AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ನ ಭೇಟಿಯಾದ್ರಾ ಯಶ್? ವೈರಲ್ ಫೋಟೋದ ಹಿಂದಿನ ಅಸಲಿಯತ್ತಿದು..

ಸದ್ದು ಗದ್ದಲ ಇಲ್ಲದೇ ‘ಟಾಕ್ಸಿಕ್’ ಸಿನಿಮಾದ ಕೆಲಸಗಳನ್ನು ಮಾಡಲಾಗುತ್ತಿದೆ. ‘ರಾಕಿಂಗ್​ ಸ್ಟಾರ್​’ ಯಶ್​ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರ ಕಾಂಬಿನೇಷನ್​ನಲ್ಲಿ ಸಿದ್ಧವಾಗುತ್ತಿದೆ. ಈ ಮಧ್ಯೆ ಯಶ್ ಅವರು ಸಲ್ಮಾನ್ ಖಾನ್​ನ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಸಲ್ಮಾನ್ ಖಾನ್​ನ ಭೇಟಿಯಾದ್ರಾ ಯಶ್? ವೈರಲ್ ಫೋಟೋದ ಹಿಂದಿನ ಅಸಲಿಯತ್ತಿದು..
ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Jul 30, 2024 | 8:39 AM

ನಟ ಯಶ್ ಅವರು ಇತ್ತೀಚೆಗೆ ಭರ್ಜರಿ ಸುದ್ದಿಯಲ್ಲಿ ಇದ್ದಾರೆ. ಅವರು ಲುಕ್ ಬದಲಾಯಿಸಿಕೊಂಡಿದ್ದು ಸಾಕಷ್ಟು ಚರ್ಚೆ ಆಗುತ್ತಿದೆ. ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ಈಗಾಗಲೇ ಎರಡು ವರ್ಷಗಳು ಕಳೆದಿವೆ. ಅಲ್ಲಿಂದ ಇಲ್ಲಿಯವರೆಗೆ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿಲ್ಲ. ಹೀಗಿರುವಾಗಲೇ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಅವರು ಸಲ್ಮಾನ್ ಖಾನ್ ಅವರ ಬಾಡಿಗಾರ್ಡ್ ಶೇರಾ ಜೊತೆ ಪೋಸ್ ಕೊಟ್ಟಿದ್ದಾರೆ.

ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಇತ್ತೀಚೆಗೆ ಅನಂತ್ ಅಂಬಾನಿ ಮನೆ ಮದುವೆಯಲ್ಲಿ ಯಶ್ ಕಾಣಿಸಿಕೊಂಡಿದ್ದರು. ಈ ವೇಳೆ ಅವರು ಉದ್ದ ಕೂದಲಿಗೆ ಕತ್ತರಿ ಹಾಕಿದ್ದು ಸ್ಪಷ್ಟವಾಗಿ ಕಾಣಿಸಿತ್ತು. ಇದು ‘ಟಾಕ್ಸಿಕ್’ ಸಿನಿಮಾ ಲುಕ್ ಎಂದು ಸ್ವತಃ ಹೇರ್​ ಸ್ಟೈಲಿಸ್ಟ್ ಖಚಿತಪಡಿಸಿದ್ದರು. ಈ ಮಧ್ಯೆ ಯಶ್ ಹಾಗೂ ಶೇರಾ ಪೋಸ್ ಕೊಟ್ಟಿರೋ ಫೋಟೋ ವೈರಲ್ ಆಗಿದೆ. ಈ ಫೋಟೋ ಹಂಚಿಕೊಂಡಿರೋ ಕೆಲವು ಫ್ಯಾನ್ಸ್, ‘ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಸಲ್ಮಾನ್ ಖಾನ್​ನ ಭೇಟಿ ಮಾಡಿದ ಯಶ್’ ಎಂದು ಬರೆದುಕೊಂಡಿದ್ದರು.

ಯಶ್ ಅವರ ಡ್ರೆಸ್ ನೋಡಿದರೆ ಒಂದು ವಿಚಾರ ಇಲ್ಲಿ ಸ್ಪಷ್ಟವಾಗುತ್ತದೆ. ಅವರು ಹಾಕಿರೋ ಬಟ್ಟೆ ಅನಂತ್ ಅಂಬಾನಿ ಮದುವೆ ಸಂದರ್ಭದ್ದು. ಅವರು ಮದುವೆಗೆ ಇದೇ ಗೆಟಪ್​ನಲ್ಲಿ ಬಂದಿದ್ದರು. ಅನಂತ್ ಅಂಬಾನಿ ಮದುವೆ ಸಂದರ್ಭದಲ್ಲಿ ಯಶ್ ಹಾಗೂ ಶೇರಾ ಪೋಸ್ ಕೊಟ್ಟಿಕೊಂಡಿದ್ದರು ಎನ್ನಲಾಗಿದೆ. ಇದನ್ನು ತಪ್ಪಾಗಿ ಪೋಸ್ಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: ‘ಟಾಕ್ಸಿಕ್​’ ಚಿತ್ರದ ರಿಲೀಸ್​ ದಿನಾಂಕ ಮುಂದಕ್ಕೆ? ಯಶ್​ ಸಿನಿಮಾ ತಡವಾಗುವ ಸೂಚನೆ 

ಇಷ್ಟೇ ಅಲ್ಲ, ಯಶ್ ಅವರ ಹೊಸ ಫೋಟೋ ಒಂದು ವೈರಲ್ ಆಗಿದೆ. ಇದರಲ್ಲಿ ಯಶ್ ಅವರ ಫಿಟ್ನೆಸ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಅವರು ಕಟ್ಟುಮಸ್ತಾದ ದೇಹ ಗಮನ ಸೆಳೆದಿದೆ. ಯಶ್ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ