AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸಿನಿಮಾ ಸೋಲಲು ಅವನೇ ಕಾರಣ: ಯಶ್ ತಾಯಿ ಪುಷ್ಪ ದೂರು ಯಾರ ಮೇಲೆ?

Yash mother: ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪಲತಾ ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಯ್ತು. ಇದೀಗ ಯಶ್ ತಾಯಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಮ್ಮ ಸಿನಿಮಾ ಸೋಲಿಗೆ ಖ್ಯಾತ ನಿರ್ಮಾಪಕರೊಬ್ಬರು ಕಾರಣವೆಂದು ಹೆಸರು ಹೇಳಿ ಆರೋಪ ಮಾಡಿದ್ದಾರೆ.

ನನ್ನ ಸಿನಿಮಾ ಸೋಲಲು ಅವನೇ ಕಾರಣ: ಯಶ್ ತಾಯಿ ಪುಷ್ಪ ದೂರು ಯಾರ ಮೇಲೆ?
Yash Mother
ಮಂಜುನಾಥ ಸಿ.
|

Updated on:Aug 23, 2025 | 2:55 PM

Share

ಯಶ್ (Yash) ತಾಯಿ ಪುಷ್ಪಲತಾ ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಕೆಲ ದಿನಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಆದರೆ ಸಿನಿಮಾ ನಿರೀಕ್ಷಿತ ಪ್ರದರ್ಶನ ಕಾಣಲಿಲ್ಲ. ಸಿನಿಮಾ ಪ್ರಚಾರದ ವೇಳೆ ಪುಷ್ಪಲತಾ ಅವರು ನೀಡಿದ್ದ ಸಂದರ್ಶನಗಳು ಸಖತ್ ವೈರಲ್ ಆಗಿದ್ದವು. ಸಿನಿಮಾ ನಾಯಕರುಗಳಂತೆ ಸಿಡಿಗುಂಡಿನ ಉತ್ತರಗಳನ್ನು ಅವರು ಸಂದರ್ಶನಗಳ ವೇಳೆ ನೀಡಿದ್ದರು. ಸಿನಿಮಾ ಬಿಡುಗಡೆ ಆಗಿ ಫ್ಲಾಪ್ ಸಹ ಆಗಿದೆ. ಇದೀಗ ಪುಷ್ಪ ಅವರು ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಪಕ ಹಾಗೂ ವಿತರಕನೇ ತಮ್ಮ ಸಿನಿಮಾ ಸೋಲಿಗೆ ಕಾರಣ ಎಂದು ಹೆಸರು ಹೇಳಿ ಆರೋಪ ಮಾಡಿದ್ದಾರೆ.

ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿರುವ ನಿರ್ಮಾಪಕಿ ಪುಷ್ಪ, ‘ನಮ್ಮ ಸಿನಿಮಾ ಸೋಲಲು ಜನರು ಕಾರಣ ಅಲ್ಲ, ಬೇರೆ ಕಾರಣ ಇದೆ. ನಮ್ಮ ಸಿನಿಮಾಕ್ಕೆ ಚಿತ್ರಮಂದಿರ ಕೊಡದೆ ತೊಂದರೆ ಮಾಡಲಾಗಿದೆ. ಅದು ಯಾರೂ ಅಲ್ಲ ಕಾರ್ತಿಕ್, ಆ ವ್ಯಕ್ತಿ ತನ್ನ ಸಿನಿಮಾಕ್ಕೆ ಚಿತ್ರಮಂದಿರಗಳನ್ನು ಇಟ್ಟುಕೊಂಡು ನಮ್ಮ ಸಿನಿಮಾಕ್ಕೆ ಸರಿಯಾಗಿ ಚಿತ್ರಮಂದಿರಗಳನ್ನು ಕೊಡದೆ ತೊಂದರೆ ಕೊಟ್ಟಿದ್ದಾರೆ. ನಾನು ಹೆಸರು ಹೇಳಿಯೇ ಆರೋಪ ಮಾಡುತ್ತೀನಿ’ ಎಂದಿದ್ದಾರೆ. ಆ ಮೂಲಕ ಕೆಆರ್​ಜಿ ನಿರ್ಮಾಣ ಸಂಸ್ಥೆಯ ನಿರ್ಮಾಪಕ ಮತ್ತು ವಿತರಕ ಕಾರ್ತಿಕ್ ಗೌಡ ಮೇಲೆ ನೇರ ಆರೋಪ ಮಾಡಿದ್ದಾರೆ.

‘ನಾಳೆ ನನ್ನ ಸಿನಿಮಾಗಳು ಚೆನ್ನಾಗಿ ಹೋದಾಗ ನಾನು ಸಹ ಅವರಿಗೆ ಇದೇ ಕೆಲಸ ಕೊಡುತ್ತೇನೆ. ಅವರು ಮಾಡಿದ್ದು ಸಹಿಸಿಕೊಂಡು ಇರೋಕೆ ಬಂದವಳಲ್ಲ ನಾನು, ನನಗೆ ತಿರುಗಿ ಕೊಡೋದು ಗೊತ್ತು, ಅದೇ ಕೆಲಸವನ್ನು ನಾನು ಮಾಡುತ್ತೇನೆ. ಕಾರ್ತಿಕ್ ಮಾಡಿದ್ದಾನೆ ಎಂಬುದು ನನಗೆ ಗೊತ್ತು, ಅವರ ಹಿಂದೆ ಯಾರೋ ಇದ್ದು ಈ ಕೆಲಸ ಮಾಡಿಸಿದ್ದಾರೆ. ಅದು ಯಾರು ಎಂಬುದು ಸಹ ನನಗೆ ಗೊತ್ತು, ಮುಂದಿನ ದಿನಗಳಲ್ಲಿ ಅವರ ಹೆಸರನ್ನೂ ಸಹ ಮಾಧ್ಯಮಗಳ ಮುಂದೆ ತರುತ್ತೀನಿ’ ಎಂದಿದ್ದಾರೆ ಪುಷ್ಪಲತಾ.

ಇದನ್ನೂ ಓದಿ:ಎಲ್ಲೆ ಮೀರಿದ ಪುಷ್ಪಾ ಮಾತು; ಮಧ್ಯಸ್ಥಿಕೆಗೆ ಬರ್ತಾರಾ ರಾಕಿಂಗ್ ಸ್ಟಾರ್ ಯಶ್?

‘ಪ್ರಪಂಚ ಗುಂಡಗಿದೆ, ಇಂದು ನನಗೆ ಆಗಿದ್ದು ನಾಳೆ ಅವರಿಗೆ ಆಗಲಿದೆ. ಯಾರೋ ದುರುದ್ದೇಶದಿಂದಲೇ ಚಿತ್ರಮಂದಿರಗಳ ವಿಷಯದಲ್ಲಿ ನನ್ನನ್ನು ತುಳಿದಿದ್ದಾರೆ ಎಂಬುದು ನನಗೆ ಗೊತ್ತು. ಹಾಗೆಂದು ಹೆದರಿ ನಾನು ಹಿಂದಕ್ಕೆ ಹೋಗುವವಳಲ್ಲ. ನನ್ನನ್ನು ತುಳಿದಷ್ಟೂ ಸಹ ನಾನು ಎದುರು ನಿಂತುಕೊಳ್ಳುತ್ತೀನಿ. ನನ್ನ ಯಾರೂ ಕೆಣಕಬಾರದು, ಕೆಣಕಿದರೆ ನಾನಿನ್ನೂ ಡಬಲ್ ಆಗುತ್ತೀನಿ’ ಎಂದು ಎಚ್ಚರಿಕೆ ಕೊಟ್ಟಿದ್ದಾರೆ ಪುಷ್ಪ.

ಕೆಆರ್​ಜಿ ಸಂಸ್ಥೆ ನಿರ್ಮಾಣ ಮಾಡಿದ್ದ ‘ಎಕ್ಕ’ ಸಿನಿಮಾ ಜುಲೈ 18ಕ್ಕೆ ಬಿಡುಗಡೆ ಆಗಿತ್ತು. ಅದಾದ ಕೆಲ ದಿನಗಳ ಬಳಿಕ ಪುಷ್ಪ ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ಪುಷ್ಪ ಅವರ ಆರೋಪವೆಂದರೆ ‘ಎಕ್ಕ’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಕಾರಣದಿಂದಾಗಿ ಕಾರ್ತಿಕ್ ಅವರು ‘ಕೊತ್ತಲವಾಡಿ’ ಸಿನಿಮಾಕ್ಕೆ ಚಿತ್ರಮಂದಿರಗಳನ್ನು ಬಿಟ್ಟುಕೊಡಲಿಲ್ಲ ಎಂದಿದ್ದಾರೆ. ಆರೋಪದ ಬಗ್ಗೆ ಕಾರ್ತಿಕ್ ಈ ವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sat, 23 August 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ