AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ ವೇಳೆ ಯಶ್ ಹಾಕುವ ಶ್ರಮ ಹೇಗಿರುತ್ತದೆ? ಇಲ್ಲಿದೆ ವಿಡಿಯೋ

‘ಕೆಜಿಎಫ್ 2’ ಯಶ್ ವೃತ್ತಿ ಜೀವನದ ಹಾಗೂ ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಬಿಸ್ನೆಸ್ ಮಾಡಿದ ಸಿನಿಮಾ. ಈ ಚಿತ್ರದಿಂದ ಯಶ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ‘ಕೆಜಿಎಫ್’ ಚಿತ್ರದ ಒಂದು ದೃಶ್ಯವನ್ನು ಈಗ ವೈರಲ್ ಮಾಡಲಾಗಿದೆ. ಇದು ಮೇಕಿಂಗ್ ವಿಡಿಯೋ. ಈ ವಿಡಿಯೋದಲ್ಲಿ ಯಶ್ ಹಾಕಿರೋ ಶ್ರಮ ಎದ್ದು ಕಾಣುತ್ತಿದೆ.

ಶೂಟಿಂಗ್​ ವೇಳೆ ಯಶ್ ಹಾಕುವ ಶ್ರಮ ಹೇಗಿರುತ್ತದೆ? ಇಲ್ಲಿದೆ ವಿಡಿಯೋ
ಯಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 12, 2024 | 7:44 AM

Share

ಯಶ್ ಅವರು ಇಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಇದರ ಹಿಂದೆ ಸಾಕಷ್ಟು ಶ್ರಮ ಇದೆ. ಅವರು ಕಿರುತೆರೆಯಿಂದ ಹಿರಿತೆರೆಗೆ ಕಾಲಿಟ್ಟವರು. ಸಾಕಷ್ಟು ಕಷ್ಟ ನೋಡಿ ಬಂದವರು. ಅವರ ಸಂದರ್ಶನಗಳನ್ನು ಹಾಕಲು ಆರಂಭದಲ್ಲಿ ಕೆಲ ವಾಹಿನಿಯವರು ನಿರಾಕರಿಸಿದ್ದರಂತೆ. ಈಗ ಅವರು ಸಂದರ್ಶನ ನೀಡುತ್ತಾರೆ ಎಂದರೆ ಎಲ್ಲರೂ ನಿಲ್ಲುತ್ತಾರೆ. ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಯಶ್ ಅವರು ಹಾಕುವ ಶ್ರಮ ಎಂಥದ್ದು ಎಂಬ ವಿಡಿಯೋ ಒಂದು ವೈರಲ್ ಆಗಿದೆ.

‘ಕೆಜಿಎಫ್ 2’ ಯಶ್ ವೃತ್ತಿ ಜೀವನದ ಹಾಗೂ ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಬಿಸ್ನೆಸ್ ಮಾಡಿದ ಸಿನಿಮಾ. ಈ ಚಿತ್ರದಿಂದ ಯಶ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ‘ಕೆಜಿಎಫ್’ ಚಿತ್ರದ ಒಂದು ದೃಶ್ಯವನ್ನು ಈಗ ವೈರಲ್ ಮಾಡಲಾಗಿದೆ. ಇದು ಮೇಕಿಂಗ್ ವಿಡಿಯೋ. ಈ ವಿಡಿಯೋದಲ್ಲಿ ಯಶ್ ಹಾಕಿರೋ ಶ್ರಮ ಎದ್ದು ಕಾಣುತ್ತಿದೆ.

ಗಣಿಗಾರಿಕೆ ನಡೆಯುವ ನರಾಚಿಗೆ ಯಶ್ ತೆರಳಿರುತ್ತಾರೆ. ಅಲ್ಲಿ ಮ್ಯಾಪ್ ಇರೋ ಜಾಗಕ್ಕೆ ಯಶ್ ಹೋಗಿರುತ್ತಾರೆ. ಈ ವೇಳೆ ಅವರು ತಪ್ಪಿಸಿಕೊಂಡು ಬರುವಾಗ ಯಶ್ ಟ್ರಕ್ ಅಡಿಗೆ ಹೋಗುವ ದೃಶ್ಯ ಇದೆ. ಇದನ್ನು ಮಾಡುವಾಗ ಯಶ್ ಸಾಕಷ್ಟು ತೊಂದರೆ ಅನುಭವಿಸಿದ್ದರು. ಯಶ್ ಕಿವಿಗೆ ಮರಳು ಕೂಡ ಹೋಗಿತ್ತು. ಆ ದೃಶ್ಯವನ್ನು ಈಗ ವೈರಲ್ ಮಾಡಲಾಗಿದೆ. ‘ಯಶ್ ಅವರ ಶ್ರಮ ನೋಡಿ’ ಎಂದು ಅನೇಕರು ಹೇಳಿದ್ದಾರೆ. ಯಶ್ ಅವರು ಇಲ್ಲಿ ಡೂಪ್​ ಬಳಸಬಹುದಿತ್ತು. ಆದರೆ, ಆ ರೀತಿ ಮಾಡಿಲ್ಲ.

ಯಶ್ ಅವರು ಪ್ರತಿ ದೃಶ್ಯವನ್ನು ಇಷ್ಟಪಟ್ಟು ಮಾಡುತ್ತಾರೆ. ಆ್ಯಕ್ಷನ್ ದೃಶ್ಯಗಳನ್ನು ಅವರು ಕಷ್ಟಪಟ್ಟು ಮಾಡುತ್ತಾರೆ. ಇದಕ್ಕಾಗಿ ಸಾಕಷ್ಟು ಸಿದ್ಧತೆ ಕೂಡ ಮಾಡುತ್ತಾರೆ. ಯಶ್ ಅವರು ಶೂಟಿಂಗ್ ವೇಳೆ ಹಾಕಿದ ಶ್ರಮ ಎದ್ದು ಕಾಣಿಸುತ್ತದೆ.

ಇದನ್ನೂ ಓದಿ: ಯಶ್​ಗೆ ಕನ್ನಡದಲ್ಲೇ ಪ್ರಶ್ನೆ ಕೇಳಿದ ಮುಂಬೈ ವ್ಯಕ್ತಿ; ರಾಕಿಂಗ್ ಸ್ಟಾರ್ ಉತ್ತರ ಹೇಗಿತ್ತು?

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಮಲಯಾಳಂನ ಗೀತು ಮೋಹನ್​ದಾಸ್ ಅವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಇದರ ನಿರ್ಮಾಣ ಮಾಡುತ್ತಿದೆ. ತಮಿಳಿನ ನಯನತಾರಾ ಹಾಗೂ ಹಿಂದಿಯ ಕಿಯಾರಾ ಅಡ್ವಾಣಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ, ಹಿಂದಿಯ ರಾಮಾಯಣ ಚಿತ್ರಕ್ಕೆ ಅವರು ನಿರ್ಮಾಪಕರು ಕೂಡ ಹೌದು. ಈ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಹಲವು ಪಾರ್ಟ್​​ಗಳಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​