AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್ ಆಸೆ ಈಡೇರಿಸಿದ ಯಶ್; ಅಭಿಷೇಕ್ ಮಗನಿಗೆ ವಿಶೇಷ ಉಡುಗೊರೆ

ರಾಕಿಂಗ್ ಸ್ಟಾರ್ ಯಶ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಅಂಬರೀಷ್ ಅವರ ಆಸೆಯಂತೆ ಅಭಿಷೇಕ್ ಅವರ ಮಗುವಿಗೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಈ ಮೂಲಕ ನಟನ ಮೇಲಿರುವ ವಿಶೇಷ ಪ್ರೀತಿಯನ್ನು ಯಶ್ ತೋರಿಸಿದ್ದಾರೆ. ಯಶ್ ಅವರು ಈಗ 'ಟಾಕ್ಸಿಕ್' ಮತ್ತು 'ರಾಮಾಯಣ' ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಅಂಬರೀಷ್ ಆಸೆ ಈಡೇರಿಸಿದ ಯಶ್; ಅಭಿಷೇಕ್ ಮಗನಿಗೆ ವಿಶೇಷ ಉಡುಗೊರೆ
ಸುಮಲತಾ-ಯಶ್
Malatesh Jaggin
| Updated By: ರಾಜೇಶ್ ದುಗ್ಗುಮನೆ|

Updated on:Mar 05, 2025 | 11:39 AM

Share

ನಟ ರಾಕಿಂಗ್ ಸ್ಟಾರ್ ಯಶ್ ಅವರು ಅಂಬರೀಷ್ ಜೊತೆ ವಿಶೇಷ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಸುಮಲತಾ ಆಯೋಜನೆ ಮಾಡುವ ವಿಶೇಷ ಕಾರ್ಯಕ್ರಮಗಳಿಗೆ ಯಶ್ ಹಾಜರಿ ಹಾಕುತ್ತಾರೆ. ಯಶ್ ಹಾಗೂ ದರ್ಶನ್ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವಾಗಲೇ ಇಬ್ಬರನ್ನೂ ಒಟ್ಟಿಗೆ ಕರೆತಂದು ‘ಜೋಡೆತ್ತು’ ಮಾಡಿದ್ದು ಸುಮಲತಾ (Sumalatha) ಅವರು. ಇದು ಯಶ್​​ಗೆ ಅಂಬರೀಷ್ ಮೇಲಿರುವ ಗೌರವವನ್ನು ತೋರಿಸುತ್ತದೆ. ಈಗ ಅಂಬರೀಷ್ ಅವರ ಆಸೆಯನ್ನು ಯಶ್ ಅವರು ಈಡೇರಿಸಿದ್ದಾರೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಯಶ್ ಅವರಿಗೆ ಆಯ್ರಾ ಜನಿಸಿದಾಗ ಎಲ್ಲ ಕಡೆಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಆಗ ಅಂಬರೀಷ್ ಕೂಡ ಇದ್ದರು. ಯಶ್ ಮಗಳಿಗೆ ಕಲಘಟಗಿ ತೊಟ್ಟಿಲನ್ನು ರೆಬೆಲ್ ಸ್ಟಾರ್ ಅಂಬರೀಷ್ ಮಾಡಿಸಿಕೊಟ್ಟಿದ್ದರು. ಇದನ್ನು ಯಶ್ ಅವರು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಈಗ ಅವರು ಕೂಡ ವಿಶೇಷ ತೊಟ್ಟಿಲು ಮಾಡಿಸಿ ಅಭಿಷೇಕ್ ಮನೆಗೆ ಕಳುಹಿಸಿದ್ದಾರೆ.

ಅಭಿಷೇಕ್ ಅವರಿಗೆ ಇತ್ತೀಚೆಗೆ ಗಂಡು ಮಗು ಜನಿಸಿತ್ತು. ಶೀಘ್ರವೇ ತೊಟ್ಟಿಲು ಶಾಸ್ತ್ರ ನಡೆಯಲಿದೆ. ಈ ಕಾರಣಕ್ಕೆ ಯಶ್ ಅವರು ಕಲಘಟಗಿಯಿಂದ ತೊಟ್ಟಿಲು ಮಾಡಿಸಿ ಅಭಿಷೇಕ್ ಮನೆ ತಲುಪಿಸಿದ್ದಾರೆ. ಇದು ಯಶ್ ಹಾಗೂ ಅಂಬಿ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ
Image
ಯಶ್, ಸುದೀಪ್ ಅವರೆಲ್ಲ ಬಂದ್ರೆ ಮೇಂಟೇನ್ ಮಾಡೋದು ಕಷ್ಟ: ಸಾಧು ಕೋಕಿಲ
Image
ತಮಿಳಿನಲ್ಲಿ ಹಿಟ್ ಕೊಟ್ಟ ನಿರ್ದೇಶಕನ ಜೊತೆ ಯಶ್ ಮುಂದಿನ ಸಿನಿಮಾ?
Image
Fact Check: ಯಶ್ ಫ್ಯಾಮಿಲಿ ಸಮೇತ ಕುಂಭಮೇಳಕ್ಕೆ ಹೋಗಿದ್ದು ನಿಜವೇ?
Image
ಬಿ. ಜಯಶ್ರೀಗೆ ಟಿವಿ9 ‘ಹೆಮ್ಮೆಯ ಕನ್ನಡತಿ’ ಜೀವಮಾನ ಸಾಧನೆ ಪ್ರಶಸ್ತಿ

ಇದನ್ನೂ ಓದಿ: ಯಶ್, ಸುದೀಪ್ ಅವರೆಲ್ಲ ಬಂದ್ರೆ ಮೇಂಟೇನ್ ಮಾಡೋದು ಕಷ್ಟ: ಸಾಧು ಕೋಕಿಲ

 ಅಂಬಿಯ ಆಸೆ

ಅಭಿಷೇಕ್​ಗೆ ಮಗು ಆದ ಬಳಿಕ ಕಲಘಟಗಿ ತೊಟ್ಟಿಲಿನಲ್ಲಿ ಮಗುವನ್ನು ಮಲಗಿಸಿ ತೂಗಿಸಬೇಕು ಎಂಬ ಆಸೆ ಅಂಬರೀಷ್ ಅವರದ್ದಾಗಿತ್ತು. ಆ ಮಾತನ್ನು ಯಶ್ ನೆನಪಿನಲ್ಲಿಟ್ಟುಕೊಂಡಿದ್ದರು. ಅಭಿಷೇಕ್​ಗೆ ಮಗು ಜನಿಸುತ್ತಿದ್ದಂತೆ ತೊಟ್ಟಿಲು ಮಾಡೋಕೆ ಆರ್ಡರ್ ಕೊಟ್ಟಿದ್ದರು ಎನ್ನಲಾಗಿದೆ. ಯಶ್ ಅವರು ಈಗ ಅಭಿಷೇಕ್ ಅಂಬರೀಷ್ ಮಗನ ನಾಮಕರಣಕ್ಕೆ ಅವಿಸ್ಮರಣೀಯ ಉಡುಗೊರೆಯನ್ನ ನೀಡಿದ್ದಾರೆ.

ತೊಟ್ಟಿಲು

ತೊಟ್ಟಿಲು

ಟಾಕ್ಸಿಕ್ ಸಿನಿಮಾ

ಸಿನಿಮಾ ವಿಚಾರಕ್ಕೆ ಬರೋದಾದರೆ ಯಶ್ ಅವರು ಸದ್ಯ ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಯಶ್ ಅವರು ‘ರಾಮಾಯಣ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗುತ್ತಿದ್ದಾರೆ ಎನ್ನುವ ಮಾಹಿತಿ ಇತ್ತೀಚೆಗೆ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:37 am, Wed, 5 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ