AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಬಿಗ್ ಬಜೆಟ್​ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ ಯಶ್? ರಾಕಿಂಗ್ ಸ್ಟಾರ್ ನೀಡಿದ ಕಾರಣ ಏನು?

‘ಕೆಜಿಎಫ್ 2’ ತೆರೆಗೆ ಬಂದ ನಂತರದಲ್ಲಿ ಯಶ್ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿತು. ಅವರು ದೊಡ್ಡ ದೊಡ್ಡ ಚಿತ್ರಗಳನ್ನು ಮಾಡುವತ್ತ ಆಸಕ್ತಿ ತೋರುತ್ತಿದ್ದಾರೆ. ಈ ಕಾರಣಕ್ಕೆ ಹೊಸ ಸಿನಿಮಾ ಘೋಷಣೆ ವಿಳಂಬ ಆಗುತ್ತಿದೆ ಎನ್ನಲಾಗಿದೆ.

ಹಿಂದಿ ಬಿಗ್ ಬಜೆಟ್​ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ ಯಶ್? ರಾಕಿಂಗ್ ಸ್ಟಾರ್ ನೀಡಿದ ಕಾರಣ ಏನು?
TV9 Web
| Edited By: |

Updated on:Nov 05, 2022 | 1:40 PM

Share

ಯಶ್ ಅವರು ಸದ್ಯ ‘ಕೆಜಿಎಫ್ 2’ (KGF: Chapter 2) ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಅವರು ಆದಷ್ಟು ಬೇಗ ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಸದ್ಯಕ್ಕಂತೂ ಈ ಬಗ್ಗೆ ಘೋಷಣೆ ಆಗುವ ಸೂಚನೆ ಸಿಕ್ಕಿಲ್ಲ. ಈ ಮಧ್ಯೆ ಹೊಸ ವದಂತಿ ಒಂದು ಹುಟ್ಟಿಕೊಂಡಿದೆ. ಯಶ್ (Yash) ಅವರು ‘ಬ್ರಹ್ಮಾಸ್ತ್ರ ಪಾರ್ಟ್​ 2: ದೇವ್​’ ಚಿತ್ರದ ಆಫರ್ ಅನ್ನು ರಿಜೆಕ್ಟ್ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಸದ್ಯದ ಮಟ್ಟಿಗೆ ಇದು ವದಂತಿ. ಈ ವಿಚಾರದಲ್ಲಿ ಯಾರಾದರೂ ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಬಾಲಿವುಡ್​ಗೆ ಗ್ರಹಣ ಹಿಡಿದಿದೆ. ರಿಲೀಸ್ ಆದ ಯಾವ ಚಿತ್ರಗಳೂ ಯಶಸ್ಸು ಕಾಣುತ್ತಿಲ್ಲ. ಈ ವರ್ಷ ಹಿಟ್ ಆದ ಕೆಲವೇ ಕೆಲವು ಸಿನಿಮಾಗಳ ಸಾಲಿನಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರಕ್ಕೆ ಕರಣ್​ ಜೋಹರ್ ಮೊದಲಾದವರು ಬಂಡವಾಳ ಹೂಡಿದ್ದರು. ರಣಬೀರ್ ಕಪೂರ್-ಆಲಿಯಾ ಭಟ್ ಜತೆ ದಕ್ಷಿಣದ ನಟರು ನಟಿಸಿದ್ದರು. ಈಗ ‘ಬ್ರಹ್ಮಾಸ್ತ್ರ 2’ ಕೆಲಸಗಳು ನಡೆಯುತ್ತಿವೆ. ಈ ಚಿತ್ರದಲ್ಲಿ ದೇವ್ ಪಾತ್ರ ಮಾಡಲು ಯಶ್​​ಗೆ ಆಫರ್ ನೀಡಲಾಗಿತ್ತು ಎನ್ನಲಾಗಿದೆ. ಆದರೆ, ಯಶ್ ಅವರು ಈ ಆಫರ್ ರಿಜೆಕ್ಟ್ ಮಾಡಿದ್ದಾರೆ. ಇದಕ್ಕೆ ಅವರು ಕಾರಣ ಕೂಡ ನೀಡಿದ್ದಾರೆ.

‘ಕೆಜಿಎಫ್ 2’ ತೆರೆಗೆ ಬಂದ ನಂತರದಲ್ಲಿ ಯಶ್ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿತು. ಅವರು ದೊಡ್ಡ ದೊಡ್ಡ ಚಿತ್ರಗಳನ್ನು ಮಾಡುವತ್ತ ಆಸಕ್ತಿ ತೋರುತ್ತಿದ್ದಾರೆ. ಈ ಕಾರಣಕ್ಕೆ ಹೊಸ ಸಿನಿಮಾ ಘೋಷಣೆ ವಿಳಂಬ ಆಗುತ್ತಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಅಯಾನ್ ಮುಖರ್ಜಿ ಹಾಗೂ ಕರಣ್ ಅವರು ‘ಬ್ರಹ್ಮಾಸ್ತ್ರ 2’ ಬಗ್ಗೆ ಯಶ್ ಜತೆ ಚರ್ಚೆ ಮಾಡಿದ್ದರು. ಆದರೆ, ಯಶ್ ಈ ಚಿತ್ರದಲ್ಲಿ ನಟಿಸಲು ನೋ ಎಂದಿದ್ದಾರೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಇದನ್ನೂ ಓದಿ: ರಾಕಿಂಗ್ ಸ್ಟಾರ್ ಯಶ್ ಹೇಳಿದ ಮಾತನ್ನು ನಿಜ ಮಾಡಲು ಹೊರಟ ಅಪ್ಪುವಿನ ‘ಗಂಧದ ಗುಡಿ’

ಯಶ್ ಅವರು ‘ಕೆಜಿಎಫ್ 2’ ಚಿತ್ರಕ್ಕಿಂತ ದೊಡ್ಡದನ್ನು ಏನಾದರೂ ಮಾಡಲು ನೋಡುತ್ತಿದ್ದಾರೆ. ‘ಬ್ರಹ್ಮಾಸ್ತ್ರ 2’ ಆ ಮಟ್ಟಕ್ಕೆ ನಿಲ್ಲಲು ಸಾಧ್ಯವಿಲ್ಲ ಅನ್ನೋದು ಯಶ್ ಅಭಿಪ್ರಾಯ ಎನ್ನಲಾಗಿದೆ. ಅಲ್ಲದೆ, ಈಗ ಗುರುತಿಸಿಕೊಂಡಿರುವ ಫ್ರಾಂಚೈಸಿಯಲ್ಲಿ ನಟಿಸೋಕೆ  ಅವರಿಗೆ ಇಷ್ಟ ಇಲ್ಲ. ಹೀಗಾಗಿ ಅವರು ಆಫರ್ ರಿಜೆಕ್ಟ್ ಮಾಡಿದ್ದಾರೆ ಎಂದು ವರದಿ ಆಗಿದೆ.

Published On - 1:29 pm, Sat, 5 November 22

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ