್ಷನ್​ಗೆ ರಾಕಿ ಪಾತ್ರಕ್ಕೆ ಸಚಿನ್​ ಗೋಲೆ ಅವರು ಕಂಠದಾನ ಮಾಡಿದ್ದರು. ಅವರ ವಾಯ್ಸ್​ ಎಲ್ಲರಿಗೂ ಇಷ್ಟವಾಗಿತ್ತು. ಈಗ ಕೆಜಿಎಫ್​ 2 ಮೇಲೆ ಭಾರೀ ನಿರೀಕ್ಷೆ ಇರುವುದರಿಂದ ಯಶ್​ ಅವರೇ ಡಬ್​ ಮಾಡಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಯಶ್ ಅವರೇ ಹಿಂದಿಗೆ ಡಬ್​ ಮಾಡಲಿ ಎಂಬುದು ಅನೇಕರ ಬೇಡಿಕೆ ಕೂಡ ಹೌದು.

ಇತ್ತೀಚೆಗೆ ಯಶ್​ ಕನ್ನಡದ ಡಬ್ಬಿಂಗ್​ ಕೆಲಸ ಪೂರ್ಣಗೊಳಿಸಿದ್ದರು. ಈ ವೇಳೆ ಅವರು ಹಿಂದಿ ಭಾಷೆಗೂ ಡಬ್​ ಮಾಡಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಸಾಕಷ್ಟು ದಕ್ಷಿಣ ಭಾರತದ ಸಿನಿಮಾಗಳನ್ನು ಹಿಂದಿಗೆ ಡಬ್​ ಮಾಡಿದ ಖ್ಯಾತ ಕಂಠದಾನಿ ಸಂಕೇತ್​ ಮಾತ್ರೆ ಈ ಬಗ್ಗೆ ಮಾತನಾಡಿದ್ದಾರೆ. ಸಚಿನ್​ ಗೋಲಿ ಅವರು ಕೆಜಿಎಫ್​-1 ಅಲ್ಲಿ ಯಶ್​ಗೆ ಕಂಠದಾನ ಮಾಡಿದ್ದರು. ಕೆಜಿಎಫ್​-2ಗೂ ಅವರೆ ಕಂಠದಾನ ಮಾಡಬಹುದು ಎನ್ನುವ ನಿರೀಕ್ಷೆ ನನ್ನದು. ಆದರೆ, ಯಾರು ಕಂಠದಾನ ಮಾಡಬೇಕು ಎಂಬುದನ್ನು ಚಿತ್ರತಂಡವೇ ನಿರ್ಧಾರ ಮಾಡಬೇಕು ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಕೊರೊನಾ ಅಬ್ಬರ ಹೀಗೆಯೇ ಮುಂದುವರಿದರೆ ಕೆಜಿಎಫ್​ 2 ರಿಲೀಸ್​ ದಿನಾಂಕ ಪೋಸ್ಟ್​ಪೋನ್​ ಆಗುತ್ತದೆಯಂತೆ. ದೀಪಾವಳಿಗೆ ಸಿನಿಮಾ ರಿಲೀಸ್​ ಆದರೂ ಆಗಬಹುದು. ​ಯಶ್​ಗೆ ಡಿಸೆಂಬರ್ ಲಕ್ಕಿ. ಹೀಗಾಗಿ, ಡಿಸೆಂಬರ್​​ವರೆಗೆ ಕಾಯುವಂತೆಯೂ ಚಿತ್ರತಂಡ ಪ್ರೇಕ್ಷಕರ ಬಳಿ ಮನವಿ ಮಾಡಿಕೊಳ್ಳಬಹುದು.  ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ