AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ‘ಭಜರಂಗಿ 2’ಗೆ ಸಾತ್​ ನೀಡಿದ ಯಶ್​-ಪುನೀತ್​ ​; ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳು

ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿರುವ ‘ಭಜರಂಗಿ 2’ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆಯುತ್ತಿವೆ.

ಶಿವರಾಜ್​ಕುಮಾರ್​ ‘ಭಜರಂಗಿ 2’ಗೆ ಸಾತ್​ ನೀಡಿದ ಯಶ್​-ಪುನೀತ್​ ​; ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳು
ಶಿವರಾಜ್​ಕುಮಾರ್​, ಯಶ್​, ಪುನೀತ್​
TV9 Web
| Updated By: Digi Tech Desk|

Updated on:Oct 29, 2021 | 5:26 PM

Share

ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿದೆ. ಸಿನಿಮಾ ಹೇಗಿರಲಿದೆ ಎಂಬ ಕುತೂಹಲಕ್ಕೆ ಅಕ್ಟೋಬರ್​ 29ರಂದು ಉತ್ತರ ಸಿಗಲಿದೆ. ಇದಕ್ಕೂ ಮೊದಲು ಅದ್ದೂರಿಯಾಗಿ ಚಿತ್ರ ತಂಡ ಪ್ರೀರಿಲೀಸ್​ ಇವೆಂಟ್​ ಏರ್ಪಡಿಸಿತ್ತು. ಈ ಕಾರ್ಯಕ್ರಮಕ್ಕೆ ಯಶ್​, ಪುನೀತ್​ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳನ್ನು ನೋಡಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ಯಶ್​, ಪುನೀತ್​ ಆಗಮಿಸಿದ್ದು ‘ಭಜರಂಗಿ 2’ಗೆ ದೊಡ್ಡ ಬಲ ಸಿಕ್ಕಂತಾಗಿದೆ.

ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿರುವ ‘ಭಜರಂಗಿ 2’ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆಯುತ್ತಿವೆ. ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಮೂರನೇ ಸಿನಿಮಾ ಇದಾಗಿದ್ದು, ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರೀ ರಿಲೀಸ್​ ಇವೆಂಟ್​ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ಸ್ಟಾರ್​ಗಳ ಸಮಾಗಮನಕ್ಕೆ ಸಾಕ್ಷಿ ಆಗಿತ್ತು. ಶಿವರಾಜ್​ಕುಮಾರ್​, ಅವರ ಸಹೋದರ, ನಟ ಪುನೀತ್​ ರಾಜ್​ಕುಮಾರ್​, ರಾಕಿಂಗ್​ ಸ್ಟಾರ್​ ಯಶ್​, ನಿರ್ದೇಶಕ, ನಟ, ನಿರ್ಮಾಪಕ ರಿಷಬ್​ ಶೆಟ್ಟಿ, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ‘ಭಜರಂಗಿ 2’ ನಿರ್ದೇಶಕ ಎ. ಹರ್ಷ, ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಆಗಮಿಸಿದ್ದರು.

ಮೊದಲಿಗೆ ಮಾತನಾಡಿದ ಪುನೀತ್​ ರಾಜ್​ಕುಮಾರ್​ ಸಿನಿಮಾ ಗೆಲ್ಲುತ್ತದೆ ಎನ್ನುವ ಭರವಸೆ ವ್ಯಕ್ತಪಡಿಸಿದರು. ‘ಶಿವರಾಜ್​ಕುಮಾರ್​ ಸೇರಿ ಎಲ್ಲರೂ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಒಂದೊಳ್ಳೆಯ ಪ್ರೊಡಕ್ಷನ್ ಹೌಸ್. ಸಿನಿಮಾ ಒಳ್ಳೆಯ ಸಕ್ಸಸ್​ ಕಾಣಲಿ’ ಎಂದು ಹಾರೈಸಿದರು.

ಯಶ್​ ಕೂಡ ಸಿನಿಮಾ ಟ್ರೇಲರ್ ನೋಡಿದ್ದು ಮೆಚ್ಚುಗೆಯ ಮಾತುಗಳನ್ನು ಆಡಿದರು. ‘ಸಿನಿಮಾದ ಟ್ರೇಲರ್​ ಅದ್ಭುತವಾಗಿ ಮೂಡಿ ಬಂದಿದೆ. ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದು ಹಾರೈಸಿದರು.

ಹಲವು ಕಾರಣಗಳಿಗಾಗಿ ‘ಭಜರಂಗಿ 2’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆಯುತ್ತಿವೆ. ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಮೂರನೇ ಸಿನಿಮಾ ಇದಾಗಿದ್ದು, ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ.

ಈ ಸಿನಿಮಾದಲ್ಲಿ ಹಿರಿಯ ನಟಿ ಶ್ರುತಿ, ಭಜರಂಗಿ ಲೋಕಿ, ಭಾವನಾ ಮೆನನ್​, ಶಿವರಾಜ್​ ಕೆ.ಆರ್​. ಪೇಟೆ, ಚೆಲುವ ರಾಜು ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: Shiva Rajkumar: ಯಶ್​ರನ್ನು ಹಾಡಿಹೊಗಳಿದ ಶಿವಣ್ಣ; ವಿಡಿಯೋ ನೋಡಿ

‘ಎಲ್ಲರೂ ಒಟ್ಟಾಗಿ, ಪ್ರೀತಿಯಿಂದ ಇರೋಣ’; ಸ್ಯಾಂಡಲ್​ವುಡ್​ ಮಂದಿಗೆ ಯಶ್​ ನೀಡಿದ್ರು ಕರೆ

Published On - 2:37 pm, Wed, 27 October 21

ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ