AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊತ್ತಲವಾಡಿ’ ಟೀಸರ್​ ಬಿಡುಗಡೆ; ಇದು ಯಶ್ ತಾಯಿ ಪುಷ್ಪ ನಿರ್ಮಾಣದ ಸಿನಿಮಾ

ಪೃಥ್ವಿ ಅಂಬಾರ್‌ ಮತ್ತು ಕಾವ್ಯಾ ಶೈವ ಅವರು ‘ಕೊತ್ತಲವಾಡಿ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಯಶ್ ತಾಯಿ ಪುಷ್ಪ ಅರುಣ್​ ಕುಮಾರ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಮುಂತಾದ ಅನುಭವಿ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

‘ಕೊತ್ತಲವಾಡಿ’ ಟೀಸರ್​ ಬಿಡುಗಡೆ; ಇದು ಯಶ್ ತಾಯಿ ಪುಷ್ಪ ನಿರ್ಮಾಣದ ಸಿನಿಮಾ
Kothalavadi Movie Team
ಮದನ್​ ಕುಮಾರ್​
|

Updated on: May 21, 2025 | 6:33 PM

Share

‘ರಾಕಿಂಗ್ ಸ್ಟಾರ್’ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ (Pushpa Arunkumar) ಇತ್ತೀಚೆಗೆ ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದರು. ಅವರ ‘ಪಿಎ ಪ್ರೊಡಕ್ಷನ್ಸ್’ ಸಂಸ್ಥೆಯಿಂದ ‘ಕೊತ್ತಲವಾಡಿ’ (Kothalavadi) ಸಿನಿಮಾ ಸಿದ್ಧವಾಗುತ್ತಿದೆ. ಇದು ಅವರ ಮೊದಲ ಸಿನಿಮಾ. ಈ ಚಿತ್ರದ ಟೀಸರ್‌ ರಿಲೀಸ್ ಕಾರ್ಯಕ್ರಮ ಮೇ 21ರಂದು ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಯಶ್‌ ತಂದೆ ಅರುಣ್‌ ಕುಮಾರ್‌, ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌, ಪೃಥ್ವಿ ಅಂಬಾರ್‌ (Pruthvi Ambaar), ಕಾವ್ಯಾ ಶೈವ, ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ, ನಿರ್ದೇಶಕ ಶ್ರೀರಾಜ್ ಮುಂತಾದವರು ಪಾಲ್ಗೊಂಡಿದ್ದರು. ಶರಣ್‌ ಅವರು ಟೀಸರ್‌ ಬಿಡುಗಡೆ ಮಾಡಿ ಶುಭ ಕೋರಿದರು.

ಶರಣ್ ಅವರು ಟೀಸರ್‌ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಆಗಿದ್ದರು. ‘ಒಂದು ಹೊಸ ಶುರುವಿನ ವೈಬ್‌ ಇಲ್ಲಿ ಕಾಣುತ್ತಿದೆ. ನಮ್ಮ ಯಶಸ್ಸಿನ ಗುಟ್ಟು ಈ ಒಗ್ಗಟ್ಟಿನ ಸಾಕ್ಷಿ. ಈ ಸಿನಿಮಾಗೆ ಕೆಲಸ ಮಾಡಿರುವವರ ಮುಖದಲ್ಲಿ ಪಾಸಿಟಿವ್‌ ಎನರ್ಜಿ, ಕುತೂಹಲ, ಭಕ್ತಿ, ಆತ್ಮೀಯತೆ, ಪ್ರೀತಿ ಕಾಣುತ್ತಿದೆ. ಒಂದು ಯಶಸ್ವಿಗೆ ಇಷ್ಟು ಸಾಕು’ ಎಂದು ಶರಣ್ ಹೇಳಿದರು.

ಪುಷ್ಪ ಅರುಣ್‌ ಕುಮಾರ್‌ ಅವರು ಈ ವೇಳೆ ಮಾತನಾಡಿದರು. ‘ಕೆಲಸ ಮಾತನಾಡಬೇಕು, ನಾವು ಮಾತನಾಡಬಾರದು. ಯಶ್‌ ಮನೆಯವರ ಸಿನಿಮಾ ಎಂದರೆ ಇಡೀ ದೇಶ ನೋಡುತ್ತದೆ. ಅದಕ್ಕೆ ತಕ್ಕ ರೀತಿ ಮಾಡಿ. ಇಲ್ದಿದ್ದರೆ ಮಾಡಬೇಡಿ. ಸಿನಿಮಾ ಏನು ಕೇಳುತ್ತದೆಯೋ ಅದನ್ನು ಕೊಡಬೇಕು. ಸಿನಿಮಾಗೆ ಮೋಸ ಮಾಡಬಾರದು ಅಂತ ಚಿತ್ರತಂಡಕ್ಕೆ ನಾನು ಹೇಳಿದ್ದೆ. ಪ್ರೇಕ್ಷಕರ ಪ್ರತಿಕ್ರಿಯೆ ನಾವು ಕಾಯುತ್ತೇವೆ’ ಎಂದಿದ್ದಾರೆ ಯಶ್ ತಾಯಿ ಪುಷ್ಪ ಅರುಣ್‌ ಕುಮಾರ್‌.

ಇದನ್ನೂ ಓದಿ
Image
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
Image
ಶಿವಣ್ಣನ ಮನೆಗೆ ಯಶ್-ರಾಧಿಕಾ ಪಂಡಿತ್ ಭೇಟಿ, ಇಲ್ಲಿವೆ ನೋಡಿ ಚಿತ್ರ
Image
ರಾಕಿಂಗ್ ಸ್ಟಾರ್ ಯಶ್ ಈ ವ್ಯಕ್ತಿಗೆ ಬಾಸ್ ಎಂದು ಕರೆಯುತ್ತಾರೆ ಯಶ್
Image
ಕಡಲ ತೀರದಲ್ಲಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ: ಇಲ್ಲಿವೆ ಚಿತ್ರ

ಕೊತ್ತಲವಾಡಿ ಟೀಸರ್‌:

‘ಕೊತ್ತಲವಾಡಿ’ ಸಿನಿಮಾದಲ್ಲಿ ಹಳ್ಳಿಯ ಕಹಾನಿ ಇದೆ. ಆ ಬಗ್ಗೆ ನಟ ಪೃಥ್ವಿ ಅಂಬಾರ್ ಹೇಳಿದ್ದಾರೆ. ‘ಹಳ್ಳಿಯ ಮುಗ್ಧ, ಪವರ್‌ ಫುಲ್‌ ಪಾತ್ರ ಮಾಡಬೇಕು ಎಂಬ ಆಸೆ ಇತ್ತು. ಈ ಚಿತ್ರದಲ್ಲಿ ಅದು ಸಾಧ್ಯವಾಗಿದೆ. ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ. ಸಿನಿಮಾ ಮುಗಿದರೂ ನಿರ್ಮಾಪಕರು ಯಾರು ಎಂಬುದು ಗೊತ್ತಿರಲಿಲ್ಲ. ನಂತರ ಪುಷ್ಪ ಮೇಡಂ ಅವರ ಹಾಸನದ ಮನೆಗೆ ಹೋದೆವು. ಮೀಟಿಂಗ್‌ ಮುಗಿಸಿ ಹೊರಟ ಬಳಿಕ ‘ನನ್ನ ಮಗನಿಗಿಂತ ಚೆನ್ನಾಗಿ ಬೆಳೆಯಪ್ಪ’ ಅಂತ ಆಶೀರ್ವಾದ ಮಾಡಿದರು. ಬ್ರ್ಯಾಗ್ರೌಂಡ್‌ ಇಲ್ಲದವರ ಜೊತೆಗೆ ಅವರು ನಿಲ್ಲುತ್ತಾರೆ ಎಂಬ ನಂಬಿಕೆ ಇದೆ’ ಎಂದರು ಪೃಥ್ವಿ ಅಂಬಾರ್.

ಇದನ್ನೂ ಓದಿ: ರಾಮಾಯಣ ಸಿನಿಮಾದಲ್ಲಿ ಯಶ್​ಗೆ ಕಾಜಲ್ ಅಗರ್​ವಾಲ್ ಜೋಡಿ; ಮಂಡೋದರಿ ಪಾತ್ರದಲ್ಲಿ ‘ಮಗಧೀರ’ ಚೆಲುವೆ

8 ತಿಂಗಳು ಸಮಯ ತೆಗೆದುಕೊಂಡು ನಿರ್ದೇಶಕ ಶ್ರೀರಾಜ್‌ ಅವರು ‘ಕೊತ್ತಲವಾಡಿ’ ಸಿನಿಮಾಗೆ ಕಥೆ ಸಿದ್ಧಪಡಿಸಿದ್ದರು. ಕಥೆ ಇಷ್ಡವಾಗಿ ಪುಷ್ಪ ಅರುಣ್ ಕುಮಾರ್ ಅವರು ನಿರ್ಮಾಣ ಮಾಡಿದರು. ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಅವರು ಮಾಸ್ ಆಗಿರುವ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಹಾಡುಗಳಿಗೆ ವಿಕಾಸ್‌ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್‌ ಕಶ್ಯಪ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು