AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: 100 ದಿನ ಪೂರೈಸಿದ ‘ಕೆಜಿಎಫ್​: ಚಾಪ್ಟರ್​ 2’; ಪ್ರೇಕ್ಷಕರಿಗೆ ‘ಹೊಂಬಾಳೆ ಫಿಲ್ಮ್ಸ್​’ ಧನ್ಯವಾದ

KGF 2 Movie 100 Days: ‘ಕೆಜಿಎಫ್​ 2’ ಸಿನಿಮಾ ಬಿಡುಗಡೆಯಾಗಿ 100 ದಿನ ಕಳೆದಿದೆ. ನಟ ಯಶ್​ ಮಾತ್ರವಲ್ಲದೇ ಈ ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರ ವೃತ್ತಿ ಜೀವನಕ್ಕೂ ಭರ್ಜರಿ ಮೈಲೇಜ್​ ಸಿಕ್ಕಿದೆ.

KGF Chapter 2: 100 ದಿನ ಪೂರೈಸಿದ ‘ಕೆಜಿಎಫ್​: ಚಾಪ್ಟರ್​ 2’; ಪ್ರೇಕ್ಷಕರಿಗೆ ‘ಹೊಂಬಾಳೆ ಫಿಲ್ಮ್ಸ್​’ ಧನ್ಯವಾದ
ಕೆಜಿಎಫ್: ಚಾಪ್ಟರ್ 2
TV9 Web
| Edited By: |

Updated on:Jul 22, 2022 | 2:50 PM

Share

ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದ ಸಿನಿಮಾ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ. ಭಾರತೀಯ ಚಿತ್ರರಂಗ ಮಾತ್ರವಲ್ಲದೇ ಇಡೀ ವಿಶ್ವವೇ ಸ್ಯಾಂಡಲ್​ವುಡ್​ ಕಡೆಗೆ ತಿರುಗಿ ನೋಡುವಂತೆ ಮಾಡಿದ ಖ್ಯಾತ ಈ ಚಿತ್ರಕ್ಕೆ ಸಲ್ಲುತ್ತದೆ. ಯಶ್​ (Yash) ವೃತ್ತಿಜೀವನದ ಅತಿ ದೊಡ್ಡ ಸಿನಿಮಾ ಇದು. ಈ ಚಿತ್ರ ಬಿಡುಗಡೆಯಾಗಿ 100 ದಿನಗಳನ್ನು ಪೂರೈಸಿದೆ. ಈ ಖುಷಿಯನ್ನು ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಭ್ರಮಿಸಿದೆ. ಇಷ್ಟು ದೊಡ್ಡ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಲಾಗಿದೆ. ‘ಕೆಜಿಎಫ್​ 2’ ಚಿತ್ರದ ಪ್ರಮುಖ ತುಣುಕುಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ 100 ದಿನಗಳ ಯಶಸ್ವಿ ಪ್ರಯಾಣವನ್ನು ಸಂಭ್ರಮಿಸಲಾಗಿದೆ. ಇಂಥ ಅಭೂತಪೂರ್ವ ಗೆಲುವಿಗೆ ಕಾರಣರಾದ ನಿರ್ದೇಶಕ ಪ್ರಶಾಂತ್​ ನೀಲ್​ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಏಪ್ರಿಲ್​ 14ರಂದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಿಡುಗಡೆ ಆಯಿತು. ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಗಳಲ್ಲಿ ತೆರೆಕಂಡ ಈ ಚಿತ್ರಕ್ಕೆ ಎಲ್ಲ ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಈ ವರ್ಷ ಬಹುದೊಡ್ಡ ಓಪನಿಂಗ್​ ಪಡೆದುಕೊಂಡ ಸಿನಿಮಾ ಎಂಬ ಖ್ಯಾತಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ್ದು. ಈ ಚಿತ್ರದ ಗೆಲುವಿನ ಬಳಿಕ ಯಶ್​ ಅಭಿಮಾನಿಗಳ ಸಂಖ್ಯೆ ಹೇರಳವಾಗಿ ಹೆಚ್ಚಿದೆ.

ಇದನ್ನೂ ಓದಿ
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಬಾಕ್ಸ್​ ಆಫೀಸ್​ನಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ವಿಶ್ವ ಮಾರುಕಟ್ಟೆಯಲ್ಲಿ ಈ ಚಿತ್ರಕ್ಕೆ 1250 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಕೇವಲ ಹಿಂದಿ ವರ್ಷನ್​ನಿಂದಲೇ 434 ಕೋಟಿ ರೂಪಾಯಿ ಸಂಗ್ರಹ ಆಗಿದೆ. ಇದು ಬಾಲಿವುಡ್​ ಮಂದಿಯನ್ನೂ ನಿಬ್ಬೆರಗಾಗಿಸಿದ ಸಾಧನೆ. ನಿರ್ಮಾಪಕ ವಿಜಯ್​ ಕಿರಗಂದೂರು ಅವರಿಗೆ ಈ ಸಿನಿಮಾದಿಂದ ಅತಿ ದೊಡ್ಡ ಗೆಲುವು ಸಿಕ್ಕಿದೆ.

‘ಕೆಜಿಎಫ್​ 2’ ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರ ವೃತ್ತಿ ಜೀವನದ ಮೈಲೇಜ್​ ಹೆಚ್ಚಿದೆ. ನಟ ಯಶ್​ ಅವರು ನ್ಯಾಷನಲ್​ ಸ್ಟಾರ್ ಆಗಿದ್ದಾರೆ. ಅವರ ಮುಂದಿನ ಸಿನಿಮಾ ಯಾವುದು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಸಿಕ್ಕಾಪಟ್ಟೆ ಆಫರ್​ ಬರುತ್ತಿದೆ. ನಿರ್ದೇಶಕ ಪ್ರಶಾಂತ್​ ನೀಲ್​ ಜೊತೆ ಸಿನಿಮಾ ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಮುಂದೆ ಬಂದಿವೆ. ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್​ ಅವರು ಸಖತ್​ ಬ್ಯುಸಿ ಆಗಿದ್ದಾರೆ.

Published On - 12:27 pm, Fri, 22 July 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?