AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಣ’ ಚಿತ್ರಕ್ಕೆ ಹೀರೋ ಆದ ಕೆ.ಮಂಜು ಪುತ್ರ ಶ್ರೇಯಸ್​; ಯಶ್​ ಸಿನಿಮಾ ನಿರ್ಮಾಪಕರು ಟೈಟಲ್​ ಬಿಟ್ಟುಕೊಟ್ಟಿದ್ದೇಕೆ?

‘ರಾಣ’ ಚಿತ್ರಕ್ಕೆ ಖ್ಯಾತ ನಿರ್ಮಾಪಕ ನಂದಕಿಶೋರ್​ ನಿರ್ದೇಶನ ಮಾಡುತ್ತಿದ್ದಾರೆ. ‘ರನ್ನ’, ‘ಪೊಗರು’ ಅಂಥ ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಖ್ಯಾತಿ ನಂದಕಿಶೋರ್​ಗೆ ಇದೆ. ಈಗ ಅವರು, ಶ್ರೇಯಸ್ ವೃತ್ತಿ ಜೀವನದ​ ಮೂರನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆಗಿದ್ದಾರೆ.

‘ರಾಣ’ ಚಿತ್ರಕ್ಕೆ ಹೀರೋ ಆದ ಕೆ.ಮಂಜು ಪುತ್ರ ಶ್ರೇಯಸ್​; ಯಶ್​ ಸಿನಿಮಾ ನಿರ್ಮಾಪಕರು ಟೈಟಲ್​ ಬಿಟ್ಟುಕೊಟ್ಟಿದ್ದೇಕೆ?
ಯಶ್​-ಶ್ರೇಯಸ್
TV9 Web
| Edited By: |

Updated on: Jul 01, 2021 | 6:08 PM

Share

‘ರಾಣ’ ಚಿತ್ರದಲ್ಲಿ ‘ರಾಕಿಂಗ್​ ಸ್ಟಾರ್’​ ಯಶ್​ ನಟಿಸಬೇಕಿತ್ತು. ಆದರೆ, ಈ ಸಿನಿಮಾ ಟೈಟಲ್​ಅನ್ನು ಚಿತ್ರದ ನಿರ್ಮಾಪಕರು ಬಿಟ್ಟುಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್​ ನಟಿಸುತ್ತಿದ್ದಾರೆ. ಜುಲೈ 7ರಂದು ಸಿನಿಮಾದ ಮುಹೂರ್ತ ನಡೆಯಲಿದೆ. ನಂತರದ ಚಿತ್ರದ ಕೆಲಸಗಳು ಆರಂಭಗೊಳ್ಳಲಿವೆ.

‘ರಾಣ’ ಚಿತ್ರಕ್ಕೆ ಖ್ಯಾತ ನಿರ್ಮಾಪಕ ನಂದಕಿಶೋರ್​ ನಿರ್ದೇಶನ ಮಾಡುತ್ತಿದ್ದಾರೆ. ‘ರನ್ನ’, ‘ಪೊಗರು’ ಅಂಥ ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಖ್ಯಾತಿ ನಂದಕಿಶೋರ್​ಗೆ ಇದೆ. ಈಗ ಅವರು, ಶ್ರೇಯಸ್ ವೃತ್ತಿ ಜೀವನದ​ ಮೂರನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆಗಿದ್ದಾರೆ. ಈ ಚಿತ್ರವನ್ನು ನಿರ್ಮಾಪಕ ಕೆ.ಮಂಜು ಅರ್ಪಿಸುತ್ತಿದ್ದು, ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ರೇಶ್ಮಾ ನಾಣಯ್ಯ ನಾಯಕಿ. ಇಂದು (ಜುಲೈ 1) ಬೆಳಗ್ಗೆ ಬೆಂಗಳೂರಿನ ಮೋದಿ‌ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ಟೈಟಲ್​ ಲಾಂಚ್​ ನೆರವೇರಿದೆ.

‘ರಾಣ’ ಚಿತ್ರದ ಶೀರ್ಷಿಕೆ ಮೊದಲು ನಿರ್ಮಾಪಕ ರಮೇಶ್ ಕಶ್ಯಪ್ ಅವರ ಬಳಿಯಿತ್ತು. ಯಶ್ ಅವರು ‘ರಾಣ’ ಚಿತ್ರದಲ್ಲಿ ನಟಿಸಬೇಕಿತ್ತು. ಆದರೆ, ರಮೇಶ್ ಕಶ್ಯಪ್ ಅವರು ನಮಗಾಗಿ ಈ ಶೀರ್ಷಿಕೆ ಬಿಟ್ಟುಕೊಟ್ಟಿದ್ದಾರೆ. ಶೀರ್ಷಿಕೆ ನೀಡಿದ ರಮೇಶ್ ಕಶ್ಯಪ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಧನ್ಯವಾದ ಎಂದು ನಿರ್ಮಾಪಕ ಪುರುಷೋತ್ತಮ ಗುಜ್ಜಾಲ್, ಕೆ.ಮಂಜು ಹಾಗೂ ಶ್ರೇಯಸ್​  ತಿಳಿಸಿದ್ದಾರೆ.

ಚಂದನ್ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ‌. ಶೀಘ್ರವೇ ಈ ಚಿತ್ರದ ಕೆಲಸಗಳು ನಡೆಯಲಿವೆ.

ಶ್ರೇಯಸ್​ ಈ ಮೊದಲು ‘ಪಡ್ಡೆ ಹುಲಿ’ ಹಾಗೂ ‘ವಿಷ್ಣು ಪ್ರಿಯಾ’ ಚಿತ್ರಗಳಲ್ಲಿ ನಟಿಸಿದ್ದರು. ಈ ಎರಡೂ ಚಿತ್ರಗಳು ಹೇಳಿಕೊಳ್ಳುವಂಥ ಹೆಸರು ಮಾಡಿಲ್ಲ. ಹೀಗಾಗಿ, ಅವರು ಮೂರನೇ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:  ಸಿನಿಮಾ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಬಂದ ಕೇಂದ್ರದ ವಿರುದ್ಧ ಕಿಡಿಕಾರಿದ ನಟಿ ರಮ್ಯಾ

ಧ್ರುವ ಸರ್ಜಾ ‘ದುಬಾರಿ’ ಆಲೋಚನೆ ಸದ್ಯಕ್ಕೆ ಕೈಬಿಟ್ಟ ನಿರ್ಮಾಪಕರು; ಚಿತ್ರದಿಂದ ಹೊರನಡೆದ ನಿರ್ದೇಶಕ ನಂದ ಕಿಶೋರ್​?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್