AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ಹೋಗಲೇ, ಇವನೊಬ್ಬ ಬಾಕಿ ಇದ್ದ’: ಬ್ಯಾಡ್​ ಬಾಯ್​ ಎಂದು ಆರೋಪಿಸಿದ ಮಗನಿಗೆ ಯಶ್​ ಪ್ರೀತಿಯ ಆವಾಜ್​

Yatharv Yash Viral Video: ಯಶ್​ ಮತ್ತು ಯಥರ್ವ್​ ಮಾತನಾಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 10 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Yash: ‘ಹೋಗಲೇ, ಇವನೊಬ್ಬ ಬಾಕಿ ಇದ್ದ’: ಬ್ಯಾಡ್​ ಬಾಯ್​ ಎಂದು ಆರೋಪಿಸಿದ ಮಗನಿಗೆ ಯಶ್​ ಪ್ರೀತಿಯ ಆವಾಜ್​
ಯಥರ್ವ್, ಯಶ್
TV9 Web
| Edited By: |

Updated on:Jul 17, 2022 | 12:07 PM

Share

‘ರಾಕಿಂಗ್​ ಸ್ಟಾರ್​’ ಯಶ್​ (Yash) ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಸಂಪೂರ್ಣವಾಗಿ ಕುಟುಂಬಕ್ಕೆ ಸಮಯ ಮೀಸಲಿಡುತ್ತಾರೆ. ಪತ್ನಿ ರಾಧಿಕಾ ಪಂಡಿತ್​ (Radhika Pandit), ಮಕ್ಕಳಾದ ಯಥರ್ವ್​ ಮತ್ತು ಆಯ್ರಾ ಜೊತೆ ಅವರು ಕಾಲ ಕಳೆಯುತ್ತಾರೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ರಾಧಿಕಾ ಪಂಡಿತ್​ ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುತ್ತಾ ಇರುತ್ತಾರೆ. ಅವುಗಳಿಗೆ ಅಭಿಮಾನಿಗಳ ಕಡೆಯಿಂದ ಭರಪೂರ ಲೈಕ್ಸ್​ ಸಿಗುತ್ತದೆ. ಅಂಥ ಅನೇಕ ವಿಡಿಯೋಗಳು ವೈರಲ್​ ಆಗಿವೆ. ಈಗ ರಾಧಿಕಾ ಪಂಡಿತ್​ ಅವರು ಒಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ‘ಅಪ್ಪ ಬ್ಯಾಡ್​ ಬಾಯ್​’ ಎಂದು ಯಶ್​ ಬಗ್ಗೆ ಯಥರ್ವ್​ (Yatharv Yash) ಆರೋಪ ಮಾಡಿದ್ದಾನೆ. ಅಪ್ಪ-ಮಗನ ಈ ವಿಡಿಯೋ ಕಂಡು ಫ್ಯಾನ್ಸ್​ ‘ಸಖತ್​ ಕ್ಯೂಟ್​ ಆಗಿದೆ’ ಎನ್ನುತ್ತಿದ್ದಾರೆ.

ರಾಧಿಕಾ ಪಂಡಿತ್​ ಮಡಿಲಲ್ಲಿ ಯಥರ್ವ್​ ಕುಳಿತಿದ್ದಾನೆ. ಸಪ್ಪೆ ಮುಖ ಮಾಡಿಕೊಂಡು ಅಪ್ಪನ ಬಗ್ಗೆ ಆತ ಆರೋಪ ಮಾಡುತ್ತಿದ್ದಾನೆ. ‘ಅಮ್ಮ ಗುಡ್​ ಗರ್ಲ್​, ಅಪ್ಪ ಬ್ಯಾಡ್​ ಬಾಯ್​’ ಎಂಬುದು ಯಥರ್ವ್​ ಆರೋಪ. ಮಗನಿಂದ ‘ಗುಡ್​ ಬಾಯ್​’ ಎಂದು ಕರೆಸಿಕೊಳ್ಳಬೇಕು ಎಂದು ಯಶ್​ ಸಖತ್​ ಪ್ರಯತ್ನ ಮಾಡಿದ್ದಾರೆ. ಆದರೂ ಯಥರ್ವ್​ ತನ್ನ ಅಭಿಪ್ರಾಯ ಬದಲಾಯಿಸಿಲ್ಲ. ಎಷ್ಟೇ ಮನವಿ ಮಾಡಿಕೊಂಡರೂ ಕೂಡ ‘ಅಪ್ಪ ಬ್ಯಾಡ್ ಬಾಯ್​’ ಎಂಬ ವಾದವನ್ನೇ ಆತ ಪದೇ ಪದೇ ಮುಂದಿಟ್ಟಿದ್ದಾನೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಮಗನಿಂದ ‘ಗುಡ್​ ಬಾಯ್​’ ಎಂದು ಹೇಳಿಸಿಕೊಳ್ಳಲು ಸಾಧ್ಯವಾಗದೇ ಯಶ್​ ಸೋತಿದ್ದಾರೆ. ಇದರಿಂದ ಅವರಿಗೆ ಹುಸಿ ಕೋಪ ಬಂದಿದೆ. ‘ಹೋಗಲೇ.. ಬಂದ್ಬಿಟ್ಟ.. ಇವನೊಬ್ಬ ಬಾಕಿ ಇದ್ದ’ ಎಂದು ಮಗನಿಗೆ ಯಶ್​ ಪ್ರೀತಿಯಿಂದ ಆವಾಜ್​ ಹಾಕಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡಿರುವ ರಾಧಿಕಾ ಪಂಡಿತ್​ ಅವರು, ‘ತೀರ್ಪು ಹೊರಬಿದ್ದಿದೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ಗಂಟೆಗಳಲ್ಲಿ 10 ಲಕ್ಷಕ್ಕೂ ಅಧಿಕ ಬಾರಿ ಈ ವಿಡಿಯೋ ವೀಕ್ಷಣೆ ಕಂಡಿದೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಯಶಸ್ಸಿನ ಬಳಿಕ ಯಶ್​ ಅವರು ಕುಟುಂಬದ ಜತೆ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಅವರು ಹೊಸ ಸಿನಿಮಾ ಬೇಗ ಅನೌನ್ಸ್​ ಮಾಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಅದೇ ರೀತಿ ರಾಧಿಕಾ ಪಂಡಿತ್​ ಕೂಡ ಕಮ್​ಬ್ಯಾಕ್​ ಮಾಡಬೇಕು ಎಂಬುದು ಅಭಿಮಾನಿಗಳ ಹಂಬಲ.

Published On - 12:07 pm, Sun, 17 July 22

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?