AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಮುಗಿದಿಲ್ಲ ‘ಕೆಜಿಎಫ್​ 2’ ಚಿತ್ರದ ಶೂಟಿಂಗ್​; ಫ್ಯಾನ್ಸ್​ಗಾಗಿ ನಿರ್ಧಾರ ಬದಲಿಸಿದ ಪ್ರಶಾಂತ್ ನೀಲ್​

ಯಶ್​ ಅಭಿಮಾನಿಗಳಿಗೆ ಅತ್ಯುತ್ತಮವಾದದ್ದನ್ನೇ ನೀಡಬೇಕು ಎಂಬುದು ಪ್ರಶಾಂತ್​ ನೀಲ್​ ಆಶಯ. ಆ ಕಾರಣದಿಂದ ಅವರು ಒಂದು ಹಾಡಿನ ಮರುಚಿತ್ರೀಕರಣಕ್ಕೆ ತೀರ್ಮಾನಿಸಿದ್ದಾರೆ.

ಇನ್ನೂ ಮುಗಿದಿಲ್ಲ ‘ಕೆಜಿಎಫ್​ 2’ ಚಿತ್ರದ ಶೂಟಿಂಗ್​; ಫ್ಯಾನ್ಸ್​ಗಾಗಿ ನಿರ್ಧಾರ ಬದಲಿಸಿದ ಪ್ರಶಾಂತ್ ನೀಲ್​
ಯಶ್​, ಪ್ರಶಾಂತ್​ ನೀಲ್​
TV9 Web
| Edited By: |

Updated on: Feb 16, 2022 | 5:54 PM

Share

ಸಿನಿಪ್ರಿಯರು ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ‘ರಾಕಿಂಗ್​ ಸ್ಟಾರ್​’ ಯಶ್​ (Yash) ಮತ್ತು ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಗ್ಗೆ ದೇಶಾದ್ಯಂತ ಹೈಪ್​ ಸೃಷ್ಟಿ ಆಗಿದೆ. ಟೀಸರ್​ ಮೂಲಕ ಈ ಸಿನಿಮಾ ಸಖತ್​ ನಿರೀಕ್ಷೆ ಮೂಡಿಸಿದೆ. ಏ.14ರಂದು ಸಿನಿಮಾ ತೆರೆಕಾಣಿಸಲು ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾದರೆ ಸದ್ಯ ಈ ಚಿತ್ರದ ಕೆಲಸಗಳು ಯಾವ ಹಂತದಲ್ಲಿವೆ? ಅಚ್ಚರಿ ಏನೆಂದರೆ ‘ಕೆಜಿಎಫ್ 2’ ಸಿನಿಮಾದ ಶೂಟಿಂಗ್​ ಇನ್ನೂ ಮುಗಿದಿಲ್ಲ ಎಂಬ ಮಾಹಿತಿ ಕೇಳಿಬಂದಿದೆ. ರಿಲೀಸ್​ ದಿನಾಂಕ ಸಮೀಪಿಸುತ್ತಿದ್ದರೂ ಕೂಡ ಚಿತ್ರೀಕರಣ ಮುಕ್ತಾಯ ಆಗಿಲ್ಲ. ಅದಕ್ಕೆ ಕಾರಣ ಕೂಡ ಇದೆ. ಗುಣಮಟ್ಟದ ವಿಚಾರದಲ್ಲಿ ಪ್ರಶಾಂತ್​ ನೀಲ್​ (Prashanth Neel) ರಾಜಿ ಆಗುವವರಲ್ಲ. ಹಾಗಾಗಿ ಅವರು ಈಗೊಂದು ಹೊಸ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀರೋ ಇಂಟ್ರೊಡಕ್ಷನ್​ ಹಾಡನ್ನು ಮರು ಚಿತ್ರೀಕರಣ ಮಾಡಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡದಲ್ಲಿ ಚರ್ಚೆ ನಡೆದಿದೆ. ಈ ಹಾಡಿಗಾಗಿ ಇನ್ನೂ 5 ದಿನಗಳ ಕಾಲ ಶೂಟಿಂಗ್​ ನಡೆಯಬೇಕಿದೆ.

‘ಕೆಜಿಎಫ್​: ಚಾಪ್ಟರ್​ 1’ ಚಿತ್ರದಲ್ಲಿ ಹಾಡುಗಳು ಮಹತ್ವದ ಪಾತ್ರ ವಹಿಸಿದ್ದವು. ರವಿ ಬಸ್ರೂರು ಸಂಗೀತ ನೀಡಿದ್ದ ಗೀತೆಗಳು ಸೂಪರ್​ ಹಿಟ್​ ಆಗಿದ್ದವು. ಅದೇ ರೀತಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿಯೂ ಕೂಡ ಹಾಡುಗಳಿಗೆ ಮಹತ್ವ ನೀಡಲಾಗಿದೆ. ಈ ಚಿತ್ರದ ಹೀರೋ ಇಂಟ್ರಡಕ್ಷನ್​ ಹಾಡನ್ನು ಈಗಾಗಲೇ ಚಿತ್ರೀಕರಿಸಲಾಗಿತ್ತು. ಆದರೆ ಆ ಗೀತೆ ಮೂಡಿಬಂದಿರುವ ಬಗ್ಗೆ ನಿರ್ದೇಶಕರಿಗೆ ಸಮಾಧಾನ ಆದಂತಿಲ್ಲ. ಹಾಗಾಗಿ ಆ ಹಾಡನ್ನು ಮತ್ತೊಮ್ಮೆ ಹೊಸದಾಗಿ ಚಿತ್ರೀಕರಿಸಲು ನಿರ್ಧರಿಸಲಾಗಿದೆ ಎಂಬ ಮಾತು ಕೇಳಿಬಂದಿದೆ.

ಎ. ಹರ್ಷ ಅವರು ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಲಿದ್ದಾರೆ. ಕೆಲವೇ ದಿನಗಳಲ್ಲಿ ಹೈದರಾಬಾದ್​ನಲ್ಲಿ ಶೂಟಿಂಗ್​ ಆರಂಭ ಆಗಲಿದೆ. ಅಂದಾಜು 5 ದಿನಗಳ ಕಾಲ ಹಾಡನ್ನು ಚಿತ್ರೀಕರಿಸಲು ಪ್ಲ್ಯಾನ್​ ಮಾಡಲಾಗಿದೆ. ಯಶ್​ ಅಭಿಮಾನಿಗಳಿಗೆ ಅತ್ಯುತ್ತಮವಾದದ್ದನ್ನೇ ನೀಡಬೇಕು ಎಂಬುದು ಪ್ರಶಾಂತ್​ ನೀಲ್​ ಆಶಯ. ಆ ಕಾರಣದಿಂದ ಅವರು ಹಾಡಿನ ಮರುಚಿತ್ರೀಕರಣಕ್ಕೆ ತೀರ್ಮಾನಿಸಿದ್ದಾರೆ. ಈ ಹಾಡು ಹೇಗೆ ಮೂಡಿಬರಬಹುದು ಎಂಬ ಕುತೂಹಲ ಈಗ ಸೃಷ್ಟಿ ಆಗಿದೆ.

ಹಲವು ಕಾರಣಗಳಿಂದಾಗಿ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ನಿರೀಕ್ಷೆ ಮೂಡಿಸಿದೆ. ಬಾಲಿವುಡ್ ಸೆಲೆಬ್ರಿಟಿಗಳಾದ ಸಂಜಯ್​ ದತ್​, ರವೀನಾ ಟಂಡನ್​ ಅವರು ಈ ಚಿತ್ರದಲ್ಲಿ ನಟಿಸಿರುವುದರಿಂದ ಹಿಂದಿ ಪ್ರೇಕ್ಷಕರ ವಲಯದಲ್ಲೂ ನಿರೀಕ್ಷೆ ಹೆಚ್ಚಿದೆ. ‘ಕೆಜಿಎಫ್​ 2’ ಎದುರು ತೆರೆಕಾಣಲು ಪರಭಾಷೆಯ ಸ್ಟಾರ್​ ಸಿನಿಮಾಗಳು ಕೂಡ ಹಿಂದೇಟು ಹಾಕುತ್ತಿವೆ. ಆ ಕಾರಣದಿಂದ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚೆಡ್ಡಾ’ ಸಿನಿಮಾ ಕೂಡ ತನ್ನ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದೆ.

ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್​ 2’ ಚಿತ್ರದ ಮ್ಯೂಸಿಕ್​ ಕೆಲಸಗಳು​​ ನಡೆಯುತ್ತಿವೆ. ಇತ್ತೀಚೆಗೆ ‘ಕೆಜಿಎಫ್​ 2’ ಸಿನಿಮಾ ತಂಡದ ಜತೆ ಯಶ್ ಕೂಡ ಅಲ್ಲಿಗೆ ತೆರಳಿದ್ದರು. ಈ ಮಧ್ಯೆ ಯಶ್​ ಅವರು ಕುಂಬಾಶಿಯ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದರು.

ಇದನ್ನೂ ಓದಿ:

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

‘ಕೆಜಿಎಫ್​ 2’ ಜತೆಗಿನ ರೇಸ್​​ನಿಂದ ಹಿಂದೆ ಸರಿದ ‘ಲಾಲ್​ ಸಿಂಗ್​ ಛಡ್ಡಾ’​; ಆಮಿರ್​ ಖಾನ್ ನೀಡಿದ ಕಾರಣ ಏನು?

Follow Us
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು