ಕೆಜಿಎಫ್​ 2 ಸಿನಿಮಾ ಅವಧಿ ಬರೋಬ್ಬರಿ 3 ಗಂಟೆ ಇದೆಯಾ? ಕೇಳಿಬರ್ತಿದೆ ಹೊಸ ಗುಸುಗುಸು

2ನೇ ಚಾಪ್ಟರ್​ನಲ್ಲಿ ಹೇಳಬೇಕಾದ ವಿಚಾರಗಳು ಸಾಕಷ್ಟು ಇರುವುದರಿಂದ ಸಹಜವಾಗಿಯೇ ಚಿತ್ರದ ಅವಧಿ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೆಜಿಎಫ್​ 2 ಸಿನಿಮಾ ಅವಧಿ ಬರೋಬ್ಬರಿ 3 ಗಂಟೆ ಇದೆಯಾ? ಕೇಳಿಬರ್ತಿದೆ ಹೊಸ ಗುಸುಗುಸು
ಕೆಜಿಎಫ್​ ಸಿನಿಮಾದಲ್ಲಿ ನಟ ಯಶ್​
Follow us
|

Updated on: May 06, 2021 | 1:38 PM

ಕೆಜಿಎಫ್​ ಚಾಪ್ಟರ್​ 1 ಸಿನಿಮಾ ಭರ್ಜರಿ ಹಿಟ್​ ಆಗಿದ್ದರಿಂದ ಸಹಜವಾಗಿಯೇ ಚಾಪ್ಟರ್​ 2 ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವಂತಹ ಹೊಸ ಹೊಸ ಸುದ್ದಿಗಳು ಕೇಳಿಬರುತ್ತಿವೆ. ಈ ಚಿತ್ರದಲ್ಲಿ ಬಾಲಿವುಡ್​ನ ಜನಪ್ರಿಯ ಐಟಂ ಡ್ಯಾನ್ಸರ್​ ನೋರಾ ಫತೇಹಿ ಹೆಜ್ಜೆ ಹಾಕಿದ್ದಾರೆ ಎಂಬ ಸುದ್ದಿ ಕೆಲವೇ ದಿನಗಳ ಹಿಂದೆ ಕೇಳಿಬಂದಿತ್ತು. ಈಗ ಚಿತ್ರದ ಅವಧಿ ಬಗ್ಗೆ ಗುಸುಗುಸು ಹರಿದಾಡುತ್ತಿದೆ. ಮೂಲಗಳ ಪ್ರಕಾರ ಈ ಚಿತ್ರದ ಒಟ್ಟು ಅವಧಿ 2 ಗಂಟೆ 52 ನಿಮಿಷ ಎಂದು ಹೇಳಲಾಗುತ್ತಿದೆ.

ರಾಕಿಂಗ್​ ಸ್ಟಾರ್​ ಯಶ್​ ನಟನೆಯ ಈ ಚಿತ್ರದ ಕೆಲಸಗಳು ಇನ್ನೂ ನಡೆಯುತ್ತಿವೆ. ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಬೇಕು ಎಂಬ ಉದ್ದೇಶದಿಂದ ನಿರ್ದೇಶಕ ಪ್ರಶಾಂತ್​ ನೀಲ್​ ಶ್ರಮಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ 16ರಂದು ಕೆಜಿಎಫ್​ 2 ತೆರೆಕಾಣಬೇಕು. ಆದರೆ ಕೊರೊನಾ ವೈರಸ್​ ಹಾವಳಿ ಜೋರಾಗಿರುವುದರಿಂದ ಚಿತ್ರದ ರಿಲೀಸ್​ ದಿನಾಂಕ​ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಸಿನಿಮಾದ ಅವಧಿ ಬಗ್ಗೆ ಹರಿದಾಡುತ್ತಿರುವ ವಿಷಯ ಕೇಳಿದರೆ ಫ್ಯಾನ್ಸ್​ ಥ್ರಿಲ್​ ಆಗುವುದು ಗ್ಯಾರಂಟಿ.

‘ಕೆಜಿಎಫ್​ ಚಾಪ್ಟರ್​ 1’ ಸಿನಿಮಾದ ಅವಧಿ 2 ಗಂಟೆ 35 ನಿಮಿಷ ಆಗಿತ್ತು. ಆದರೆ ‘ಕೆಜಿಎಫ್​ ಚಾಪ್ಟರ್​ 2’ ತುಂಬಾ ದೀರ್ಘವಾಗಿ ಇರಲಿದೆಯಂತೆ. ಅಂದಾಜು ಮೂರು ಗಂಟೆಗಳು ಇರಲಿದೆ ಎಂಬ ಮಾತು ಕೇಳಿಬರುತ್ತಿದೆ. 2ನೇ ಚಾಪ್ಟರ್​ನಲ್ಲಿ ಹೇಳಬೇಕಾದ ವಿಚಾರಗಳು ಸಾಕಷ್ಟು ಇರುವುದರಿಂದ ಸಹಜವಾಗಿಯೇ ಚಿತ್ರದ ಅವಧಿ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಆದರೆ ಚಿತ್ರಕ್ಕೆ ಸೆನ್ಸಾರ್​ ಆಗದ ಹೊರತು ಅವಧಿಯ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವೇ ಇಲ್ಲ. ಈ ಬಗ್ಗೆ ಚಿತ್ರತಂಡ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಯಶ್​ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಆಗಮಿಸಿರುವುದರಿಂದ ಚಿತ್ರದ ತೂಕ ಹೆಚ್ಚಿದೆ. ಬಹುಭಾಷಾ ನಟ ಪ್ರಕಾಶ್​ ರಾಜ್​ ಕೂಡ ಈ ಬಾರಿ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಇಂಥ ಘಟಾನುಘಟಿ ಕಲಾವಿದರ ಸಂಗಮದಿಂದಾಗಿ ‘ಕೆಜಿಎಫ್​ ಚಾಪ್ಟರ್​ 2’ ಚಿತ್ರ ಹೈಪ್​ ಸೃಷ್ಟಿಸಿದೆ.

ಇದನ್ನೂ ಓದಿ:

ಸೈಲೆಂಟಾಗಿ ಕೆಜಿಎಫ್​-2 ಚಿತ್ರ ತಂಡ ಸೇರಿಕೊಂಡ ಮತ್ತೋರ್ವ ಬಾಲಿವುಡ್​ ನಟಿ

ಕೆಜಿಎಫ್​-2 ಹಿಂದಿ ಅವತರಣಿಕೆ​ಗೆ ಯಶ್​ ಡಬ್​ ಮಾಡ್ತಾರಾ?; ಇಲ್ಲಿದೆ ಉತ್ತರ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ