AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿ ಸುಬ್ಬಯ್ಯ ಮನೆ ಗೇಟಿಗೆ ಪಟಾಕಿ ಹಚ್ಚಿದ್ದ ಯಶ್; ಕಾರಣ ಏನು?

Yash-Nidhi Subbaiah: ಯಶ್ ನಟನೆಯ ‘ರಾಜಾ ಹುಲಿ’ ಸಿನಿಮಾ ನೆನಪಿದೆಯೇ? ಆ ಸಿನಿಮಾದ ರೀತಿಯೇ ನಿಜ ಜೀವನದಲ್ಲಿಯೂ ಯಶ್ ಗೆಳೆಯರಿಗಾಗಿ ಡೇರಿಂಗ್ ಕೆಲಸಗಳನ್ನು ಮಾಡಿದ್ದಾರೆ. ಒಮ್ಮೆಯಂತೂ ಯಾರೋ ಗೆಳೆಯ ಹೇಳಿದ ಎಂದು ಮೈಸೂರಿನಲ್ಲಿ ನಟಿ ನಿಧಿ ಸುಬ್ಬಯ್ಯ ಮನೆ ಮೇಲೆ ಪಟಾಕಿ ಸರ ಹಚ್ಚಿ ಎಸೆದಿದ್ದರಂತೆ.

ನಿಧಿ ಸುಬ್ಬಯ್ಯ ಮನೆ ಗೇಟಿಗೆ ಪಟಾಕಿ ಹಚ್ಚಿದ್ದ ಯಶ್; ಕಾರಣ ಏನು?
Yash Nidhi
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 21, 2025 | 4:09 PM

Share

ಯಶ್ ಅವರು ಶ್ರೀಮಂತ ಕುಟುಂಬ ಹಿನ್ನೆಲೆಯಿಂದ ಬಂದವರಲ್ಲ. ಅವರು ಸಾಕಷ್ಟು ಕಷ್ಟಗಳನ್ನು ನೋಡಿ ಆ ಬಳಿಕ ಚಿತ್ರರಂಗಕ್ಕೆ ಕಾಲಿಟ್ಟರು. ಯಶ್ ಅವರು ಕಾಲೇಜ್ನಲ್ಲಿ ಇರುವಾಗ ಎಲ್ಲಾ ಹುಡುಗರಂತೆ ತರಲೆಗಳನ್ನು ಮಾಡಿಕೊಂಡು ಬಂದವರು. ಈ ಬಗ್ಗೆ ಶೋ ಒಂದರಲ್ಲಿ ಯಶ್ ಹೇಳಿದ್ದರು. ಅಚ್ಚರಿಯ ವಿಚಾರ ಏನೆಂದರೆ ನಟಿ ನಿಧಿ ಸುಬ್ಬಯ್ಯ ಅವರ ಮನೆಯ ಗೇಟ್ಗೆ ಪಟಾಕಿ ಹಚ್ಚಿದ್ದರು. ಆಗಿನ್ನೂ ನಿಧಿ ಹೀರೋಯಿನ್ ಆಗಿರಲಿಲ್ಲ. ಈ ವಿಚಾರವನ್ನು ಈಗ ನೆನಪಿಸಿಕೊಳ್ಳೋಣ.

ಯಶ್ ಅವರು ಓದಿದ್ದು ಮೈಸೂರಿನಲ್ಲಿ. ಕಾಲೇಜ್ನಲ್ಲಿ ಇರುವಾಗ ಸಾಕಷ್ಟು ಫನ್ ಮೂಮೆಂಟ್ನ ಅವರು ಅನುಭವಿಸಿದ್ದಾರೆ. ಇದಕ್ಕಿಂತ ಮುಖ್ಯವಾಗಿ ಅವರು ಸಾಕಷ್ಟು ಫನ್ ಆ್ಯಕ್ಟಿವಿಟಿ ಕೂಡ ಮಾಡಿದ್ದರು ಎಂಬುದುನ್ನು ಇಲ್ಲಿ ಗಮನಿಸಬೇಕಾದ ವಿಚಾರ.

‘ಹುಡುಗಿ ಮನೆಗೆ ಪಟಾಕಿ ಹಚ್ಚಿದ್ದೆ. ಈ ಹುಡುಗಿ ಈಗ ನಟಿ. ಅವರು ಬೇರಾರೂ ಅಲ್ಲ ನಿಧಿ ಸುಬ್ಬಯ್ಯ. ಅವರು ನಮ್ಮ ಕಾಲೇಜ್ನಲ್ಲಿ ಓದಿದ್ದರು. ನನ್ನ ಫ್ರೆಂಡ್ ಲವ್ ಮಾಡ್ತಾ ಇದ್ದ. ಅವನಿಗೆ ನಾವು ಸಹಾಯ ಮಾಡುತ್ತಿದ್ದೆವು. ಆಗ ನಿಧಿ ಸುಬ್ಬಯ್ಯ ಈ ಹುಡುಗರು ಸರಿ ಇಲ್ಲ ಎಂದು ಫಿಟ್ಟಿಂಗ್ ಇಟ್ಟಿದ್ದರು. ಆಗ ನಾನು ಹಾಗೂ ನನ್ನ ಗೆಳೆಯರು ಹೋಗಿ ಅವರ ಮನೆಯ ಗೇಟ್ಗೆ ಪಟಾಕಿ ಹಚ್ಚಿದ್ದೆವು. ಬರುವಾಗ ಲೈಟ್ ಎಲ್ಲಾ ಆನ್ ಆಗಿತ್ತು. ಜಸ್ಟ್ ಮಿಸ್’ ಎಂದರು ಯಶ್.

‘ಸುಮಾರು ವರ್ಷ ಆದ ಬಳಿಕ ನಿಧಿ ಸಿಕ್ಕರು. ನೀವು ನನ್ನ ಕಾಲೇಜ್ ಅಲ್ಲಿ ಓದಿದ್ರಿ ಅಲ್ವಾ ಅಂತ ಕೇಳಿದ್ರು. ಸರಿಯಾಗಿ ನೆನಪು ಇಲ್ಲ ಎಂದರು. ಆಗ ನಾನು ಆ ಘಟನೆ ಹೇಳಿದೆ. ಇದು ನೆನಪಿರಬಹುದು ಇದೆಯಲ್ವ ಎಂದು ಕೇಳಿದೆ. ಅವರು ಹೌದು ಎಂದರು. ಅದನ್ನು ಮಾಡಿದ್ದು ನಾನೇ ಎಂದೆ’ ಎಂದು ಹಳೆಯ ಘಟನೆಯನ್ನು ಅವರು ಹೇಳಿದ್ದರು.

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಏಪ್ರಿಲ್ನಲ್ಲಿ ರಿಲೀಸ್ ಆಗಬೇಕಿತ್ತು. ಆದರೆ, ಅದು ಸದ್ಯಕ್ಕಂತೂ ಸಾಧ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಡಿಸೆಂಬರ್ನಲ್ಲಿ ಸಿನಿಮಾ ರಿಲೀಸ್ ಆಗೋ ಸಾಧ್ಯತೆ ಇದೆ. ನಿಧಿ ಸುಬ್ಬಯ್ಯ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಈ ಮೊದಲು ಬಿಗ್ ಬಾಸ್ಗೆ ಅವರು ಬಂದಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್