AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಂದ್ಮೇಲೆ ಹೋಗೋ ಜಾಯಮಾನ ಅಲ್ಲ’; ಮುಂದಿನ ಸಿನಿಮಾ ಬಗ್ಗೆ ಅಪ್​ಡೇಟ್ ಕೊಟ್ಟ ಪುಷ್ಪಾ

ಪುಷ್ಪಾ ಅವರು ತಮ್ಮ ಇತ್ತೀಚಿನ ಚಿತ್ರ "ಕೊತ್ತಲವಾಡಿ"ಯ ಯಶಸ್ಸಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದಲ್ಲಿ ಶಾಶ್ವತವಾಗಿ ಉಳಿಯುವ ಉದ್ದೇಶ ಹೊಂದಿರುವ ಅವರು, ಹಣ ಸಂಪಾದನೆಗಾಗಿ ಈ ಕ್ಷೇತ್ರಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭವಿಷ್ಯದಲ್ಲಿ ಶರಣ್ ಅವರೊಂದಿಗೆ ಚಿತ್ರ ನಿರ್ಮಿಸುವ ಯೋಜನೆಗಳನ್ನು ಅವರು ತಿಳಿಸಿದ್ದಾರೆ.

‘ಬಂದ್ಮೇಲೆ ಹೋಗೋ ಜಾಯಮಾನ ಅಲ್ಲ’; ಮುಂದಿನ ಸಿನಿಮಾ ಬಗ್ಗೆ ಅಪ್​ಡೇಟ್ ಕೊಟ್ಟ ಪುಷ್ಪಾ
ಕುಟುಂಬದ ಜೊತೆ ಪುಷ್ಪ
ರಾಜೇಶ್ ದುಗ್ಗುಮನೆ
|

Updated on: Aug 06, 2025 | 8:44 AM

Share

ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ (Kothalavadi) ಸಿನಿಮಾ ರಿಲೀಸ್ ಆಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ರಿಲೀಸ್ ಬಳಿಕ ಪುಷ್ಪಾ ಅವರು ಖುಷಿಯಲ್ಲಿದ್ದಾರೆ. ಈ ಸಿನಿಮಾನ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಮಾಡಿದ ಸಿನಿಮಾ ಎಂದಿದ್ದಾರೆ. ಅಲ್ಲದೆ, ನಿರ್ಮಾಣಕ್ಕೆ ಇಳಿದ ಬಳಿಕ ಮತ್ತೆ ಹಿಂದಿರುಗಿ ಹೋಗುವ ಮಾತೇ ಇಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

‘ಕೊತ್ತಲವಾಡಿ’ ಸಿನಿಮಾ ರಿಲೀಸ್ ಬಳಿಕ ‘ಕನ್ನಡ ಪಿಚ್ಚರ್’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಬಂದಮೇಲೆ ಹೋಗೋ ಜಾಯಮಾನ ಅಲ್ಲ. ಯಶ್ ಅಂದು ಎಲ್ಲೋ ಇದ್ದ. ಈಗ ಅವನು ಎಲ್ಲಿದ್ದಾನೆ ಗೊತ್ತಲ್ಲ. ಆಡಿಕೊಳ್ಳುವವರನ್ನು ಮೆಟ್ಟಿ ನಿಲ್ಲಬೇಕು. ಹಾಸನದಲ್ಲಿ ತೋಟ ತೆಗೆದುಕೊಂಡಾಗ ಸಾಕಷ್ಟು ತೊಂದರೆ ಕೊಟ್ಟರು. ಆದರೆ, ಈಗ ಕಾಡನ್ನು ನಾಡು ಮಾಡಿದ್ದಾರೆ ಎಂದು ಹೊಗಳುತ್ತಾರೆ’ ಎಂದಿದ್ದಾರೆ ಪುಷ್ಪಾ.

‘ನಾನು ಅಣ್ಣಾವ್ರ ಅಭಿಮಾನಿ. ಅವರು ಮೆಸೇಜ್ ಕೊಡುವ ಸಿನಿಮಾಗಳನ್ನು ಮಾಡುತ್ತಿದ್ದರು. ನಾನು ಕೂಡ ಅದೇ ರೀತಿಯ ಸಿನಿಮಾಗಳನ್ನು ಮಾಡುತ್ತೇನೆ. ಸಂದೇಶ ಕೊಡೋ ಚಿತ್ರಗಳನ್ನು ಮಾಡೋದೆ ನನ್ನ ಉದ್ದೇಶ. ಶರಣ್ ಜೊತೆ ಸಿನಿಮಾ ಮಾಡಬೇಕಿದೆ. ಶ್ರೀರಾಜ್ ಅವರೇ ಆ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕುಳಿತುಕೊಂಡು ಕಥೆಯನ್ನು ಇನ್ನಷ್ಟು ಉತ್ತಮ ಮಾಡುತ್ತೇವೆ. ತರಾತುರಿ ಮಾಡಲ್ಲ’ ಎಂದಿದ್ದಾರೆ ಪುಷ್ಪಾ.

ಇದನ್ನೂ ಓದಿ
Image
ಜೂ. ಎನ್​ಟಿಆರ್​ಗೆ ಸಿದ್ಧತೆಯೇ ಬೇಡ; ಡ್ಯಾನ್ಸ್ ಸ್ಟೆಪ್ ನೋಡಿ ದಂಗಾದ ಹೃತಿಕ್
Image
ರಾಜ್ ಬಿ. ಶೆಟ್ಟಿ ಬಳಿ ಇವೆ ಮೂರು ಅದ್ಭುತ ಪ್ರಾಜೆಕ್ಟ್​​ಗಳು; ಇಲ್ಲಿದೆ ವಿವರ
Image
‘ಸು ಫ್ರಮ್ ಸೋ’ ಹೊಸ ದಾಖಲೆ; ಸತತ 9 ದಿನ 3+ ಕೋಟಿ ರೂಪಾಯಿ ಕಲೆಕ್ಷನ್
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

ಪುಷ್ಪಾ ಸಂದರ್ಶನ

‘ನಾನು ಹಣ ಮಾಡಬೇಕು ಎಂದು ಇಲ್ಲಿಗೆ ಬಂದಿಲ್ಲ. ಹಣ ಮಾಡೋದು ನನ್ನ ಉದ್ದೇಶ ಅಲ್ಲ. ಹಣ ಇಂದಲ್ಲ ನಾಳೆ ಬಂದೇ ಬರುತ್ತದೆ. ನಾನು ಬೇರೆ ಕಡೆಯಿಂದ ಹಣ ತಂದು ಸಿನಿಮಾ ಮಾಡವಷ್ಟು ಕ್ಯಾಪ್ಯಾಸಿಟಿ ನನ್ನ ಬಳಿ ಇದೆ’ ಎನ್ನುತ್ತಾರೆ ಪುಷ್ಪಾ.

ಇದನ್ನೂ ಓದಿ: ‘ಕೊತ್ತಲವಾಡಿ’ ಸಿನಿಮಾದಲ್ಲಿ ಬಳಕೆ ಆಗಿದೆ ಯಶ್ ಖರೀದಿಸಿದ್ದ ಮೊದಲ ಬೈಕ್

‘ಕೊತ್ತಲವಾಡಿ’ ಸಿನಿಮಾ ಶ್ರೀರಾಜು ನಿರ್ದೇಶನ ಮಾಡಿದ್ದಾರೆ. ಪೃಥ್ವಿ ಅಂಬರ್, ಕಾವ್ಯಾ ಶೈವ, ಗೋಪಾಲ್ ದೇಶಪಾಂಡೆ, ರಾಜೇಶ್ ನಟರಂಗ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ