AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​

ಯಶ್​ಗೆ ಮೊದಲಿನಿಂದಲೂ ಕೃಷಿ ಬಗ್ಗೆ ಆಸಕ್ತಿ ಇದೆ. ಅನೇಕ ಸಂದರ್ಶನಗಳಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಿದೆ. ನಟನೆಯ ಜತೆ ಜತೆಗೆ ಕೃಷಿಗೂ ಒತ್ತು ಕೊಡುವುದಾಗಿ ಅವರು ಈ ಮೊದಲು ಹೇಳಿದ್ದರು.

Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​
ಕೃಷಿ ಭೂಮಿಯಲ್ಲಿ ಯಶ್​
ರಾಜೇಶ್ ದುಗ್ಗುಮನೆ
|

Updated on: Apr 12, 2021 | 4:42 PM

Share

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಆದರೆ, ಈ ಪ್ರತಿಭಟನೆಗೆ ಕನ್ನಡ ಚಿತ್ರರಂಗದ ಸ್ಟಾರ್​​ಗಳು ಬೆಂಬಲವನ್ನೇ ನೀಡಿಲ್ಲ ಎನ್ನುವ ಮಾತು ಬಲವಾಗಿ ಕೇಳಿಬಂದಿತ್ತು. ಸ್ಟಾರ್​ಗಳು ಸಿನಿಮಾ ಮಾಡುತ್ತಾರೆ. ರೈತರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೊಗಳುತ್ತಾರೆ. ಆದರೆ ಅವರ ಬೆಂಬಲಕ್ಕೆ ಮಾತ್ರ ನಿಲ್ಲುವುದಿಲ್ಲ ಎನ್ನುವ ಆರೋಪವನ್ನು ಮಾಡಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಈಗ ಯಶ್​ ಸ್ವತಃ ರೈತನಾಗೋಕೆ ಹೊರಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅಭಿಮಾನಿಗಳ ಮನ ಗೆದ್ದಿದೆ. ಯಶ್​ಗೆ ಮೊದಲಿನಿಂದಲೂ ಕೃಷಿ ಬಗ್ಗೆ ಆಸಕ್ತಿ ಇದೆ. ಅನೇಕ ಸಂದರ್ಶನಗಳಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಿದೆ. ನಟನೆಯ ಜತೆ ಜತೆಗೆ ಕೃಷಿಗೂ ಒತ್ತು ಕೊಡುವುದಾಗಿ ಅವರು ಈ ಮೊದಲು ಹೇಳಿದ್ದರು. ಅಂತೆಯೇ, ಯಶ್​ ಹಾಸನದ ತಿಮ್ಲಾಪುರ ಬಳಿಯ ತಮ್ಮ ಜಮೀನಿನಲ್ಲಿ ಕೃಷಿ ಮಾಡೋಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಮಳೆಗಾಲ ಆರಂಭವಾಗೋಕೆ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ. ಮಳೆಗಾಲ ಬಂತೆಂದರೆ ಬಿತ್ತನೆಕಾರ್ಯ ಆರಂಭವಾಗುತ್ತದೆ. ಈಗಲೇ ಭೂಮಿ ಹದ ಮಾಡಿದರೆ ಮಳೆಗಾಲದಲ್ಲಿ ಕೃಷಿ ಆರಂಭಿಸಬಹುದು ಎಂಬುದು ಯಶ್​ ಆಲೋಚನೆ. ಇನ್ನು, ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಒಂದೊಮ್ಮೆ ಲಾಕ್​ಡೌನ್​ ಘೋಷಣೆ ಆದರೆ, ಯಶ್​ ಹಾಸನಕ್ಕೆ ತೆರಳಿ ಅಲ್ಲಿ ಕೃಷಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಯಶ್​ ಮುಂದಾಳತ್ವದಲ್ಲಿ ಜಮೀನನ್ನು ಸಮತಟ್ಟು ಮಾಡುವ ಕಾರ್ಯ ನಡೆಯುತ್ತಿದೆ. ಈ ಫೋಟೋಗಳನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ.

ಈ ಜಮೀನಿನಲ್ಲಿ ಮಾದರಿ ಕೃಷಿ ಮಾಡಬೇಕು ಎಂಬುದು ಯಶ್​ ಉದ್ದೇಶವಂತೆ. ಇಲ್ಲಿ ನೀರು ಮರುಪೂರ್ಣ ಮಾಡೋಕೆ ವ್ಯವಸ್ಥೆ, ಇಂಗು ಗುಂಡಿ ನಿರ್ಮಾಣ ಮತ್ತಿತ್ಯಾದಿ ಕೆಲಸ ಮಾಡೋ ಆಲೋಚನೆ ಅವರದ್ದು. ಇದರಿಂದ ಅಂತರ್ಜಲ ಹೆಚ್ಚೋಕೆ ಸಹಕಾರಿಯಾಗಲಿದೆ ಎಂಬುದು ಅವರ ಆಶಯ.

ಜಮೀನು ವಿವಾದದಲ್ಲಿ ಇತ್ತೀಚೆಗೆ ಯಶ್ ಹೆಸರು ಕೇಳಿ ಬಂದಿತ್ತು. ದೇವಸ್ಥಾನದ ಜಾಗವನ್ನು ಅವರು ಅತಿಕ್ರಮಿಸಿದ್ದಾರೆ ಎನ್ನುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದರು. ನಂತರ ಗ್ರಾಮಸ್ಥರು ಹಾಗೂ ಯಶ್ ತಂಡ ಮಾತುಕತೆ ನಡೆಸಿ ವಿವಾದವನ್ನು ಬಗೆಹರಿಸಿಕೊಂಡಿತ್ತು.

ಇದನ್ನೂ ಓದಿ: KGF-2 ಶೂಟಿಂಗ್ ಪೂರ್ಣವಾದರೂ ಯಶ್​ ಗಡ್ಡಕ್ಕಿಲ್ಲ ಕತ್ತರಿ; ರಾಕಿಂಗ್​ ಸ್ಟಾರ್​ ನಿರ್ಧಾರದ ಹಿಂದಿದೆ ಬಹುದೊಡ್ಡ ಕಾರಣ

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?