ಸ್ಟಾರ್ ಆಗುವುದಕ್ಕೂ ಮೊದಲು ಈ ಕಲಾವಿದರು ಮಾಡುತ್ತಿದ್ದ ಕೆಲಸಗಳೇನು ಗೊತ್ತಾ?

ಯಶ್, ವಿಜಯ್ ಸೇತುಪತಿ, ವಿಜಯ್ ದೇವರಕೊಂಡ ಸೇರಿ ಅನೇಕರು ಈ ಸಾಲಿನಲ್ಲಿದ್ದಾರೆ. ಹಾಗಾದರೆ, ಸಿನಿಮಾ ರಂಗಕ್ಕೆ ಬರೋದಕ್ಕೂ ಮೊದಲು ಪರಭಾಷೆಯ ಈ ಸ್ಟಾರ್​ಗಳು ಏನು ಮಾಡುತ್ತಿದ್ದರು? ಅವರ ಜೀವನ ಹೇಗಿತ್ತು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಸ್ಟಾರ್ ಆಗುವುದಕ್ಕೂ ಮೊದಲು ಈ ಕಲಾವಿದರು ಮಾಡುತ್ತಿದ್ದ ಕೆಲಸಗಳೇನು ಗೊತ್ತಾ?
ಸ್ಟಾರ್ ಆಗುವುದಕ್ಕೂ ಮೊದಲು ಈ ಕಲಾವಿದರು ಮಾಡುತ್ತಿದ್ದ ಕೆಲಸಗಳೇನು ಗೊತ್ತಾ?
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 30, 2023 | 9:53 AM

ಚಿತ್ರರಂಗದಲ್ಲಿ ಸ್ಟಾರ್ ಆದರೆ ಅವರನ್ನು ಆರಾಧಿಸುವವರ ದೊಡ್ಡ ಬಳಗವೇ ಸಿಗುತ್ತದೆ. ಅನೇಕರು ಜೀರೋದಿಂದ ಹೀರೋ ಆಗಿದ್ದಾರೆ. ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಅನೇಕರು ಬೇರೆ ಬೇರೆ ರೀತಿಯ ಕೆಲಸ ಮಾಡಿದ್ದರು. ಚಿತ್ರರಂಗದಲ್ಲಿ ಗುರುತಿಸಿಕೊಂಡ ಬಳಿಕ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಿದೆ. ಈ ಸಾಲಿನಲ್ಲಿ ಯಶ್ (Yash), ವಿಜಯ್ ಸೇತುಪತಿ, ವಿಜಯ್ ದೇವರಕೊಂಡ (Vijay Devarakonda) ಸೇರಿ ಅನೇಕರಿದ್ದಾರೆ. ಹಾಗಾದರೆ, ಸಿನಿಮಾ ರಂಗಕ್ಕೆ ಬರೋದಕ್ಕೂ ಮೊದಲು ಪರಭಾಷೆಯ ಈ ಸ್ಟಾರ್​ಗಳು ಏನು ಮಾಡುತ್ತಿದ್ದರು? ಅವರ ಜೀವನ ಹೇಗಿತ್ತು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ವಿಜಯ್ ಸೇತುಪತಿ

ವಿಜಯ್ ಸೇತುಪತಿ ಅವರು ತಮಿಳು ಹಾಗೂ ಹಿಂದಿಯಲ್ಲಿ ಫೇಮಸ್ ಆಗಿದ್ದಾರೆ. ‘ಜವಾನ್’ ಚಿತ್ರದ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಅವರು ಸಿನಿಮಾ ರಂಗಕ್ಕೆ ಕಾಲಿಡುವುದಕ್ಕೂ ಮೊದಲು ದುಬೈನಲ್ಲಿ ಅಕೌಟಂಟ್ ಆಗಿದ್ದರು. ಅವರು ಮಾಡಿದ್ದ 10 ಲಕ್ಷ ರೂಪಾಯಿ ಲೋನ್ ತೀರಿಸಲು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಸ್ಟಾರ್ ಕಲಾವಿದನಾಗಿ ಬೆಳೆದರು.

ದುಲ್ಕರ್ ಸಲ್ಮಾನ್

ಮಲಯಾಳಂನ ಸ್ಟಾರ್ ನಟ ಮಮ್ಮೂಟಿ ಮಗ ದುಲ್ಕರ್ ಸಲ್ಮಾನ್. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚೌಕಟ್ಟು ಹಾಕಿಕೊಂಡು ಬದುಕುತ್ತಿಲ್ಲ. ಅವರು ದುಬೈನಲ್ಲಿ ಐಟಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಎಂಬಿಎ ಕೂಡ ಮಾಡಿದ್ದಾರೆ. ಕೆಲಸ ಬಿಟ್ಟು ಸಿನಿಮಾ ರಂಗಕ್ಕೆ ಸೇರಿದರು.

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಚಿತ್ರದಿಂದ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರು ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಹಲವು ಕೆಲಸಗಳನ್ನು ಮಾಡಿದ್ದರು. ನೀರಿನ ಕ್ಯಾನ್​ಗಳನ್ನು ಮಾರುತ್ತಿದ್ದರು. ಹೋಟೆಲ್​ನಲ್ಲಿ ಅವರು ಕೆಲಸ ಮಾಡಿದ್ದರು. ಡ್ರೈವರ್ ಆಗಿಯೂ ಕೆಲಸ ಮಾಡಿದ್ದರು. ನಂತರ ಸಿನಿಮಾ ರಂಗಕ್ಕೆ ಬಂದರು. ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿದರು. ‘ಕಾಂತಾರ’ ಗೆಲುವಿನಿಂದ ಪ್ಯಾನ್​ ಇಂಡಿಯಾ ಸ್ಟಾರ್ ಆಗಿದ್ದಾರೆ.

ಯಶ್

‘ಕೆಜಿಎಫ್ 2’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದವರು ಯಶ್. ಆ ಬಳಿಕ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಆದಾಗ್ಯೂ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಯಶ್ ಆರಂಭದಲ್ಲಿ ಬ್ಯಾಕ್​ಸ್ಟೇಜ್​ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ತಂದೆ ಡ್ರೈವರ್ ಆಗಿದ್ದರು. ಯಶ್ ಮೊದಲು ಕಿರುತೆರೆಗೆ ಕಾಲಿಟ್ಟರು. ನಂತರ ಚಿತ್ರರಂಗಕ್ಕೆ ಬಂದು ಮಿಂಚಿದರು.

ರಜನಿಕಾಂತ್

ರಜನಿಕಾಂತ್ ಅವರು ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಿದ್ದರು. ‘ಜೈಲರ್’ ಸಿನಿಮಾ ಗೆದ್ದ ಬಳಿಕ ಅವರು ಜಯನಗರ ಡಿಪೋಗೆ ಭೇಟಿ ನೀಡಿದ್ದರು. ಈ ಮೂಲಕ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದರು. ರಜನಿಕಾಂತ್​ಗೆ ಮೊದಲಿನಿಂದ ಹೀರೋ ಆಗಬೇಕು ಎಂಬ ಕನಸಿತ್ತು. ಚೆನ್ನೈಗೆ ಹೋಗಿ ಅದನ್ನು ನನಸು ಮಾಡಿಕೊಂಡರು.

ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಅವರು ಹ್ಯಾಂಡ್ಸಮ್ ಹಂಕ್ ಎಂದೇ ಫೇಮಸ್. ಅವರು ಹಣಕ್ಕಾಗಿ ಮ್ಯೂಸಿಕ್ ವಿಡಿಯೋ ಮಾಡುತ್ತಿದ್ದರು. ಸ್ಟಾರ್ ಹೀರೋ ಆಗಲು ಅವರು ಸಾಕಷ್ಟು ಕಷ್ಟಪಟ್ಟಿದ್ದರು. ‘ಖುಷಿ’ ಸಿನಿಮಾ ಗೆಲುವಿನ ಖುಷಿಯಲ್ಲಿ ಅವರಿದ್ದಾರೆ.

ಇದನ್ನೂ ಓದಿ: ಸ್ಟಿರಾಯ್ಡ್​ ಬಳಕೆಯಿಂದ ನಟಿ ಸಮಂತಾ ಮುಖದ ಚರ್ಮಕ್ಕೆ ಆಯ್ತು ಹಾನಿ

ಸಮಂತಾ

ಸಮಂತಾ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಅವರು ಹಣಕ್ಕಾಗಿ ವಿವಿಧ ರೀತಿಯ ಕೆಲಸಗಳನ್ನು ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:19 am, Sat, 30 September 23

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ