AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ರಾಧಿಕಾ ಪಂಡಿತ್ ನಿರೀಕ್ಷಿಸಿದ್ದೇ ಬೇರೆ, ವಾಸ್ತವವೇ ಬೇರೆ; ಫೋಟೋ ಮೂಲಕ ವಿವರಿಸಿದ ಯಶ್

ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಮಕ್ಕಳು ಬಂದ ನಂತರ ಬದುಕು ಯಾವ ರೀತಿಯಲ್ಲಿ ಬದಲಾಗಿದೆ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

Yash: ರಾಧಿಕಾ ಪಂಡಿತ್ ನಿರೀಕ್ಷಿಸಿದ್ದೇ ಬೇರೆ, ವಾಸ್ತವವೇ ಬೇರೆ; ಫೋಟೋ ಮೂಲಕ ವಿವರಿಸಿದ ಯಶ್
ಯಶ್-ರಾಧಿಕಾ ಪಂಡಿತ್
ರಾಜೇಶ್ ದುಗ್ಗುಮನೆ
|

Updated on:May 08, 2023 | 11:33 AM

Share

ಯಶ್ ಹಾಗೂ ರಾಧಿಕಾ ಪಂಡಿತ್ (Radhika Pandit) ಸ್ಟಾರ್ ದಂಪತಿ. ಇವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಿದೆ. ಯಶ್ ಪಕ್ಕಾ ಫ್ಯಾಮಿಲಿಮ್ಯಾನ್. ಕುಟುಂಬಕ್ಕಾಗಿ ಹೆಚ್ಚು ಸಮಯ ಮೀಸಲಿಡುತ್ತಾರೆ. ಶೂಟಿಂಗ್​ ವೇಳೆ ಬಿಡುವು ಸಿಕ್ಕರೆ ಪತ್ನಿ ರಾಧಿಕಾ ಪಂಡಿತ್ ಹಾಗೂ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಜೊತೆ ಸಮಯ ಕಳೆಯೋಕೆ ಅವರು ಇಷ್ಟಪಡುತ್ತಾರೆ. ಸದ್ಯ ಯಶ್ (Yash) ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಎಕ್ಸ್​​ಪೆಕ್ಟೇಷನ್ vs ರಿಯಾಲಿಟಿಯನ್ನು ವಿವರಿಸಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ಮದುವೆ ಆಗಿ ಹಲವು ವರ್ಷಗಳು ಕಳೆದಿವೆ. ಇಬ್ಬರೂ ಪ್ರೀತಿಸಿ ಮದುವೆ ಆದವರು. ಈ ದಂಪತಿ ಮಕ್ಕಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಇತ್ತೀಚೆಗೆ ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಮಕ್ಕಳು ಬಂದ ನಂತರ ಬದುಕು ಯಾವ ರೀತಿಯಲ್ಲಿ ಬದಲಾಗಿದೆ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ಮೊದಲ ಫೋಟೋದಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಅವರು ಕೈಕೈ ಹಿಡಿದು ಬರುತ್ತಿದ್ದಾರೆ. ಇದನ್ನು ಅವರು ನಿರೀಕ್ಷೆ ಎಂದು ಕರೆದಿದ್ದಾರೆ. ಮತ್ತೊಂದು ಫೋಟೋದಲ್ಲಿ ಯಶ್​ ಹಾಗೂ ರಾಧಿಕಾ ಮಕ್ಕಳನ್ನು ಎತ್ತಿಕೊಂಡು ನಡೆದು ಬರುತ್ತಿರುವುದು ಇದೆ. ಇದನ್ನು ಅವರು ರಿಯಾಲಿಟಿ ಎಂದು ಕರೆದಿದ್ದಾರೆ. ‘ನನ್ನ ಪತ್ನಿಯ ನಿರೀಕ್ಷೆ ಮತ್ತು ವಾಸ್ತವ’ ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಹಲವು ಕಮೆಂಟ್​ಗಳು ಬಂದಿವೆ. ‘ಇದುವೇ ಜೀವನ ಅಲ್ಲವೇ? ಮಕ್ಕಳು ಹುಟ್ಟಿದಮೇಲೆ ನಮ್ಮ ಜೀವನ ಪೂರ್ಣಗೊಳ್ಳೋದು’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು, ಯಶ್ ಕುಟುಂಬದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

View this post on Instagram

A post shared by Yash (@thenameisyash)

ಇದನ್ನೂ ಓದಿ: Radhika Pandit: ರಾಧಿಕಾ ಪಂಡಿತ್​ ಹಂಚಿಕೊಂಡ ಈ ಫೋಟೋಗಳಲ್ಲಿ ಇದೆ ಒಂದು ವಿಶೇಷ; ಗುರುತಿಸಬಲ್ಲಿರಾ?

ಕಮೆಂಟ್ ಬಾಕ್ಸ್​ನಲ್ಲಿ ಹಲವರು ಯಶ್ 19ನೇ ಸಿನಿಮಾ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ಯಶ್ ಅವರೇ ನಿಮ್ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಕೆಜಿಎಫ್ ಮೂರನೇ ಚಾಪ್ಟರ್​ ಬರಲಿದೆಯೇ? ಅದಕ್ಕಾಗಿ ಇಷ್ಟೊಂದು ವಿಳಂಬವೇ’ ಕಮೆಂಟ್ ಮಾಡಿದ್ದಾರೆ. ರಾಧಿಕಾ ಪಂಡಿತ್ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಅವರು ಕೂಡ ಕಂಬ್ಯಾಕ್ ಮಾಡಲಿ ಅನ್ನೋದು ಅನೇಕರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Mon, 8 May 23

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು