AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ ವೇಳೆ ಯಶ್ ಹಾಕುವ ಶ್ರಮ ಹೇಗಿರುತ್ತದೆ? ಇಲ್ಲಿದೆ ವಿಡಿಯೋ

‘ಕೆಜಿಎಫ್ 2’ ಯಶ್ ವೃತ್ತಿ ಜೀವನದ ಹಾಗೂ ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಬಿಸ್ನೆಸ್ ಮಾಡಿದ ಸಿನಿಮಾ. ಈ ಚಿತ್ರದಿಂದ ಯಶ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ‘ಕೆಜಿಎಫ್’ ಚಿತ್ರದ ಒಂದು ದೃಶ್ಯವನ್ನು ಈಗ ವೈರಲ್ ಮಾಡಲಾಗಿದೆ. ಇದು ಮೇಕಿಂಗ್ ವಿಡಿಯೋ. ಈ ವಿಡಿಯೋದಲ್ಲಿ ಯಶ್ ಹಾಕಿರೋ ಶ್ರಮ ಎದ್ದು ಕಾಣುತ್ತಿದೆ.

ಶೂಟಿಂಗ್​ ವೇಳೆ ಯಶ್ ಹಾಕುವ ಶ್ರಮ ಹೇಗಿರುತ್ತದೆ? ಇಲ್ಲಿದೆ ವಿಡಿಯೋ
ಯಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 12, 2024 | 7:44 AM

Share

ಯಶ್ ಅವರು ಇಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಇದರ ಹಿಂದೆ ಸಾಕಷ್ಟು ಶ್ರಮ ಇದೆ. ಅವರು ಕಿರುತೆರೆಯಿಂದ ಹಿರಿತೆರೆಗೆ ಕಾಲಿಟ್ಟವರು. ಸಾಕಷ್ಟು ಕಷ್ಟ ನೋಡಿ ಬಂದವರು. ಅವರ ಸಂದರ್ಶನಗಳನ್ನು ಹಾಕಲು ಆರಂಭದಲ್ಲಿ ಕೆಲ ವಾಹಿನಿಯವರು ನಿರಾಕರಿಸಿದ್ದರಂತೆ. ಈಗ ಅವರು ಸಂದರ್ಶನ ನೀಡುತ್ತಾರೆ ಎಂದರೆ ಎಲ್ಲರೂ ನಿಲ್ಲುತ್ತಾರೆ. ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಯಶ್ ಅವರು ಹಾಕುವ ಶ್ರಮ ಎಂಥದ್ದು ಎಂಬ ವಿಡಿಯೋ ಒಂದು ವೈರಲ್ ಆಗಿದೆ.

‘ಕೆಜಿಎಫ್ 2’ ಯಶ್ ವೃತ್ತಿ ಜೀವನದ ಹಾಗೂ ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಬಿಸ್ನೆಸ್ ಮಾಡಿದ ಸಿನಿಮಾ. ಈ ಚಿತ್ರದಿಂದ ಯಶ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ‘ಕೆಜಿಎಫ್’ ಚಿತ್ರದ ಒಂದು ದೃಶ್ಯವನ್ನು ಈಗ ವೈರಲ್ ಮಾಡಲಾಗಿದೆ. ಇದು ಮೇಕಿಂಗ್ ವಿಡಿಯೋ. ಈ ವಿಡಿಯೋದಲ್ಲಿ ಯಶ್ ಹಾಕಿರೋ ಶ್ರಮ ಎದ್ದು ಕಾಣುತ್ತಿದೆ.

ಗಣಿಗಾರಿಕೆ ನಡೆಯುವ ನರಾಚಿಗೆ ಯಶ್ ತೆರಳಿರುತ್ತಾರೆ. ಅಲ್ಲಿ ಮ್ಯಾಪ್ ಇರೋ ಜಾಗಕ್ಕೆ ಯಶ್ ಹೋಗಿರುತ್ತಾರೆ. ಈ ವೇಳೆ ಅವರು ತಪ್ಪಿಸಿಕೊಂಡು ಬರುವಾಗ ಯಶ್ ಟ್ರಕ್ ಅಡಿಗೆ ಹೋಗುವ ದೃಶ್ಯ ಇದೆ. ಇದನ್ನು ಮಾಡುವಾಗ ಯಶ್ ಸಾಕಷ್ಟು ತೊಂದರೆ ಅನುಭವಿಸಿದ್ದರು. ಯಶ್ ಕಿವಿಗೆ ಮರಳು ಕೂಡ ಹೋಗಿತ್ತು. ಆ ದೃಶ್ಯವನ್ನು ಈಗ ವೈರಲ್ ಮಾಡಲಾಗಿದೆ. ‘ಯಶ್ ಅವರ ಶ್ರಮ ನೋಡಿ’ ಎಂದು ಅನೇಕರು ಹೇಳಿದ್ದಾರೆ. ಯಶ್ ಅವರು ಇಲ್ಲಿ ಡೂಪ್​ ಬಳಸಬಹುದಿತ್ತು. ಆದರೆ, ಆ ರೀತಿ ಮಾಡಿಲ್ಲ.

ಯಶ್ ಅವರು ಪ್ರತಿ ದೃಶ್ಯವನ್ನು ಇಷ್ಟಪಟ್ಟು ಮಾಡುತ್ತಾರೆ. ಆ್ಯಕ್ಷನ್ ದೃಶ್ಯಗಳನ್ನು ಅವರು ಕಷ್ಟಪಟ್ಟು ಮಾಡುತ್ತಾರೆ. ಇದಕ್ಕಾಗಿ ಸಾಕಷ್ಟು ಸಿದ್ಧತೆ ಕೂಡ ಮಾಡುತ್ತಾರೆ. ಯಶ್ ಅವರು ಶೂಟಿಂಗ್ ವೇಳೆ ಹಾಕಿದ ಶ್ರಮ ಎದ್ದು ಕಾಣಿಸುತ್ತದೆ.

ಇದನ್ನೂ ಓದಿ: ಯಶ್​ಗೆ ಕನ್ನಡದಲ್ಲೇ ಪ್ರಶ್ನೆ ಕೇಳಿದ ಮುಂಬೈ ವ್ಯಕ್ತಿ; ರಾಕಿಂಗ್ ಸ್ಟಾರ್ ಉತ್ತರ ಹೇಗಿತ್ತು?

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಮಲಯಾಳಂನ ಗೀತು ಮೋಹನ್​ದಾಸ್ ಅವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಇದರ ನಿರ್ಮಾಣ ಮಾಡುತ್ತಿದೆ. ತಮಿಳಿನ ನಯನತಾರಾ ಹಾಗೂ ಹಿಂದಿಯ ಕಿಯಾರಾ ಅಡ್ವಾಣಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ, ಹಿಂದಿಯ ರಾಮಾಯಣ ಚಿತ್ರಕ್ಕೆ ಅವರು ನಿರ್ಮಾಪಕರು ಕೂಡ ಹೌದು. ಈ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಹಲವು ಪಾರ್ಟ್​​ಗಳಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?