AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ಆಗುವುದಕ್ಕೂ ಮೊದಲು ಈ ಕಲಾವಿದರು ಮಾಡುತ್ತಿದ್ದ ಕೆಲಸಗಳೇನು ಗೊತ್ತಾ?

ಯಶ್, ವಿಜಯ್ ಸೇತುಪತಿ, ವಿಜಯ್ ದೇವರಕೊಂಡ ಸೇರಿ ಅನೇಕರು ಈ ಸಾಲಿನಲ್ಲಿದ್ದಾರೆ. ಹಾಗಾದರೆ, ಸಿನಿಮಾ ರಂಗಕ್ಕೆ ಬರೋದಕ್ಕೂ ಮೊದಲು ಪರಭಾಷೆಯ ಈ ಸ್ಟಾರ್​ಗಳು ಏನು ಮಾಡುತ್ತಿದ್ದರು? ಅವರ ಜೀವನ ಹೇಗಿತ್ತು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಸ್ಟಾರ್ ಆಗುವುದಕ್ಕೂ ಮೊದಲು ಈ ಕಲಾವಿದರು ಮಾಡುತ್ತಿದ್ದ ಕೆಲಸಗಳೇನು ಗೊತ್ತಾ?
ಸ್ಟಾರ್ ಆಗುವುದಕ್ಕೂ ಮೊದಲು ಈ ಕಲಾವಿದರು ಮಾಡುತ್ತಿದ್ದ ಕೆಲಸಗಳೇನು ಗೊತ್ತಾ?
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Sep 30, 2023 | 9:53 AM

Share

ಚಿತ್ರರಂಗದಲ್ಲಿ ಸ್ಟಾರ್ ಆದರೆ ಅವರನ್ನು ಆರಾಧಿಸುವವರ ದೊಡ್ಡ ಬಳಗವೇ ಸಿಗುತ್ತದೆ. ಅನೇಕರು ಜೀರೋದಿಂದ ಹೀರೋ ಆಗಿದ್ದಾರೆ. ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಅನೇಕರು ಬೇರೆ ಬೇರೆ ರೀತಿಯ ಕೆಲಸ ಮಾಡಿದ್ದರು. ಚಿತ್ರರಂಗದಲ್ಲಿ ಗುರುತಿಸಿಕೊಂಡ ಬಳಿಕ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಿದೆ. ಈ ಸಾಲಿನಲ್ಲಿ ಯಶ್ (Yash), ವಿಜಯ್ ಸೇತುಪತಿ, ವಿಜಯ್ ದೇವರಕೊಂಡ (Vijay Devarakonda) ಸೇರಿ ಅನೇಕರಿದ್ದಾರೆ. ಹಾಗಾದರೆ, ಸಿನಿಮಾ ರಂಗಕ್ಕೆ ಬರೋದಕ್ಕೂ ಮೊದಲು ಪರಭಾಷೆಯ ಈ ಸ್ಟಾರ್​ಗಳು ಏನು ಮಾಡುತ್ತಿದ್ದರು? ಅವರ ಜೀವನ ಹೇಗಿತ್ತು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ವಿಜಯ್ ಸೇತುಪತಿ

ವಿಜಯ್ ಸೇತುಪತಿ ಅವರು ತಮಿಳು ಹಾಗೂ ಹಿಂದಿಯಲ್ಲಿ ಫೇಮಸ್ ಆಗಿದ್ದಾರೆ. ‘ಜವಾನ್’ ಚಿತ್ರದ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಅವರು ಸಿನಿಮಾ ರಂಗಕ್ಕೆ ಕಾಲಿಡುವುದಕ್ಕೂ ಮೊದಲು ದುಬೈನಲ್ಲಿ ಅಕೌಟಂಟ್ ಆಗಿದ್ದರು. ಅವರು ಮಾಡಿದ್ದ 10 ಲಕ್ಷ ರೂಪಾಯಿ ಲೋನ್ ತೀರಿಸಲು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಸ್ಟಾರ್ ಕಲಾವಿದನಾಗಿ ಬೆಳೆದರು.

ದುಲ್ಕರ್ ಸಲ್ಮಾನ್

ಮಲಯಾಳಂನ ಸ್ಟಾರ್ ನಟ ಮಮ್ಮೂಟಿ ಮಗ ದುಲ್ಕರ್ ಸಲ್ಮಾನ್. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚೌಕಟ್ಟು ಹಾಕಿಕೊಂಡು ಬದುಕುತ್ತಿಲ್ಲ. ಅವರು ದುಬೈನಲ್ಲಿ ಐಟಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಎಂಬಿಎ ಕೂಡ ಮಾಡಿದ್ದಾರೆ. ಕೆಲಸ ಬಿಟ್ಟು ಸಿನಿಮಾ ರಂಗಕ್ಕೆ ಸೇರಿದರು.

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಚಿತ್ರದಿಂದ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರು ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಹಲವು ಕೆಲಸಗಳನ್ನು ಮಾಡಿದ್ದರು. ನೀರಿನ ಕ್ಯಾನ್​ಗಳನ್ನು ಮಾರುತ್ತಿದ್ದರು. ಹೋಟೆಲ್​ನಲ್ಲಿ ಅವರು ಕೆಲಸ ಮಾಡಿದ್ದರು. ಡ್ರೈವರ್ ಆಗಿಯೂ ಕೆಲಸ ಮಾಡಿದ್ದರು. ನಂತರ ಸಿನಿಮಾ ರಂಗಕ್ಕೆ ಬಂದರು. ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿದರು. ‘ಕಾಂತಾರ’ ಗೆಲುವಿನಿಂದ ಪ್ಯಾನ್​ ಇಂಡಿಯಾ ಸ್ಟಾರ್ ಆಗಿದ್ದಾರೆ.

ಯಶ್

‘ಕೆಜಿಎಫ್ 2’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದವರು ಯಶ್. ಆ ಬಳಿಕ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಆದಾಗ್ಯೂ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಯಶ್ ಆರಂಭದಲ್ಲಿ ಬ್ಯಾಕ್​ಸ್ಟೇಜ್​ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ತಂದೆ ಡ್ರೈವರ್ ಆಗಿದ್ದರು. ಯಶ್ ಮೊದಲು ಕಿರುತೆರೆಗೆ ಕಾಲಿಟ್ಟರು. ನಂತರ ಚಿತ್ರರಂಗಕ್ಕೆ ಬಂದು ಮಿಂಚಿದರು.

ರಜನಿಕಾಂತ್

ರಜನಿಕಾಂತ್ ಅವರು ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಿದ್ದರು. ‘ಜೈಲರ್’ ಸಿನಿಮಾ ಗೆದ್ದ ಬಳಿಕ ಅವರು ಜಯನಗರ ಡಿಪೋಗೆ ಭೇಟಿ ನೀಡಿದ್ದರು. ಈ ಮೂಲಕ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದರು. ರಜನಿಕಾಂತ್​ಗೆ ಮೊದಲಿನಿಂದ ಹೀರೋ ಆಗಬೇಕು ಎಂಬ ಕನಸಿತ್ತು. ಚೆನ್ನೈಗೆ ಹೋಗಿ ಅದನ್ನು ನನಸು ಮಾಡಿಕೊಂಡರು.

ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಅವರು ಹ್ಯಾಂಡ್ಸಮ್ ಹಂಕ್ ಎಂದೇ ಫೇಮಸ್. ಅವರು ಹಣಕ್ಕಾಗಿ ಮ್ಯೂಸಿಕ್ ವಿಡಿಯೋ ಮಾಡುತ್ತಿದ್ದರು. ಸ್ಟಾರ್ ಹೀರೋ ಆಗಲು ಅವರು ಸಾಕಷ್ಟು ಕಷ್ಟಪಟ್ಟಿದ್ದರು. ‘ಖುಷಿ’ ಸಿನಿಮಾ ಗೆಲುವಿನ ಖುಷಿಯಲ್ಲಿ ಅವರಿದ್ದಾರೆ.

ಇದನ್ನೂ ಓದಿ: ಸ್ಟಿರಾಯ್ಡ್​ ಬಳಕೆಯಿಂದ ನಟಿ ಸಮಂತಾ ಮುಖದ ಚರ್ಮಕ್ಕೆ ಆಯ್ತು ಹಾನಿ

ಸಮಂತಾ

ಸಮಂತಾ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಅವರು ಹಣಕ್ಕಾಗಿ ವಿವಿಧ ರೀತಿಯ ಕೆಲಸಗಳನ್ನು ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:19 am, Sat, 30 September 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ