AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ 2 ಸಿನಿಮಾ ಅವಧಿ ಬರೋಬ್ಬರಿ 3 ಗಂಟೆ ಇದೆಯಾ? ಕೇಳಿಬರ್ತಿದೆ ಹೊಸ ಗುಸುಗುಸು

2ನೇ ಚಾಪ್ಟರ್​ನಲ್ಲಿ ಹೇಳಬೇಕಾದ ವಿಚಾರಗಳು ಸಾಕಷ್ಟು ಇರುವುದರಿಂದ ಸಹಜವಾಗಿಯೇ ಚಿತ್ರದ ಅವಧಿ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೆಜಿಎಫ್​ 2 ಸಿನಿಮಾ ಅವಧಿ ಬರೋಬ್ಬರಿ 3 ಗಂಟೆ ಇದೆಯಾ? ಕೇಳಿಬರ್ತಿದೆ ಹೊಸ ಗುಸುಗುಸು
ಕೆಜಿಎಫ್​ ಸಿನಿಮಾದಲ್ಲಿ ನಟ ಯಶ್​
ಮದನ್​ ಕುಮಾರ್​
|

Updated on: May 06, 2021 | 1:38 PM

Share

ಕೆಜಿಎಫ್​ ಚಾಪ್ಟರ್​ 1 ಸಿನಿಮಾ ಭರ್ಜರಿ ಹಿಟ್​ ಆಗಿದ್ದರಿಂದ ಸಹಜವಾಗಿಯೇ ಚಾಪ್ಟರ್​ 2 ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವಂತಹ ಹೊಸ ಹೊಸ ಸುದ್ದಿಗಳು ಕೇಳಿಬರುತ್ತಿವೆ. ಈ ಚಿತ್ರದಲ್ಲಿ ಬಾಲಿವುಡ್​ನ ಜನಪ್ರಿಯ ಐಟಂ ಡ್ಯಾನ್ಸರ್​ ನೋರಾ ಫತೇಹಿ ಹೆಜ್ಜೆ ಹಾಕಿದ್ದಾರೆ ಎಂಬ ಸುದ್ದಿ ಕೆಲವೇ ದಿನಗಳ ಹಿಂದೆ ಕೇಳಿಬಂದಿತ್ತು. ಈಗ ಚಿತ್ರದ ಅವಧಿ ಬಗ್ಗೆ ಗುಸುಗುಸು ಹರಿದಾಡುತ್ತಿದೆ. ಮೂಲಗಳ ಪ್ರಕಾರ ಈ ಚಿತ್ರದ ಒಟ್ಟು ಅವಧಿ 2 ಗಂಟೆ 52 ನಿಮಿಷ ಎಂದು ಹೇಳಲಾಗುತ್ತಿದೆ.

ರಾಕಿಂಗ್​ ಸ್ಟಾರ್​ ಯಶ್​ ನಟನೆಯ ಈ ಚಿತ್ರದ ಕೆಲಸಗಳು ಇನ್ನೂ ನಡೆಯುತ್ತಿವೆ. ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಬೇಕು ಎಂಬ ಉದ್ದೇಶದಿಂದ ನಿರ್ದೇಶಕ ಪ್ರಶಾಂತ್​ ನೀಲ್​ ಶ್ರಮಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ 16ರಂದು ಕೆಜಿಎಫ್​ 2 ತೆರೆಕಾಣಬೇಕು. ಆದರೆ ಕೊರೊನಾ ವೈರಸ್​ ಹಾವಳಿ ಜೋರಾಗಿರುವುದರಿಂದ ಚಿತ್ರದ ರಿಲೀಸ್​ ದಿನಾಂಕ​ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಸಿನಿಮಾದ ಅವಧಿ ಬಗ್ಗೆ ಹರಿದಾಡುತ್ತಿರುವ ವಿಷಯ ಕೇಳಿದರೆ ಫ್ಯಾನ್ಸ್​ ಥ್ರಿಲ್​ ಆಗುವುದು ಗ್ಯಾರಂಟಿ.

‘ಕೆಜಿಎಫ್​ ಚಾಪ್ಟರ್​ 1’ ಸಿನಿಮಾದ ಅವಧಿ 2 ಗಂಟೆ 35 ನಿಮಿಷ ಆಗಿತ್ತು. ಆದರೆ ‘ಕೆಜಿಎಫ್​ ಚಾಪ್ಟರ್​ 2’ ತುಂಬಾ ದೀರ್ಘವಾಗಿ ಇರಲಿದೆಯಂತೆ. ಅಂದಾಜು ಮೂರು ಗಂಟೆಗಳು ಇರಲಿದೆ ಎಂಬ ಮಾತು ಕೇಳಿಬರುತ್ತಿದೆ. 2ನೇ ಚಾಪ್ಟರ್​ನಲ್ಲಿ ಹೇಳಬೇಕಾದ ವಿಚಾರಗಳು ಸಾಕಷ್ಟು ಇರುವುದರಿಂದ ಸಹಜವಾಗಿಯೇ ಚಿತ್ರದ ಅವಧಿ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಆದರೆ ಚಿತ್ರಕ್ಕೆ ಸೆನ್ಸಾರ್​ ಆಗದ ಹೊರತು ಅವಧಿಯ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವೇ ಇಲ್ಲ. ಈ ಬಗ್ಗೆ ಚಿತ್ರತಂಡ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಯಶ್​ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಆಗಮಿಸಿರುವುದರಿಂದ ಚಿತ್ರದ ತೂಕ ಹೆಚ್ಚಿದೆ. ಬಹುಭಾಷಾ ನಟ ಪ್ರಕಾಶ್​ ರಾಜ್​ ಕೂಡ ಈ ಬಾರಿ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಇಂಥ ಘಟಾನುಘಟಿ ಕಲಾವಿದರ ಸಂಗಮದಿಂದಾಗಿ ‘ಕೆಜಿಎಫ್​ ಚಾಪ್ಟರ್​ 2’ ಚಿತ್ರ ಹೈಪ್​ ಸೃಷ್ಟಿಸಿದೆ.

ಇದನ್ನೂ ಓದಿ:

ಸೈಲೆಂಟಾಗಿ ಕೆಜಿಎಫ್​-2 ಚಿತ್ರ ತಂಡ ಸೇರಿಕೊಂಡ ಮತ್ತೋರ್ವ ಬಾಲಿವುಡ್​ ನಟಿ

ಕೆಜಿಎಫ್​-2 ಹಿಂದಿ ಅವತರಣಿಕೆ​ಗೆ ಯಶ್​ ಡಬ್​ ಮಾಡ್ತಾರಾ?; ಇಲ್ಲಿದೆ ಉತ್ತರ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ