AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಣ’ ಚಿತ್ರಕ್ಕೆ ಹೀರೋ ಆದ ಕೆ.ಮಂಜು ಪುತ್ರ ಶ್ರೇಯಸ್​; ಯಶ್​ ಸಿನಿಮಾ ನಿರ್ಮಾಪಕರು ಟೈಟಲ್​ ಬಿಟ್ಟುಕೊಟ್ಟಿದ್ದೇಕೆ?

‘ರಾಣ’ ಚಿತ್ರಕ್ಕೆ ಖ್ಯಾತ ನಿರ್ಮಾಪಕ ನಂದಕಿಶೋರ್​ ನಿರ್ದೇಶನ ಮಾಡುತ್ತಿದ್ದಾರೆ. ‘ರನ್ನ’, ‘ಪೊಗರು’ ಅಂಥ ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಖ್ಯಾತಿ ನಂದಕಿಶೋರ್​ಗೆ ಇದೆ. ಈಗ ಅವರು, ಶ್ರೇಯಸ್ ವೃತ್ತಿ ಜೀವನದ​ ಮೂರನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆಗಿದ್ದಾರೆ.

‘ರಾಣ’ ಚಿತ್ರಕ್ಕೆ ಹೀರೋ ಆದ ಕೆ.ಮಂಜು ಪುತ್ರ ಶ್ರೇಯಸ್​; ಯಶ್​ ಸಿನಿಮಾ ನಿರ್ಮಾಪಕರು ಟೈಟಲ್​ ಬಿಟ್ಟುಕೊಟ್ಟಿದ್ದೇಕೆ?
ಯಶ್​-ಶ್ರೇಯಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 01, 2021 | 6:08 PM

‘ರಾಣ’ ಚಿತ್ರದಲ್ಲಿ ‘ರಾಕಿಂಗ್​ ಸ್ಟಾರ್’​ ಯಶ್​ ನಟಿಸಬೇಕಿತ್ತು. ಆದರೆ, ಈ ಸಿನಿಮಾ ಟೈಟಲ್​ಅನ್ನು ಚಿತ್ರದ ನಿರ್ಮಾಪಕರು ಬಿಟ್ಟುಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್​ ನಟಿಸುತ್ತಿದ್ದಾರೆ. ಜುಲೈ 7ರಂದು ಸಿನಿಮಾದ ಮುಹೂರ್ತ ನಡೆಯಲಿದೆ. ನಂತರದ ಚಿತ್ರದ ಕೆಲಸಗಳು ಆರಂಭಗೊಳ್ಳಲಿವೆ.

‘ರಾಣ’ ಚಿತ್ರಕ್ಕೆ ಖ್ಯಾತ ನಿರ್ಮಾಪಕ ನಂದಕಿಶೋರ್​ ನಿರ್ದೇಶನ ಮಾಡುತ್ತಿದ್ದಾರೆ. ‘ರನ್ನ’, ‘ಪೊಗರು’ ಅಂಥ ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಖ್ಯಾತಿ ನಂದಕಿಶೋರ್​ಗೆ ಇದೆ. ಈಗ ಅವರು, ಶ್ರೇಯಸ್ ವೃತ್ತಿ ಜೀವನದ​ ಮೂರನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆಗಿದ್ದಾರೆ. ಈ ಚಿತ್ರವನ್ನು ನಿರ್ಮಾಪಕ ಕೆ.ಮಂಜು ಅರ್ಪಿಸುತ್ತಿದ್ದು, ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ರೇಶ್ಮಾ ನಾಣಯ್ಯ ನಾಯಕಿ. ಇಂದು (ಜುಲೈ 1) ಬೆಳಗ್ಗೆ ಬೆಂಗಳೂರಿನ ಮೋದಿ‌ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ಟೈಟಲ್​ ಲಾಂಚ್​ ನೆರವೇರಿದೆ.

‘ರಾಣ’ ಚಿತ್ರದ ಶೀರ್ಷಿಕೆ ಮೊದಲು ನಿರ್ಮಾಪಕ ರಮೇಶ್ ಕಶ್ಯಪ್ ಅವರ ಬಳಿಯಿತ್ತು. ಯಶ್ ಅವರು ‘ರಾಣ’ ಚಿತ್ರದಲ್ಲಿ ನಟಿಸಬೇಕಿತ್ತು. ಆದರೆ, ರಮೇಶ್ ಕಶ್ಯಪ್ ಅವರು ನಮಗಾಗಿ ಈ ಶೀರ್ಷಿಕೆ ಬಿಟ್ಟುಕೊಟ್ಟಿದ್ದಾರೆ. ಶೀರ್ಷಿಕೆ ನೀಡಿದ ರಮೇಶ್ ಕಶ್ಯಪ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಧನ್ಯವಾದ ಎಂದು ನಿರ್ಮಾಪಕ ಪುರುಷೋತ್ತಮ ಗುಜ್ಜಾಲ್, ಕೆ.ಮಂಜು ಹಾಗೂ ಶ್ರೇಯಸ್​  ತಿಳಿಸಿದ್ದಾರೆ.

ಚಂದನ್ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ‌. ಶೀಘ್ರವೇ ಈ ಚಿತ್ರದ ಕೆಲಸಗಳು ನಡೆಯಲಿವೆ.

ಶ್ರೇಯಸ್​ ಈ ಮೊದಲು ‘ಪಡ್ಡೆ ಹುಲಿ’ ಹಾಗೂ ‘ವಿಷ್ಣು ಪ್ರಿಯಾ’ ಚಿತ್ರಗಳಲ್ಲಿ ನಟಿಸಿದ್ದರು. ಈ ಎರಡೂ ಚಿತ್ರಗಳು ಹೇಳಿಕೊಳ್ಳುವಂಥ ಹೆಸರು ಮಾಡಿಲ್ಲ. ಹೀಗಾಗಿ, ಅವರು ಮೂರನೇ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:  ಸಿನಿಮಾ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಬಂದ ಕೇಂದ್ರದ ವಿರುದ್ಧ ಕಿಡಿಕಾರಿದ ನಟಿ ರಮ್ಯಾ

ಧ್ರುವ ಸರ್ಜಾ ‘ದುಬಾರಿ’ ಆಲೋಚನೆ ಸದ್ಯಕ್ಕೆ ಕೈಬಿಟ್ಟ ನಿರ್ಮಾಪಕರು; ಚಿತ್ರದಿಂದ ಹೊರನಡೆದ ನಿರ್ದೇಶಕ ನಂದ ಕಿಶೋರ್​?

ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ