AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​

ಯಶ್​ಗೆ ಮೊದಲಿನಿಂದಲೂ ಕೃಷಿ ಬಗ್ಗೆ ಆಸಕ್ತಿ ಇದೆ. ಅನೇಕ ಸಂದರ್ಶನಗಳಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಿದೆ. ನಟನೆಯ ಜತೆ ಜತೆಗೆ ಕೃಷಿಗೂ ಒತ್ತು ಕೊಡುವುದಾಗಿ ಅವರು ಈ ಮೊದಲು ಹೇಳಿದ್ದರು.

Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​
ಕೃಷಿ ಭೂಮಿಯಲ್ಲಿ ಯಶ್​
ರಾಜೇಶ್ ದುಗ್ಗುಮನೆ
|

Updated on: Apr 12, 2021 | 4:42 PM

Share

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಆದರೆ, ಈ ಪ್ರತಿಭಟನೆಗೆ ಕನ್ನಡ ಚಿತ್ರರಂಗದ ಸ್ಟಾರ್​​ಗಳು ಬೆಂಬಲವನ್ನೇ ನೀಡಿಲ್ಲ ಎನ್ನುವ ಮಾತು ಬಲವಾಗಿ ಕೇಳಿಬಂದಿತ್ತು. ಸ್ಟಾರ್​ಗಳು ಸಿನಿಮಾ ಮಾಡುತ್ತಾರೆ. ರೈತರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೊಗಳುತ್ತಾರೆ. ಆದರೆ ಅವರ ಬೆಂಬಲಕ್ಕೆ ಮಾತ್ರ ನಿಲ್ಲುವುದಿಲ್ಲ ಎನ್ನುವ ಆರೋಪವನ್ನು ಮಾಡಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಈಗ ಯಶ್​ ಸ್ವತಃ ರೈತನಾಗೋಕೆ ಹೊರಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅಭಿಮಾನಿಗಳ ಮನ ಗೆದ್ದಿದೆ. ಯಶ್​ಗೆ ಮೊದಲಿನಿಂದಲೂ ಕೃಷಿ ಬಗ್ಗೆ ಆಸಕ್ತಿ ಇದೆ. ಅನೇಕ ಸಂದರ್ಶನಗಳಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಿದೆ. ನಟನೆಯ ಜತೆ ಜತೆಗೆ ಕೃಷಿಗೂ ಒತ್ತು ಕೊಡುವುದಾಗಿ ಅವರು ಈ ಮೊದಲು ಹೇಳಿದ್ದರು. ಅಂತೆಯೇ, ಯಶ್​ ಹಾಸನದ ತಿಮ್ಲಾಪುರ ಬಳಿಯ ತಮ್ಮ ಜಮೀನಿನಲ್ಲಿ ಕೃಷಿ ಮಾಡೋಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಮಳೆಗಾಲ ಆರಂಭವಾಗೋಕೆ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ. ಮಳೆಗಾಲ ಬಂತೆಂದರೆ ಬಿತ್ತನೆಕಾರ್ಯ ಆರಂಭವಾಗುತ್ತದೆ. ಈಗಲೇ ಭೂಮಿ ಹದ ಮಾಡಿದರೆ ಮಳೆಗಾಲದಲ್ಲಿ ಕೃಷಿ ಆರಂಭಿಸಬಹುದು ಎಂಬುದು ಯಶ್​ ಆಲೋಚನೆ. ಇನ್ನು, ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಒಂದೊಮ್ಮೆ ಲಾಕ್​ಡೌನ್​ ಘೋಷಣೆ ಆದರೆ, ಯಶ್​ ಹಾಸನಕ್ಕೆ ತೆರಳಿ ಅಲ್ಲಿ ಕೃಷಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಯಶ್​ ಮುಂದಾಳತ್ವದಲ್ಲಿ ಜಮೀನನ್ನು ಸಮತಟ್ಟು ಮಾಡುವ ಕಾರ್ಯ ನಡೆಯುತ್ತಿದೆ. ಈ ಫೋಟೋಗಳನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ.

ಈ ಜಮೀನಿನಲ್ಲಿ ಮಾದರಿ ಕೃಷಿ ಮಾಡಬೇಕು ಎಂಬುದು ಯಶ್​ ಉದ್ದೇಶವಂತೆ. ಇಲ್ಲಿ ನೀರು ಮರುಪೂರ್ಣ ಮಾಡೋಕೆ ವ್ಯವಸ್ಥೆ, ಇಂಗು ಗುಂಡಿ ನಿರ್ಮಾಣ ಮತ್ತಿತ್ಯಾದಿ ಕೆಲಸ ಮಾಡೋ ಆಲೋಚನೆ ಅವರದ್ದು. ಇದರಿಂದ ಅಂತರ್ಜಲ ಹೆಚ್ಚೋಕೆ ಸಹಕಾರಿಯಾಗಲಿದೆ ಎಂಬುದು ಅವರ ಆಶಯ.

ಜಮೀನು ವಿವಾದದಲ್ಲಿ ಇತ್ತೀಚೆಗೆ ಯಶ್ ಹೆಸರು ಕೇಳಿ ಬಂದಿತ್ತು. ದೇವಸ್ಥಾನದ ಜಾಗವನ್ನು ಅವರು ಅತಿಕ್ರಮಿಸಿದ್ದಾರೆ ಎನ್ನುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದರು. ನಂತರ ಗ್ರಾಮಸ್ಥರು ಹಾಗೂ ಯಶ್ ತಂಡ ಮಾತುಕತೆ ನಡೆಸಿ ವಿವಾದವನ್ನು ಬಗೆಹರಿಸಿಕೊಂಡಿತ್ತು.

ಇದನ್ನೂ ಓದಿ: KGF-2 ಶೂಟಿಂಗ್ ಪೂರ್ಣವಾದರೂ ಯಶ್​ ಗಡ್ಡಕ್ಕಿಲ್ಲ ಕತ್ತರಿ; ರಾಕಿಂಗ್​ ಸ್ಟಾರ್​ ನಿರ್ಧಾರದ ಹಿಂದಿದೆ ಬಹುದೊಡ್ಡ ಕಾರಣ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ