AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಮುಗಿದಿಲ್ಲ ‘ಕೆಜಿಎಫ್​ 2’ ಚಿತ್ರದ ಶೂಟಿಂಗ್​; ಫ್ಯಾನ್ಸ್​ಗಾಗಿ ನಿರ್ಧಾರ ಬದಲಿಸಿದ ಪ್ರಶಾಂತ್ ನೀಲ್​

ಯಶ್​ ಅಭಿಮಾನಿಗಳಿಗೆ ಅತ್ಯುತ್ತಮವಾದದ್ದನ್ನೇ ನೀಡಬೇಕು ಎಂಬುದು ಪ್ರಶಾಂತ್​ ನೀಲ್​ ಆಶಯ. ಆ ಕಾರಣದಿಂದ ಅವರು ಒಂದು ಹಾಡಿನ ಮರುಚಿತ್ರೀಕರಣಕ್ಕೆ ತೀರ್ಮಾನಿಸಿದ್ದಾರೆ.

ಇನ್ನೂ ಮುಗಿದಿಲ್ಲ ‘ಕೆಜಿಎಫ್​ 2’ ಚಿತ್ರದ ಶೂಟಿಂಗ್​; ಫ್ಯಾನ್ಸ್​ಗಾಗಿ ನಿರ್ಧಾರ ಬದಲಿಸಿದ ಪ್ರಶಾಂತ್ ನೀಲ್​
ಯಶ್​, ಪ್ರಶಾಂತ್​ ನೀಲ್​
TV9 Web
| Updated By: ಮದನ್​ ಕುಮಾರ್​|

Updated on: Feb 16, 2022 | 5:54 PM

Share

ಸಿನಿಪ್ರಿಯರು ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ‘ರಾಕಿಂಗ್​ ಸ್ಟಾರ್​’ ಯಶ್​ (Yash) ಮತ್ತು ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಗ್ಗೆ ದೇಶಾದ್ಯಂತ ಹೈಪ್​ ಸೃಷ್ಟಿ ಆಗಿದೆ. ಟೀಸರ್​ ಮೂಲಕ ಈ ಸಿನಿಮಾ ಸಖತ್​ ನಿರೀಕ್ಷೆ ಮೂಡಿಸಿದೆ. ಏ.14ರಂದು ಸಿನಿಮಾ ತೆರೆಕಾಣಿಸಲು ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾದರೆ ಸದ್ಯ ಈ ಚಿತ್ರದ ಕೆಲಸಗಳು ಯಾವ ಹಂತದಲ್ಲಿವೆ? ಅಚ್ಚರಿ ಏನೆಂದರೆ ‘ಕೆಜಿಎಫ್ 2’ ಸಿನಿಮಾದ ಶೂಟಿಂಗ್​ ಇನ್ನೂ ಮುಗಿದಿಲ್ಲ ಎಂಬ ಮಾಹಿತಿ ಕೇಳಿಬಂದಿದೆ. ರಿಲೀಸ್​ ದಿನಾಂಕ ಸಮೀಪಿಸುತ್ತಿದ್ದರೂ ಕೂಡ ಚಿತ್ರೀಕರಣ ಮುಕ್ತಾಯ ಆಗಿಲ್ಲ. ಅದಕ್ಕೆ ಕಾರಣ ಕೂಡ ಇದೆ. ಗುಣಮಟ್ಟದ ವಿಚಾರದಲ್ಲಿ ಪ್ರಶಾಂತ್​ ನೀಲ್​ (Prashanth Neel) ರಾಜಿ ಆಗುವವರಲ್ಲ. ಹಾಗಾಗಿ ಅವರು ಈಗೊಂದು ಹೊಸ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀರೋ ಇಂಟ್ರೊಡಕ್ಷನ್​ ಹಾಡನ್ನು ಮರು ಚಿತ್ರೀಕರಣ ಮಾಡಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡದಲ್ಲಿ ಚರ್ಚೆ ನಡೆದಿದೆ. ಈ ಹಾಡಿಗಾಗಿ ಇನ್ನೂ 5 ದಿನಗಳ ಕಾಲ ಶೂಟಿಂಗ್​ ನಡೆಯಬೇಕಿದೆ.

‘ಕೆಜಿಎಫ್​: ಚಾಪ್ಟರ್​ 1’ ಚಿತ್ರದಲ್ಲಿ ಹಾಡುಗಳು ಮಹತ್ವದ ಪಾತ್ರ ವಹಿಸಿದ್ದವು. ರವಿ ಬಸ್ರೂರು ಸಂಗೀತ ನೀಡಿದ್ದ ಗೀತೆಗಳು ಸೂಪರ್​ ಹಿಟ್​ ಆಗಿದ್ದವು. ಅದೇ ರೀತಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿಯೂ ಕೂಡ ಹಾಡುಗಳಿಗೆ ಮಹತ್ವ ನೀಡಲಾಗಿದೆ. ಈ ಚಿತ್ರದ ಹೀರೋ ಇಂಟ್ರಡಕ್ಷನ್​ ಹಾಡನ್ನು ಈಗಾಗಲೇ ಚಿತ್ರೀಕರಿಸಲಾಗಿತ್ತು. ಆದರೆ ಆ ಗೀತೆ ಮೂಡಿಬಂದಿರುವ ಬಗ್ಗೆ ನಿರ್ದೇಶಕರಿಗೆ ಸಮಾಧಾನ ಆದಂತಿಲ್ಲ. ಹಾಗಾಗಿ ಆ ಹಾಡನ್ನು ಮತ್ತೊಮ್ಮೆ ಹೊಸದಾಗಿ ಚಿತ್ರೀಕರಿಸಲು ನಿರ್ಧರಿಸಲಾಗಿದೆ ಎಂಬ ಮಾತು ಕೇಳಿಬಂದಿದೆ.

ಎ. ಹರ್ಷ ಅವರು ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಲಿದ್ದಾರೆ. ಕೆಲವೇ ದಿನಗಳಲ್ಲಿ ಹೈದರಾಬಾದ್​ನಲ್ಲಿ ಶೂಟಿಂಗ್​ ಆರಂಭ ಆಗಲಿದೆ. ಅಂದಾಜು 5 ದಿನಗಳ ಕಾಲ ಹಾಡನ್ನು ಚಿತ್ರೀಕರಿಸಲು ಪ್ಲ್ಯಾನ್​ ಮಾಡಲಾಗಿದೆ. ಯಶ್​ ಅಭಿಮಾನಿಗಳಿಗೆ ಅತ್ಯುತ್ತಮವಾದದ್ದನ್ನೇ ನೀಡಬೇಕು ಎಂಬುದು ಪ್ರಶಾಂತ್​ ನೀಲ್​ ಆಶಯ. ಆ ಕಾರಣದಿಂದ ಅವರು ಹಾಡಿನ ಮರುಚಿತ್ರೀಕರಣಕ್ಕೆ ತೀರ್ಮಾನಿಸಿದ್ದಾರೆ. ಈ ಹಾಡು ಹೇಗೆ ಮೂಡಿಬರಬಹುದು ಎಂಬ ಕುತೂಹಲ ಈಗ ಸೃಷ್ಟಿ ಆಗಿದೆ.

ಹಲವು ಕಾರಣಗಳಿಂದಾಗಿ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ನಿರೀಕ್ಷೆ ಮೂಡಿಸಿದೆ. ಬಾಲಿವುಡ್ ಸೆಲೆಬ್ರಿಟಿಗಳಾದ ಸಂಜಯ್​ ದತ್​, ರವೀನಾ ಟಂಡನ್​ ಅವರು ಈ ಚಿತ್ರದಲ್ಲಿ ನಟಿಸಿರುವುದರಿಂದ ಹಿಂದಿ ಪ್ರೇಕ್ಷಕರ ವಲಯದಲ್ಲೂ ನಿರೀಕ್ಷೆ ಹೆಚ್ಚಿದೆ. ‘ಕೆಜಿಎಫ್​ 2’ ಎದುರು ತೆರೆಕಾಣಲು ಪರಭಾಷೆಯ ಸ್ಟಾರ್​ ಸಿನಿಮಾಗಳು ಕೂಡ ಹಿಂದೇಟು ಹಾಕುತ್ತಿವೆ. ಆ ಕಾರಣದಿಂದ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚೆಡ್ಡಾ’ ಸಿನಿಮಾ ಕೂಡ ತನ್ನ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದೆ.

ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್​ 2’ ಚಿತ್ರದ ಮ್ಯೂಸಿಕ್​ ಕೆಲಸಗಳು​​ ನಡೆಯುತ್ತಿವೆ. ಇತ್ತೀಚೆಗೆ ‘ಕೆಜಿಎಫ್​ 2’ ಸಿನಿಮಾ ತಂಡದ ಜತೆ ಯಶ್ ಕೂಡ ಅಲ್ಲಿಗೆ ತೆರಳಿದ್ದರು. ಈ ಮಧ್ಯೆ ಯಶ್​ ಅವರು ಕುಂಬಾಶಿಯ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದರು.

ಇದನ್ನೂ ಓದಿ:

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

‘ಕೆಜಿಎಫ್​ 2’ ಜತೆಗಿನ ರೇಸ್​​ನಿಂದ ಹಿಂದೆ ಸರಿದ ‘ಲಾಲ್​ ಸಿಂಗ್​ ಛಡ್ಡಾ’​; ಆಮಿರ್​ ಖಾನ್ ನೀಡಿದ ಕಾರಣ ಏನು?

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ