AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ನ ಭೇಟಿಯಾದ್ರಾ ಯಶ್? ವೈರಲ್ ಫೋಟೋದ ಹಿಂದಿನ ಅಸಲಿಯತ್ತಿದು..

ಸದ್ದು ಗದ್ದಲ ಇಲ್ಲದೇ ‘ಟಾಕ್ಸಿಕ್’ ಸಿನಿಮಾದ ಕೆಲಸಗಳನ್ನು ಮಾಡಲಾಗುತ್ತಿದೆ. ‘ರಾಕಿಂಗ್​ ಸ್ಟಾರ್​’ ಯಶ್​ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರ ಕಾಂಬಿನೇಷನ್​ನಲ್ಲಿ ಸಿದ್ಧವಾಗುತ್ತಿದೆ. ಈ ಮಧ್ಯೆ ಯಶ್ ಅವರು ಸಲ್ಮಾನ್ ಖಾನ್​ನ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಸಲ್ಮಾನ್ ಖಾನ್​ನ ಭೇಟಿಯಾದ್ರಾ ಯಶ್? ವೈರಲ್ ಫೋಟೋದ ಹಿಂದಿನ ಅಸಲಿಯತ್ತಿದು..
ಯಶ್
ರಾಜೇಶ್ ದುಗ್ಗುಮನೆ
|

Updated on: Jul 30, 2024 | 8:39 AM

Share

ನಟ ಯಶ್ ಅವರು ಇತ್ತೀಚೆಗೆ ಭರ್ಜರಿ ಸುದ್ದಿಯಲ್ಲಿ ಇದ್ದಾರೆ. ಅವರು ಲುಕ್ ಬದಲಾಯಿಸಿಕೊಂಡಿದ್ದು ಸಾಕಷ್ಟು ಚರ್ಚೆ ಆಗುತ್ತಿದೆ. ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ಈಗಾಗಲೇ ಎರಡು ವರ್ಷಗಳು ಕಳೆದಿವೆ. ಅಲ್ಲಿಂದ ಇಲ್ಲಿಯವರೆಗೆ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿಲ್ಲ. ಹೀಗಿರುವಾಗಲೇ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಅವರು ಸಲ್ಮಾನ್ ಖಾನ್ ಅವರ ಬಾಡಿಗಾರ್ಡ್ ಶೇರಾ ಜೊತೆ ಪೋಸ್ ಕೊಟ್ಟಿದ್ದಾರೆ.

ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಇತ್ತೀಚೆಗೆ ಅನಂತ್ ಅಂಬಾನಿ ಮನೆ ಮದುವೆಯಲ್ಲಿ ಯಶ್ ಕಾಣಿಸಿಕೊಂಡಿದ್ದರು. ಈ ವೇಳೆ ಅವರು ಉದ್ದ ಕೂದಲಿಗೆ ಕತ್ತರಿ ಹಾಕಿದ್ದು ಸ್ಪಷ್ಟವಾಗಿ ಕಾಣಿಸಿತ್ತು. ಇದು ‘ಟಾಕ್ಸಿಕ್’ ಸಿನಿಮಾ ಲುಕ್ ಎಂದು ಸ್ವತಃ ಹೇರ್​ ಸ್ಟೈಲಿಸ್ಟ್ ಖಚಿತಪಡಿಸಿದ್ದರು. ಈ ಮಧ್ಯೆ ಯಶ್ ಹಾಗೂ ಶೇರಾ ಪೋಸ್ ಕೊಟ್ಟಿರೋ ಫೋಟೋ ವೈರಲ್ ಆಗಿದೆ. ಈ ಫೋಟೋ ಹಂಚಿಕೊಂಡಿರೋ ಕೆಲವು ಫ್ಯಾನ್ಸ್, ‘ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಸಲ್ಮಾನ್ ಖಾನ್​ನ ಭೇಟಿ ಮಾಡಿದ ಯಶ್’ ಎಂದು ಬರೆದುಕೊಂಡಿದ್ದರು.

ಯಶ್ ಅವರ ಡ್ರೆಸ್ ನೋಡಿದರೆ ಒಂದು ವಿಚಾರ ಇಲ್ಲಿ ಸ್ಪಷ್ಟವಾಗುತ್ತದೆ. ಅವರು ಹಾಕಿರೋ ಬಟ್ಟೆ ಅನಂತ್ ಅಂಬಾನಿ ಮದುವೆ ಸಂದರ್ಭದ್ದು. ಅವರು ಮದುವೆಗೆ ಇದೇ ಗೆಟಪ್​ನಲ್ಲಿ ಬಂದಿದ್ದರು. ಅನಂತ್ ಅಂಬಾನಿ ಮದುವೆ ಸಂದರ್ಭದಲ್ಲಿ ಯಶ್ ಹಾಗೂ ಶೇರಾ ಪೋಸ್ ಕೊಟ್ಟಿಕೊಂಡಿದ್ದರು ಎನ್ನಲಾಗಿದೆ. ಇದನ್ನು ತಪ್ಪಾಗಿ ಪೋಸ್ಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: ‘ಟಾಕ್ಸಿಕ್​’ ಚಿತ್ರದ ರಿಲೀಸ್​ ದಿನಾಂಕ ಮುಂದಕ್ಕೆ? ಯಶ್​ ಸಿನಿಮಾ ತಡವಾಗುವ ಸೂಚನೆ 

ಇಷ್ಟೇ ಅಲ್ಲ, ಯಶ್ ಅವರ ಹೊಸ ಫೋಟೋ ಒಂದು ವೈರಲ್ ಆಗಿದೆ. ಇದರಲ್ಲಿ ಯಶ್ ಅವರ ಫಿಟ್ನೆಸ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಅವರು ಕಟ್ಟುಮಸ್ತಾದ ದೇಹ ಗಮನ ಸೆಳೆದಿದೆ. ಯಶ್ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ