AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಮುಗಿದಿಲ್ಲ ‘ಕೆಜಿಎಫ್​ 2’ ಚಿತ್ರದ ಶೂಟಿಂಗ್​; ಫ್ಯಾನ್ಸ್​ಗಾಗಿ ನಿರ್ಧಾರ ಬದಲಿಸಿದ ಪ್ರಶಾಂತ್ ನೀಲ್​

ಯಶ್​ ಅಭಿಮಾನಿಗಳಿಗೆ ಅತ್ಯುತ್ತಮವಾದದ್ದನ್ನೇ ನೀಡಬೇಕು ಎಂಬುದು ಪ್ರಶಾಂತ್​ ನೀಲ್​ ಆಶಯ. ಆ ಕಾರಣದಿಂದ ಅವರು ಒಂದು ಹಾಡಿನ ಮರುಚಿತ್ರೀಕರಣಕ್ಕೆ ತೀರ್ಮಾನಿಸಿದ್ದಾರೆ.

ಇನ್ನೂ ಮುಗಿದಿಲ್ಲ ‘ಕೆಜಿಎಫ್​ 2’ ಚಿತ್ರದ ಶೂಟಿಂಗ್​; ಫ್ಯಾನ್ಸ್​ಗಾಗಿ ನಿರ್ಧಾರ ಬದಲಿಸಿದ ಪ್ರಶಾಂತ್ ನೀಲ್​
ಯಶ್​, ಪ್ರಶಾಂತ್​ ನೀಲ್​
TV9 Web
| Edited By: |

Updated on: Feb 16, 2022 | 5:54 PM

Share

ಸಿನಿಪ್ರಿಯರು ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ‘ರಾಕಿಂಗ್​ ಸ್ಟಾರ್​’ ಯಶ್​ (Yash) ಮತ್ತು ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಗ್ಗೆ ದೇಶಾದ್ಯಂತ ಹೈಪ್​ ಸೃಷ್ಟಿ ಆಗಿದೆ. ಟೀಸರ್​ ಮೂಲಕ ಈ ಸಿನಿಮಾ ಸಖತ್​ ನಿರೀಕ್ಷೆ ಮೂಡಿಸಿದೆ. ಏ.14ರಂದು ಸಿನಿಮಾ ತೆರೆಕಾಣಿಸಲು ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾದರೆ ಸದ್ಯ ಈ ಚಿತ್ರದ ಕೆಲಸಗಳು ಯಾವ ಹಂತದಲ್ಲಿವೆ? ಅಚ್ಚರಿ ಏನೆಂದರೆ ‘ಕೆಜಿಎಫ್ 2’ ಸಿನಿಮಾದ ಶೂಟಿಂಗ್​ ಇನ್ನೂ ಮುಗಿದಿಲ್ಲ ಎಂಬ ಮಾಹಿತಿ ಕೇಳಿಬಂದಿದೆ. ರಿಲೀಸ್​ ದಿನಾಂಕ ಸಮೀಪಿಸುತ್ತಿದ್ದರೂ ಕೂಡ ಚಿತ್ರೀಕರಣ ಮುಕ್ತಾಯ ಆಗಿಲ್ಲ. ಅದಕ್ಕೆ ಕಾರಣ ಕೂಡ ಇದೆ. ಗುಣಮಟ್ಟದ ವಿಚಾರದಲ್ಲಿ ಪ್ರಶಾಂತ್​ ನೀಲ್​ (Prashanth Neel) ರಾಜಿ ಆಗುವವರಲ್ಲ. ಹಾಗಾಗಿ ಅವರು ಈಗೊಂದು ಹೊಸ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀರೋ ಇಂಟ್ರೊಡಕ್ಷನ್​ ಹಾಡನ್ನು ಮರು ಚಿತ್ರೀಕರಣ ಮಾಡಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡದಲ್ಲಿ ಚರ್ಚೆ ನಡೆದಿದೆ. ಈ ಹಾಡಿಗಾಗಿ ಇನ್ನೂ 5 ದಿನಗಳ ಕಾಲ ಶೂಟಿಂಗ್​ ನಡೆಯಬೇಕಿದೆ.

‘ಕೆಜಿಎಫ್​: ಚಾಪ್ಟರ್​ 1’ ಚಿತ್ರದಲ್ಲಿ ಹಾಡುಗಳು ಮಹತ್ವದ ಪಾತ್ರ ವಹಿಸಿದ್ದವು. ರವಿ ಬಸ್ರೂರು ಸಂಗೀತ ನೀಡಿದ್ದ ಗೀತೆಗಳು ಸೂಪರ್​ ಹಿಟ್​ ಆಗಿದ್ದವು. ಅದೇ ರೀತಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿಯೂ ಕೂಡ ಹಾಡುಗಳಿಗೆ ಮಹತ್ವ ನೀಡಲಾಗಿದೆ. ಈ ಚಿತ್ರದ ಹೀರೋ ಇಂಟ್ರಡಕ್ಷನ್​ ಹಾಡನ್ನು ಈಗಾಗಲೇ ಚಿತ್ರೀಕರಿಸಲಾಗಿತ್ತು. ಆದರೆ ಆ ಗೀತೆ ಮೂಡಿಬಂದಿರುವ ಬಗ್ಗೆ ನಿರ್ದೇಶಕರಿಗೆ ಸಮಾಧಾನ ಆದಂತಿಲ್ಲ. ಹಾಗಾಗಿ ಆ ಹಾಡನ್ನು ಮತ್ತೊಮ್ಮೆ ಹೊಸದಾಗಿ ಚಿತ್ರೀಕರಿಸಲು ನಿರ್ಧರಿಸಲಾಗಿದೆ ಎಂಬ ಮಾತು ಕೇಳಿಬಂದಿದೆ.

ಎ. ಹರ್ಷ ಅವರು ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಲಿದ್ದಾರೆ. ಕೆಲವೇ ದಿನಗಳಲ್ಲಿ ಹೈದರಾಬಾದ್​ನಲ್ಲಿ ಶೂಟಿಂಗ್​ ಆರಂಭ ಆಗಲಿದೆ. ಅಂದಾಜು 5 ದಿನಗಳ ಕಾಲ ಹಾಡನ್ನು ಚಿತ್ರೀಕರಿಸಲು ಪ್ಲ್ಯಾನ್​ ಮಾಡಲಾಗಿದೆ. ಯಶ್​ ಅಭಿಮಾನಿಗಳಿಗೆ ಅತ್ಯುತ್ತಮವಾದದ್ದನ್ನೇ ನೀಡಬೇಕು ಎಂಬುದು ಪ್ರಶಾಂತ್​ ನೀಲ್​ ಆಶಯ. ಆ ಕಾರಣದಿಂದ ಅವರು ಹಾಡಿನ ಮರುಚಿತ್ರೀಕರಣಕ್ಕೆ ತೀರ್ಮಾನಿಸಿದ್ದಾರೆ. ಈ ಹಾಡು ಹೇಗೆ ಮೂಡಿಬರಬಹುದು ಎಂಬ ಕುತೂಹಲ ಈಗ ಸೃಷ್ಟಿ ಆಗಿದೆ.

ಹಲವು ಕಾರಣಗಳಿಂದಾಗಿ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ನಿರೀಕ್ಷೆ ಮೂಡಿಸಿದೆ. ಬಾಲಿವುಡ್ ಸೆಲೆಬ್ರಿಟಿಗಳಾದ ಸಂಜಯ್​ ದತ್​, ರವೀನಾ ಟಂಡನ್​ ಅವರು ಈ ಚಿತ್ರದಲ್ಲಿ ನಟಿಸಿರುವುದರಿಂದ ಹಿಂದಿ ಪ್ರೇಕ್ಷಕರ ವಲಯದಲ್ಲೂ ನಿರೀಕ್ಷೆ ಹೆಚ್ಚಿದೆ. ‘ಕೆಜಿಎಫ್​ 2’ ಎದುರು ತೆರೆಕಾಣಲು ಪರಭಾಷೆಯ ಸ್ಟಾರ್​ ಸಿನಿಮಾಗಳು ಕೂಡ ಹಿಂದೇಟು ಹಾಕುತ್ತಿವೆ. ಆ ಕಾರಣದಿಂದ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚೆಡ್ಡಾ’ ಸಿನಿಮಾ ಕೂಡ ತನ್ನ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದೆ.

ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್​ 2’ ಚಿತ್ರದ ಮ್ಯೂಸಿಕ್​ ಕೆಲಸಗಳು​​ ನಡೆಯುತ್ತಿವೆ. ಇತ್ತೀಚೆಗೆ ‘ಕೆಜಿಎಫ್​ 2’ ಸಿನಿಮಾ ತಂಡದ ಜತೆ ಯಶ್ ಕೂಡ ಅಲ್ಲಿಗೆ ತೆರಳಿದ್ದರು. ಈ ಮಧ್ಯೆ ಯಶ್​ ಅವರು ಕುಂಬಾಶಿಯ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದರು.

ಇದನ್ನೂ ಓದಿ:

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

‘ಕೆಜಿಎಫ್​ 2’ ಜತೆಗಿನ ರೇಸ್​​ನಿಂದ ಹಿಂದೆ ಸರಿದ ‘ಲಾಲ್​ ಸಿಂಗ್​ ಛಡ್ಡಾ’​; ಆಮಿರ್​ ಖಾನ್ ನೀಡಿದ ಕಾರಣ ಏನು?

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ