AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಬಿಗ್ ಬಜೆಟ್​ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ ಯಶ್? ರಾಕಿಂಗ್ ಸ್ಟಾರ್ ನೀಡಿದ ಕಾರಣ ಏನು?

‘ಕೆಜಿಎಫ್ 2’ ತೆರೆಗೆ ಬಂದ ನಂತರದಲ್ಲಿ ಯಶ್ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿತು. ಅವರು ದೊಡ್ಡ ದೊಡ್ಡ ಚಿತ್ರಗಳನ್ನು ಮಾಡುವತ್ತ ಆಸಕ್ತಿ ತೋರುತ್ತಿದ್ದಾರೆ. ಈ ಕಾರಣಕ್ಕೆ ಹೊಸ ಸಿನಿಮಾ ಘೋಷಣೆ ವಿಳಂಬ ಆಗುತ್ತಿದೆ ಎನ್ನಲಾಗಿದೆ.

ಹಿಂದಿ ಬಿಗ್ ಬಜೆಟ್​ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ ಯಶ್? ರಾಕಿಂಗ್ ಸ್ಟಾರ್ ನೀಡಿದ ಕಾರಣ ಏನು?
TV9 Web
| Edited By: |

Updated on:Nov 05, 2022 | 1:40 PM

Share

ಯಶ್ ಅವರು ಸದ್ಯ ‘ಕೆಜಿಎಫ್ 2’ (KGF: Chapter 2) ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಅವರು ಆದಷ್ಟು ಬೇಗ ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಸದ್ಯಕ್ಕಂತೂ ಈ ಬಗ್ಗೆ ಘೋಷಣೆ ಆಗುವ ಸೂಚನೆ ಸಿಕ್ಕಿಲ್ಲ. ಈ ಮಧ್ಯೆ ಹೊಸ ವದಂತಿ ಒಂದು ಹುಟ್ಟಿಕೊಂಡಿದೆ. ಯಶ್ (Yash) ಅವರು ‘ಬ್ರಹ್ಮಾಸ್ತ್ರ ಪಾರ್ಟ್​ 2: ದೇವ್​’ ಚಿತ್ರದ ಆಫರ್ ಅನ್ನು ರಿಜೆಕ್ಟ್ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಸದ್ಯದ ಮಟ್ಟಿಗೆ ಇದು ವದಂತಿ. ಈ ವಿಚಾರದಲ್ಲಿ ಯಾರಾದರೂ ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಬಾಲಿವುಡ್​ಗೆ ಗ್ರಹಣ ಹಿಡಿದಿದೆ. ರಿಲೀಸ್ ಆದ ಯಾವ ಚಿತ್ರಗಳೂ ಯಶಸ್ಸು ಕಾಣುತ್ತಿಲ್ಲ. ಈ ವರ್ಷ ಹಿಟ್ ಆದ ಕೆಲವೇ ಕೆಲವು ಸಿನಿಮಾಗಳ ಸಾಲಿನಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರಕ್ಕೆ ಕರಣ್​ ಜೋಹರ್ ಮೊದಲಾದವರು ಬಂಡವಾಳ ಹೂಡಿದ್ದರು. ರಣಬೀರ್ ಕಪೂರ್-ಆಲಿಯಾ ಭಟ್ ಜತೆ ದಕ್ಷಿಣದ ನಟರು ನಟಿಸಿದ್ದರು. ಈಗ ‘ಬ್ರಹ್ಮಾಸ್ತ್ರ 2’ ಕೆಲಸಗಳು ನಡೆಯುತ್ತಿವೆ. ಈ ಚಿತ್ರದಲ್ಲಿ ದೇವ್ ಪಾತ್ರ ಮಾಡಲು ಯಶ್​​ಗೆ ಆಫರ್ ನೀಡಲಾಗಿತ್ತು ಎನ್ನಲಾಗಿದೆ. ಆದರೆ, ಯಶ್ ಅವರು ಈ ಆಫರ್ ರಿಜೆಕ್ಟ್ ಮಾಡಿದ್ದಾರೆ. ಇದಕ್ಕೆ ಅವರು ಕಾರಣ ಕೂಡ ನೀಡಿದ್ದಾರೆ.

‘ಕೆಜಿಎಫ್ 2’ ತೆರೆಗೆ ಬಂದ ನಂತರದಲ್ಲಿ ಯಶ್ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿತು. ಅವರು ದೊಡ್ಡ ದೊಡ್ಡ ಚಿತ್ರಗಳನ್ನು ಮಾಡುವತ್ತ ಆಸಕ್ತಿ ತೋರುತ್ತಿದ್ದಾರೆ. ಈ ಕಾರಣಕ್ಕೆ ಹೊಸ ಸಿನಿಮಾ ಘೋಷಣೆ ವಿಳಂಬ ಆಗುತ್ತಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಅಯಾನ್ ಮುಖರ್ಜಿ ಹಾಗೂ ಕರಣ್ ಅವರು ‘ಬ್ರಹ್ಮಾಸ್ತ್ರ 2’ ಬಗ್ಗೆ ಯಶ್ ಜತೆ ಚರ್ಚೆ ಮಾಡಿದ್ದರು. ಆದರೆ, ಯಶ್ ಈ ಚಿತ್ರದಲ್ಲಿ ನಟಿಸಲು ನೋ ಎಂದಿದ್ದಾರೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಇದನ್ನೂ ಓದಿ: ರಾಕಿಂಗ್ ಸ್ಟಾರ್ ಯಶ್ ಹೇಳಿದ ಮಾತನ್ನು ನಿಜ ಮಾಡಲು ಹೊರಟ ಅಪ್ಪುವಿನ ‘ಗಂಧದ ಗುಡಿ’

ಯಶ್ ಅವರು ‘ಕೆಜಿಎಫ್ 2’ ಚಿತ್ರಕ್ಕಿಂತ ದೊಡ್ಡದನ್ನು ಏನಾದರೂ ಮಾಡಲು ನೋಡುತ್ತಿದ್ದಾರೆ. ‘ಬ್ರಹ್ಮಾಸ್ತ್ರ 2’ ಆ ಮಟ್ಟಕ್ಕೆ ನಿಲ್ಲಲು ಸಾಧ್ಯವಿಲ್ಲ ಅನ್ನೋದು ಯಶ್ ಅಭಿಪ್ರಾಯ ಎನ್ನಲಾಗಿದೆ. ಅಲ್ಲದೆ, ಈಗ ಗುರುತಿಸಿಕೊಂಡಿರುವ ಫ್ರಾಂಚೈಸಿಯಲ್ಲಿ ನಟಿಸೋಕೆ  ಅವರಿಗೆ ಇಷ್ಟ ಇಲ್ಲ. ಹೀಗಾಗಿ ಅವರು ಆಫರ್ ರಿಜೆಕ್ಟ್ ಮಾಡಿದ್ದಾರೆ ಎಂದು ವರದಿ ಆಗಿದೆ.

Published On - 1:29 pm, Sat, 5 November 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ