AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಚಿತ್ರದ ‘ತೂಫಾನ್​..’ ವಿಡಿಯೋ ಸಾಂಗ್​ ಮೂಲಕ ಮತ್ತೆ ಧೂಳೆಬ್ಬಿಸಿದ ರಾಕಿ ಭಾಯ್​ ಯಶ್​

Toofan Video Song: ‘ತೂಫಾನ್​..’ ಹಾಡು ‘ಕೆಜಿಎಫ್​ 2’ ಸಿನಿಮಾದ ಕಥೆಯಲ್ಲಿ ಮುಖ್ಯ ಎನಿಸಿಕೊಂಡಿದೆ. ಅದರ ವಿಡಿಯೋ ಸಾಂಗ್​ ಈಗ ರಿಲೀಸ್​ ಆಗಿದೆ.

‘ಕೆಜಿಎಫ್​ 2’ ಚಿತ್ರದ ‘ತೂಫಾನ್​..’ ವಿಡಿಯೋ ಸಾಂಗ್​ ಮೂಲಕ ಮತ್ತೆ ಧೂಳೆಬ್ಬಿಸಿದ ರಾಕಿ ಭಾಯ್​ ಯಶ್​
ಯಶ್​
TV9 Web
| Edited By: |

Updated on:May 18, 2022 | 4:34 PM

Share

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಐಡೆಂಟಿಟಿ ಬಂದಿದೆ. ವಿಶ್ವಮಟ್ಟದಲ್ಲಿ ಈ ಚಿತ್ರ ಸೌಂಡು ಮಾಡಿದೆ. ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ವೀಕೆಂಡ್​ನಲ್ಲಿ ಕೆಲವು ಕಡೆಗಳಲ್ಲಿ ‘ಕೆಜಿಎಫ್​ 2’ (KGF Chapter 2) ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಒಟಿಟಿಗೂ ಈ ಚಿತ್ರ ಕಾಲಿಟ್ಟಿದೆ. ಆದರೆ ಸದ್ಯಕ್ಕೆ ಹಣ ನೀಡಿ ನೋಡಬೇಕು. ನಂತರದ ದಿನಗಳಲ್ಲಿ ಎಲ್ಲ ಚಂದಾದಾರರು ವೀಕ್ಷಿಸಬಹುದು. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾದ ಕಲೆಕ್ಷನ್ 1200 ಕೋಟಿ ರೂಪಾಯಿ ಆಗಿದೆ. ಇದು ಸಣ್ಣ ಸಾಧನೆಯಲ್ಲ. ಈ ಸಿನಿಮಾ ಮೂಲಕ ನಟ ಯಶ್​ (Yash) ಅವರ ಖ್ಯಾತಿ ಜಗದಗಲ ಹಬ್ಬಿದೆ. ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ಬಹುಬೇಡಿಕೆಯ ತಂತ್ರಜ್ಞನಾಗಿ ಗುರುತಿಸಿಕೊಂಡಿದ್ದಾರೆ. ಅವರ ಬತ್ತಳಿಕೆಯಿಂದ ಬಂದ ಹಾಡುಗಳು ಸಖತ್​ ಮೋಡಿ ಮಾಡಿವೆ. ‘ಕೆಜಿಎಫ್​ 2’ ಚಿತ್ರದ ಗೆಲುವಿನಲ್ಲಿ ಸಾಂಗ್ಸ್​ ಮತ್ತು ಹಿನ್ನೆಲೆ ಸಂಗೀತದ ಕೊಡುಗೆ ಕೂಡ ದೊಡ್ಡದು. ಹೆಚ್ಚು ಗಮನ ಸೆಳೆದಿರುವ ‘ತೂಫಾನ್​..’ ಹಾಡಿನ ವಿಡಿಯೋ ವರ್ಷನ್​ ಈಗ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಿದೆ.

ಪ್ರಶಾಂತ್​ ನೀಲ್​ ನಿರ್ದೇಶನದಲ್ಲಿ ಮೂಡಿಬಂದಿರುವ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರಕ್ಕೆ ಎಲ್ಲ ಭಾಷೆಯ ಪ್ರೇಕ್ಷಕರೂ ಭೇಷ್​ ಎಂದಿದ್ದಾರೆ. ಎಲ್ಲ ಭಾಷೆಯಲ್ಲೂ ಹಾಡುಗಳು ಹಿಟ್​ ಆಗಿವೆ. ಅದರ ಕ್ರೆಡಿಕ್​ ರವಿ ಬಸ್ರೂರು ಅವರಿಗೆ ಸಲ್ಲಬೇಕು. ‘ತೂಫಾನ್​..’ ಹಾಡು ‘ಕೆಜಿಎಫ್​ 2’ ಸಿನಿಮಾದಲ್ಲಿ ಮುಖ್ಯ ಎನಿಸಿಕೊಂಡಿದೆ. ಮೊದಲ ಪಾರ್ಟ್​​ನಲ್ಲಿ ರಾಕಿ ಭಾಯ್​ ಏನು ಮಾಡಿದ್ದ ಎಂಬುದನ್ನು ಕಥಾನಾಯಕಿಗೆ ವಿವರಿಸುವ ರೀತಿಯಲ್ಲಿ ಈ ಹಾಡು ಮೂಡಿಬಂದಿದೆ. ಚಿತ್ರಮಂದಿರದಲ್ಲಿ ಈ ಗೀತೆ ಬಂದಾಗ ಎಲ್ಲರೂ ಹುಚ್ಚೆದ್ದು ಕುಣಿದಿದ್ದಾರೆ. ಈ ಮೊದಲು ಯೂಟ್ಯೂಬ್​ನಲ್ಲಿ ಕೇವಲ ಲಿರಿಕಲ್​ ವಿಡಿಯೋ ರಿಲೀಸ್​ ಆಗಿತ್ತು. ಈಗ ವಿಡಿಯೋ ಸಾಂಗ್​ ಬಿಡುಗಡೆಯಾಗಿ ಜನ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ
Image
ಶ್ವೇತವರ್ಣದ ಉಡುಗೆ ಧರಿಸಿ ಅಭಿಮಾನಿಗಳನ್ನು ಸೆಳೆದುಕೊಂಡ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​
Image
ಸದ್ದಿಲ್ಲದೆ ಅಮೇಜಾನ್​ ಪ್ರೈಮ್ ವಿಡಿಯೋಗೆ ಕಾಲಿಟ್ಟ ‘ಕೆಜಿಎಫ್​ 2’; ಸಿನಿಮಾ ನೋಡೋಕೆ ಹಲವು ಷರತ್ತು
Image
Fact Check: ‘ಕೆಜಿಎಫ್​ 3’ ಟ್ರೇಲರ್​ ಬಿಡುಗಡೆ ಆಗಿದ್ಯಾ? ವೈರಲ್ ಆಗಿರುವ ವಿಡಿಯೋದ ಅಸಲಿಯತ್ತು ಇಲ್ಲಿದೆ
Image
ಮೋಹನ್​ ಜುನೇಜ ನಿಧನ: ‘ಕೆಜಿಎಫ್​ 2’ ನಟನ ಕುಟುಂಬಕ್ಕೆ 50 ಸಾವಿರ ರೂ. ನೀಡಿದ ‘ಹೊಂಬಾಳೆ ಫಿಲ್ಮ್ಸ್​’

ಇದನ್ನೂ ಓದಿ: ‘ಕೆಜಿಎಫ್​ 2’ ನೋಡಿದ್ಮೇಲೆ ‘ಕೆಜಿಎಫ್​ 3’ ಬಗ್ಗೆ ಶಿವಣ್ಣ ಹೇಳಿದ್ದೇನು? ಇಲ್ಲಿದೆ ‘ಸೆಂಚುರಿ ಸ್ಟಾರ್​’ ಮಾತು

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿಗೆ ಹಲವು ಕಾರಣಗಳಿವೆ. ರವಿ ಬಸ್ರೂರು ಅವರ ಸಂಗೀತದ ಜೊತೆ ಭುವನ್​ ಗೌಡ ಛಾಯಾಗ್ರಹಣ, ಶಿವಕುಮಾರ್​ ಅವರ ಕಲಾ ನಿರ್ದೇಶನ, ಯಶ್​ ಮ್ಯಾನರಿಸಂ, ಎಲ್ಲ ಕಲಾವಿದರ ನಟನೆ, ತಾಯಿ ಸೆಂಟಿಮೆಂಟ್​, ಮೈ ನವಿರೇಳಿಸುವ ಆ್ಯಕ್ಷನ್​ ಸನ್ನಿವೇಶ, ಸರಿಸಾಟಿ ಇಲ್ಲದ ಮೇಕಿಂಗ್​, ಬೃಹತ್​ ಸೆಟ್​ಗಳು ಸೇರಿದಂತೆ ಅನೇಕ ಅಂಶಗಳನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಎಲ್ಲದರ ಪರಿಣಾಮವಾಗಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಜಯಭೇರಿ ಬಾರಿಸಿದೆ.

ಸಂಜಯ್​ ದತ್​, ರವೀನಾ ಟಂಡನ್​ ಅವರು ‘ಕೆಜಿಎಫ್​ 2’ ಸಿನಿಮಾದಲ್ಲಿ ಗಮನಾರ್ಹ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡರು. ಹಿಂದಿ ಪ್ರೇಕ್ಷಕರಿಗೆ ಈ ಚಿತ್ರ ಆಪ್ತವಾಗಲು ಇದು ಕೂಡ ಒಂದು ಕಾರಣ. ಈ ಸಿನಿಮಾದಿಂದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಭರ್ಜರಿ ಲಾಭ ಆಗಿದೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರ ಚಾರ್ಮ್​ ಹೆಚ್ಚಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಯಶ್​ ಅವರು ತಮ್ಮ ಡಿಮ್ಯಾಂಡ್​ ಹೆಚ್ಚಿಸಿಕೊಂಡಿದ್ದಾರೆ. ಎಲ್ಲರ ಬಾಯಲ್ಲೂ ನಿರ್ದೇಶಕ ಪ್ರಶಾಂತ್​ ನೀಲ್​ ಹೆಸರು ಕೇಳಿಬರುವಂತಾಗಿದೆ. ನಟಿ ಶ್ರೀನಿಧಿ ಶೆಟ್ಟಿ ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು ಕ್ಯೂ ನಿಲ್ಲುವಂತಾಗಿದೆ. ಅವರ ಮುಂಬರುವ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:32 pm, Wed, 18 May 22

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ