AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್​’ ಸಿನಿಮಾದ ಶೂಟಿಂಗ್​ ಸೆಟ್​ನಿಂದ ಯಶ್​ ಫೋಟೋಗಳು ಲೀಕ್​

ಯಶ್​ ನಟನೆಯ ‘ಟಾಕ್ಸಿಕ್​’ ಸಿನಿಮಾದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಚಿತ್ರತಂಡದಿಂದ ಸಿಗುವ ಅಪ್​ಡೇಟ್​ಗಳಿಗಾಗಿ ಅಭಿಮಾನಿಗಳು ಕಾದಿದ್ದಾರೆ. ಸದ್ಯ ಲೀಕ್​ ಆಗಿರುವ ಫೋಟೋ ಮತ್ತು ವಿಡಿಯೋವನ್ನು ಫ್ಯಾನ್ಸ್​ ಪೇಜ್​ಗಳಲ್ಲಿ ಹಂಚಿಕೊಳ್ಳಲಾಗಿದೆ. ಗೀತು ಮೋಹನ್​ದಾಸ್​ ಅವರ ನಿರ್ದೇಶನದಲ್ಲಿ ‘ಟಾಕ್ಸಿಕ್​’ ಸಿನಿಮಾ ಸಿದ್ಧವಾಗುತ್ತಿದೆ.

‘ಟಾಕ್ಸಿಕ್​’ ಸಿನಿಮಾದ ಶೂಟಿಂಗ್​ ಸೆಟ್​ನಿಂದ ಯಶ್​ ಫೋಟೋಗಳು ಲೀಕ್​
‘ಟಾಕ್ಸಿಕ್​’ ಚಿತ್ರೀಕರಣದ ಸೆಟ್​ನಿಂದ ಫೋಟೋ ಲೀಕ್​
ಮದನ್​ ಕುಮಾರ್​
|

Updated on: Mar 22, 2024 | 10:48 PM

Share

‘ರಾಕಿಂಗ್​ ಸ್ಟಾರ್​’ ಯಶ್ (Yash)​ ಅವರ ಸಂಪೂರ್ಣ ಗಮನ ಈಗ ‘ಟಾಕ್ಸಿಕ್​’ ಸಿನಿಮಾದ ಮೇಲಿದೆ. ಅಭಿಮಾನಿಗಳು ಸಹ ಹಗಲು-ರಾತ್ರಿ ಇದೇ ಸಿನಿಮಾದ ಜಪ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಬಹು ದೊಡ್ಡ ಗೆಲುವಿನ ಬಳಿಕ ಯಶ್​ ಒಪ್ಪಿಕೊಂಡ ಸಿನಿಮಾ ಎಂಬ ಕಾರಣಕ್ಕೆ ಟಾಕ್ಸಿಕ್​’ (Toxic Movie) ಸಿಕ್ಕಾಪಟ್ಟೆ ಹೈಪ್​ ಸೃಷ್ಟಿ ಮಾಡಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಗೋವಾದಲ್ಲಿ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ಲೀಕ್​ (Toxic Photo Leak) ಆಗಿವೆ.

ಯಶ್​ ಅವರ ಗುರಿ ದೊಡ್ಡದಾಗಿದೆ. ಯಾವಾಗಲೂ ಅವರು ದೊಡ್ಡದಾಗಿ ಆಲೋಚನೆ ಮಾಡುತ್ತಾರೆ. ಅವರ ಮುಂದಿನ ನಡೆ ಹೇಗಿರಲಿದೆ ಎಂಬುದೇ ಎಲ್ಲರ ಕೌತುಕ. ‘ಕೆಜಿಎಫ್​ 2’ ನಂತರ ‘ಟಾಕ್ಸಿಕ್’ ಸಿನಿಮಾ ಒಪ್ಪಿಕೊಳ್ಳಲು ಅವರು ಸಾಕಷ್ಟು ಸಮಯ ತೆಗೆದುಕೊಂಡರು. ಇದರ ಸಿದ್ಧತೆ ಜೋರಾಗಿ ನಡೆದಿತ್ತು. ಶೂಟಿಂಗ್​ ಕೂಡ ಅಷ್ಟೇ ಕಾಳಜಿಯಿಂದ ನಡೆಯುತ್ತಿದೆ. ಪ್ರತಿಯೊಂದು ಅಪ್​ಡೇಟ್​ ತಿಳಿಯಲು ಫ್ಯಾನ್ಸ್​​ ಕಾದಿದ್ದಾರೆ.

‘ಟಾಕ್ಸಿಕ್​’ ಸಿನಿಮಾದಲ್ಲಿ ಯಶ್​ ಜೊತೆ ಶಾರುಖ್​ ಖಾನ್​? ನಡೆದಿದೆ ದೊಡ್ಡ ಪ್ಲ್ಯಾನ್​

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದ ಬಳಿಕ ಯಶ್​ ಜೊತೆ ಸಿನಿಮಾ ಮಾಡಲು ಪರಭಾಷೆಯ ದೊಡ್ಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳು, ಅನೇಕ ಸ್ಟಾರ್​ ಡೈರೆಕ್ಟರ್​ಗಳು ಮುಂದೆ ಬಂದರು. ಆದರೆ ಯಶ್​ ಆಯ್ಕೆ ಬೇರೆಯೇ ಆಗಿತ್ತು. ‘ಕೆವಿಎನ್​ ಪ್ರೊಡಕ್ಷನ್ಸ್’ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ ಜೊತೆ ಅವರು ಕೈ ಜೋಡಿಸಿದರು. ಸದ್ಯಕ್ಕೆ ಈ ಚಿತ್ರತಂಡದಿಂದ ಹೊರಬಂದಿರುವುದು ಟೈಟಲ್​ ಟೀಸರ್​ ಮಾತ್ರ. ಅಷ್ಟರಲ್ಲೇ ಭಾರಿ ಹೈಪ್​ ಸೃಷ್ಟಿ ಆಗಿದೆ.

ಸದ್ಯ ‘ಟಾಕ್ಸಿಕ್​’ ಶೂಟಿಂಗ್​ ಸೆಟ್​ನಿಂದ ಲೀಕ್​ ಆಗಿರುವ ​ಫೋಟೋ ಮತ್ತು ವಿಡಿಯೋದಲ್ಲಿ ಹೆಚ್ಚೇನೂ ವಿಶೇಷತೆ ಇಲ್ಲ. ಆದರೂ ಯಶ್​ ಅಭಿಮಾನಿಗಳು ಅದನ್ನು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಹಬ್ಬ ಮಾಡುತ್ತಿದ್ದಾರೆ. ‘ನಾವು ದೊಡ್ಡ ಹಿಟ್​ ನಿರೀಕ್ಷಿಸಿದ್ದೇವೆ. ತುಂಬ ಎಗ್ಸೈಟ್​ ಆಗಿದ್ದೇವೆ’ ಎಂಬ ಕ್ಯಾಪ್ಷನ್​ನೊಂದಿಗೆ ಯಶ್​ ಅವರ ಫ್ಯಾನ್​ ಪೇಜ್​ನಲ್ಲಿ ಈ ಫೋಟೋವನ್ನು ಶೇರ್​ ಮಾಡಿಕೊಳ್ಳಲಾಗಿದೆ.

ಸಿನಿಮಾ ಕೆಲಸಗಳ ನಡುವೆ ಎಷ್ಟೇ ಬ್ಯುಸಿ ಇದ್ದರೂ ಕೂಡ ಯಶ್​ ಅವರು ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಾರೆ. ಇತ್ತೀಚೆಗೆ ರಾಧಿಕಾ ಪಂಡಿತ್​ ಅವರು ಕೆಲವು ಫೋಟೋ ಹಂಚಿಕೊಂಡಿದ್ದಾರೆ. ಯಶ್​ ಮತ್ತು ರಾಧಿಕಾ ದಂಪತಿಯ ಫೋಟೋವನ್ನು ಪುತ್ರಿ ಆಯ್ರಾ ಕ್ಲಿಕ್ಕಿಸಿದ್ದಾಳೆ. ‘ನನ್ನ ಹೊಸ ಪರ್ಸನಲ್​ ಫೋಟೋಗ್ರಾಫರ್​’ ಎಂದು ರಾಧಿಕಾ ಪಂಡಿತ್​ ಅವರು ಇದಕ್ಕೆ ಕ್ಯಾಪ್ಷನ್​ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು