AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಂಗಲ್​’ ದಾಖಲೆ ಉಡೀಸ್​ ಮಾಡಿದ ಯಶ್​​; ಅತಿ ಹೆಚ್ಚು ಹಣ ಗಳಿಸಿದ​ 2ನೇ ಸಿನಿಮಾ ‘ಕೆಜಿಎಫ್​ 2’

Dangal | KGF 2 Collection: ಭಾರತೀಯ ಮಾರುಕಟ್ಟೆಯಲ್ಲಿ ‘ದಂಗಲ್’​ ಸಿನಿಮಾ 387.38 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ 2ನೇ ಸ್ಥಾನದಲ್ಲಿತ್ತು. ಈಗ ಆ ಸ್ಥಾನವನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಕಿತ್ತುಕೊಂಡಿದೆ.

‘ದಂಗಲ್​’ ದಾಖಲೆ ಉಡೀಸ್​ ಮಾಡಿದ ಯಶ್​​; ಅತಿ ಹೆಚ್ಚು ಹಣ ಗಳಿಸಿದ​ 2ನೇ ಸಿನಿಮಾ ‘ಕೆಜಿಎಫ್​ 2’
ಯಶ್​, ಆಮಿರ್ ಖಾನ್​
TV9 Web
| Edited By: |

Updated on: May 05, 2022 | 12:44 PM

Share

ಎಲ್ಲ ನಿರೀಕ್ಷೆಗಳನ್ನೂ ಮೀರಿ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಗೆಲುವು ಕಂಡಿದೆ. ದೇಶಾದ್ಯಂತ ಈ ಸಿನಿಮಾ ಸಂಚಲನ ಮೂಡಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಈ ಚಿತ್ರದಿಂದ ಯಶ್​ (Yash) ವೃತ್ತಿಜೀವನಕ್ಕೆ ಬಹುದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಉತ್ತರ ಭಾರತದ ಪ್ರೇಕ್ಷಕರು ಈ ಸಿನಿಮಾವನ್ನು ಹೆಚ್ಚು ಇಷ್ಟಪಟ್ಟಿದ್ದಾರೆ. ಅದರ ಪರಿಣಾಮವಾಗಿ ಹಿಂದಿ ವರ್ಷನ್​ನಲ್ಲಿ ‘ಕೆಜಿಎಫ್​ 2’ ಚಿತ್ರಕ್ಕೆ ಭರ್ಜರಿ ಕಲೆಕ್ಷನ್​ ಆಗಿದೆ. ಈವರೆಗೂ ಬಾಲಿವುಡ್​ನಲ್ಲಿ ಸ್ಟಾರ್​ ಹೀರೋಗಳ ಸಿನಿಮಾಗಳು ಮಾಡಿದ್ದ ಕಲೆಕ್ಷನ್​ ಅನ್ನು ಯಶ್​ ಸಿನಿಮಾ ಹಿಂದಿಕ್ಕಿದೆ. ಆಮಿರ್​ ಖಾನ್​ ನಟನೆಯ ‘ದಂಗಲ್​’ (Dangal) ಚಿತ್ರದ ದಾಖಲೆಯನ್ನು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಧೂಳಿಪಟ ಮಾಡಿದೆ. ಆ ಮೂಲಕ ಭಾರತದಲ್ಲಿ ಹಿಂದಿ ವರ್ಷನ್​ನಿಂದ ಅತಿ ಹೆಚ್ಚು ಕಲೆಕ್ಷನ್​ ಮಾಡಿದ 2ನೇ ಸಿನಿಮಾ ಎಂಬ ಖ್ಯಾತಿ ‘ಕೆಜಿಎಫ್​ 2’ ಚಿತ್ರಕ್ಕೆ ಸಿಕ್ಕಿದೆ. ನಿರ್ದೇಶಕ ಪ್ರಶಾಂತ್​ ನೀಲ್​ ಅವರ ಜನಪ್ರಿಯತೆ ವಿಶ್ವಮಟ್ಟಕ್ಕೆ ಹೆಚ್ಚಿದೆ. ಎಲ್ಲರೂ ಕನ್ನಡ ಚಿತ್ರರಂಗದ ಕಡೆಗೆ ತಿರುಗಿ ನೋಡುವಂತಾಗಿದೆ.

‘ಕೆಜಿಎಫ್​ 1’ ಸೂಪರ್​ ಹಿಟ್​ ಆದಾಗಲೇ ‘ಕೆಜಿಎಫ್​ 2’ ಬಗ್ಗೆ ಅಭಿಮಾನಿಗಳಲ್ಲಿ ಬಹುದೊಡ್ಡ ನಿರೀಕ್ಷೆ ಸೃಷ್ಟಿಯಾಗಿತ್ತು. ‘ಕೆಜಿಎಫ್​ 1’ ತೆರೆಕಂಡಾಗ ಅದರ ಎದುರು ಶಾರುಖ್​ ಖಾನ್​ ನಟನೆಯ ‘ಜೀರೋ’ ಸಿನಿಮಾ ಕೂಡ ಮಣ್ಣು ಮುಕ್ಕಿತ್ತು. ಆದ್ದರಿಂದ ‘ಕೆಜಿಎಫ್​: ಚಾಪ್ಟರ್​ 2’ ಎದುರು ರಿಲೀಸ್​ ಆಗಲು ಹಿಂದಿಯ ಬೇರೆ ಯಾವುದೇ ಸಿನಿಮಾದ ಧೈರ್ಯ ತೋರಿಸಲಿಲ್ಲ. ಅದು ಯಶ್​ ಸಿನಿಮಾಗೆ ಪ್ಲಸ್​ ಪಾಯಿಂಟ್​ ಆಯಿತು.

ಇದನ್ನೂ ಓದಿ
Image
‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ
Image
KGF 3: ‘ಇನ್ನೂ ಭರ್ಜರಿಯಾದ ದೃಶ್ಯಗಳಿವೆ’: ‘ಕೆಜಿಎಫ್​ 3’ ಬಗ್ಗೆ ಮಾಹಿತಿ ಬಹಿರಂಗ ಮಾಡಿದ ಯಶ್​​
Image
‘ಕೆಜಿಎಫ್​ ರೀತಿಯ ಕ್ವಾಲಿಟಿ ಸಿನಿಮಾಗಳ ಸಂಖ್ಯೆ ಹೆಚ್ಚಿಸಿ’: ಕನ್ನಡ ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ
Image
ಮದುವೆ ಆಹ್ವಾನ ಪತ್ರಿಕೆಯಲ್ಲೂ ‘ಕೆಜಿಎಫ್​: ಚಾಪ್ಟರ್​ 2’ ಡೈಲಾಗ್​; ಆದ್ರೆ ಇಲ್ಲಿದೆ ಒಂದು ಟ್ವಿಸ್ಟ್

22ನೇ ದಿನವೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪ್ರತಿ ವೀಕೆಂಡ್​ನಲ್ಲಿ ಹೌಸ್​ಫುಲ್​ ಆಗಿದೆ. ರಂಜಾನ್​ ಇದ್ದಿದ್ದರಿಂದ ಅದರ ಪ್ರಯೋಜನವನ್ನೂ ಈ ಸಿನಿಮಾ ಪಡೆದುಕೊಂಡಿದೆ. 21 ದಿನಕ್ಕೆ ಹಿಂದಿಯಲ್ಲಿ ಈ ಸಿನಿಮಾ ಮಾಡಿರುವುದು ಬರೋಬ್ಬರಿ 391.65 ಕೋಟಿ ರೂಪಾಯಿ! ದಂಗಲ್​ ಸಿನಿಮಾ ಭಾರತೀಯ ಮಾರುಕಟ್ಟೆಯಲ್ಲಿ 387.38 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ 2ನೇ ಸ್ಥಾನದಲ್ಲಿತ್ತು. ಈಗ ಆ ಸ್ಥಾನವನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಕಿತ್ತುಕೊಂಡಿದೆ. ಮೊದಲ ಸ್ಥಾನದಲ್ಲಿ ‘ಬಾಹುಬಲಿ 2’ ಸಿನಿಮಾ ಇದೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರ ಚಾರ್ಮ್​ ಹೆಚ್ಚಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಯಶ್​ ಅವರು ತಮ್ಮ ಡಿಮ್ಯಾಂಡ್​ ಹೆಚ್ಚಿಸಿಕೊಂಡಿದ್ದಾರೆ. ಎಲ್ಲರ ಬಾಯಲ್ಲೂ ನಿರ್ದೇಶಕ ಪ್ರಶಾಂತ್​ ನೀಲ್​ ಹೆಸರು ಕೇಳಿಬರುವಂತಾಗಿದೆ. ನಟಿ ಶ್ರೀನಿಧಿ ಶೆಟ್ಟಿ ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು ಕ್ಯೂ ನಿಲ್ಲುವಂತಾಗಿದೆ. ಇಂಥ ದೈತ್ಯ ಸಿನಿಮಾವನ್ನು ನಿರ್ಮಿಸಿದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಸಖತ್​ ಲಾಭ ಆಗಿದೆ.

‘ದಂಗಲ್​’ ಕಲೆಕ್ಷನ್​ ಅನ್ನು ಹಿಂದಿಕ್ಕಿದ ಬಳಿಕ ‘ಕೆಜಿಎಫ್​ 2’ ಚಿತ್ರ ಈಗ 400 ಕೋಟಿ ಕ್ಲಬ್​ ಸೇರುವುದರತ್ತ ಗಮನ ಹರಿಸಿದೆ. ಇನ್ನೆರಡು ದಿನಗಳಲ್ಲಿ ಅದು ಕೂಡ ಸಾಧ್ಯವಾಗಲಿದೆ. ಇದು ಹಿಂದಿ ಕಲೆಕ್ಷನ್​ ಲೆಕ್ಕಾಚಾರ ಮಾತ್ರ. ವಿಶ್ವಾದ್ಯಂತ ‘ಕೆಜಿಎಫ್​ 2’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿ ಬೀಗುತ್ತಿದೆ. ಚಿತ್ರದ ಟೋಟಲ್​ ಕಲೆಕ್ಷನ್​ ಎಷ್ಟು ಎಂಬ ಲೆಕ್ಕದ ವಿವರವನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ನೀಡಬೇಕಿದೆ. ಅದಕ್ಕಾಗಿ ಫ್ಯಾನ್ಸ್​ ಕಾದಿದ್ದಾರೆ.

ಸಂಜಯ್​ ದತ್​, ರವೀನಾ ಟಂಡನ್​, ಅಯ್ಯಪ್ಪ, ಅಚ್ಯುತ್​ ಕುಮಾರ್​, ವಸಿಷ್ಠ ಸಿಂಹ ಮುಂತಾದವರ ಪಾತ್ರಗಳು ಕೂಡ ‘ಕೆಜಿಎಫ್​ 2’ ಚಿತ್ರದಲ್ಲಿ ಶೈನ್​ ಆಗಿವೆ. ‘ಕೆಜಿಎಫ್​ 3’ ಬಗ್ಗೆ ಈಗ ಟಾಕ್​ ಶುರುವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ