AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ‘ಕೆಜಿಎಫ್​​ 2’ ಚಿತ್ರೀಕರಣದ​ ಫೋಟೋ ವೈರಲ್; ಅಪ್​ಡೇಟ್​ಗಾಗಿ ಕಾದು ಕುಳಿತ ಯಶ್​ ಫ್ಯಾನ್ಸ್​

Yash: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಕಥಾನಾಯಕ ರಾಕಿ ಭಾಯ್​ ಮತ್ತು ಖಳನಾಯಕ ಅಧೀರನ ನಡುವೆ ಭರ್ಜರಿ ಚೇಸಿಂಗ್​ ಸೀನ್​ ಇರಬಹುದೇ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ. ಆ ಬಗ್ಗೆ ಏನಾದರೂ ಅಪ್​ಡೇಟ್​ ಸಿಗಲಿ ಅಂತ ಸಿನಿಪ್ರಿಯರು ಕಾಯುತ್ತಿದ್ದಾರೆ.

KGF Chapter 2: ‘ಕೆಜಿಎಫ್​​ 2’ ಚಿತ್ರೀಕರಣದ​ ಫೋಟೋ ವೈರಲ್; ಅಪ್​ಡೇಟ್​ಗಾಗಿ ಕಾದು ಕುಳಿತ ಯಶ್​ ಫ್ಯಾನ್ಸ್​
‘ಕೆಜಿಎಫ್: ಚಾಪ್ಟರ್ 2’
TV9 Web
| Edited By: |

Updated on:Oct 08, 2021 | 3:30 PM

Share

ಇಡೀ ಭಾರತೀಯ ಚಿತ್ರರಂಗವೇ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಬಿಡುಗಡೆಗಾಗಿ ಕಾದು ಕುಳಿತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟುಹೊತ್ತಿಗಾಗಲೇ ಈ ಸಿನಿಮಾ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ಕಾಟದಿಂದಾಗಿ ಚಿತ್ರದ ಕೆಲಸಗಳು ವಿಳಂಬವಾದವು. ಕೆಲವೇ ದಿನಗಳ ‘ಕೆಜಿಎಫ್​ 2’ ತಂಡ ಹೊಸ ಬಿಡುಗಡೆ ದಿನಾಂಕ ಘೋಷಿಸಿತು. ಮುಂದಿನ ವರ್ಷ ಏಪ್ರಿಲ್​ 14ರಂದು ಸಿನಿಮಾ ರಿಲೀಸ್​ ಆಗಲಿದೆ. ಅಲ್ಲಿಯವರೆಗೂ ಕಾಯಲು ಫ್ಯಾನ್ಸ್​ ಸಿದ್ಧರಿಲ್ಲ. ಆದಷ್ಟು ಬೇಗ ಈ ಚಿತ್ರದ ಬಗ್ಗೆ ಏನಾದರೂ ಅಪ್​ಡೇಟ್​ ಸಿಗಬಹುದೇ ಎಂದು ಯಶ್​ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

ಈಗಾಗಲೇ ‘ಕೆಜಿಎಫ್​: ಚಾಪ್ಟರ್​ 2’ ತಂಡ ಶೂಟಿಂಗ್​ ಮುಗಿಸಿಕೊಂಡಿದೆ. ಆದರೆ ಕೆಲವು ದೃಶ್ಯಗಳ ಪ್ಯಾಚ್​ ವರ್ಕ್​ ನಡೆಯುತ್ತಿರುವ ಸಾಧ್ಯತೆ ಇದೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದೆರಡು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ‘ಕೆಜಿಎಫ್​ 2’ ಚಿತ್ರೀಕರಣದ ಸೆಟ್​ನಲ್ಲಿ ಕ್ಲಿಕ್ಕಿಸಲಾಗಿದ್ದು ಎಂಬಂತಿರುವ ಈ ಫೋಟೋಗಳನ್ನು ಅಭಿಮಾನಿಗಳು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಬೆಂಗಳೂರಿನ ನೈಸ್​ ರಸ್ತೆಯಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಚೇಸಿಂಗ್​ ದೃಶ್ಯಗಳ ಶೂಟಿಂಗ್​ ನಡೆದಿದೆ ಎಂದು ಈ ಫೋಟೋಗಳಿಗೆ ಕ್ಯಾಪ್ಷನ್​ ನೀಡಲಾಗಿದೆ. ಈ ಸಿನಿಮಾದಲ್ಲಿ ಕಥಾನಾಯಕ ರಾಕಿ ಭಾಯ್​ ಮತ್ತು ಖಳನಾಯಕ ಅಧೀರನ ನಡುವೆ ಭರ್ಜರಿ ಚೇಸಿಂಗ್​ ಸೀನ್​ ಇರಬಹುದೇ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ. ಆ ಬಗ್ಗೆ ಏನಾದರೂ ಮಾಹಿತಿ​ ಹೊರಬರಲಿ ಅಂತ ಕಾಯುತ್ತಿರುವ ಅಭಿಮಾನಿಗಳಿಗೆ ನಿರ್ದೇಶಕ ಪ್ರಶಾಂತ್​ ನೀಲ್​ ಅವರೇ ಪ್ರತಿಕ್ರಿಯೆ ನೀಡಬೇಕಿದೆ.

2021ರ ಜನವರಿಯಲ್ಲಿ ಯಶ್​ ಜನ್ಮದಿನದ ಪ್ರಯುಕ್ತ ಬಿಡುಗಡೆಯಾದ ಟೀಸರ್​ನಿಂದ ಈ ಸಿನಿಮಾ ಬಗ್ಗೆ ಇದ್ದ ಕ್ರೇಜ್​ ಹತ್ತು ಪಟ್ಟು ಹೆಚ್ಚಾಯಿತು. ಈವರೆಗೂ 21 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿರುವುದು ಈ ಟೀಸರ್​ನ ಹೆಚ್ಚುಗಾರಿಕೆ. ಟ್ರೇಲರ್​ಗಾಗಿ ಅಭಿಮಾನಿಗಳ ಬಳಗ ತುದಿಗಾಲಿನಲ್ಲಿ ನಿಂತು ಕಾಯುತ್ತಿದೆ. ಆಡಿಯೋ ಬಿಡುಗಡೆಗಾಗಿಯೂ ಕಾತರ ಹೆಚ್ಚಿದೆ. ಚಿತ್ರದ ಆಡಿಯೋ ಹಕ್ಕುಗಳನ್ನು ಲಹರಿ ಸಂಸ್ಥೆ ಬಾಚಿಕೊಂಡಿದೆ. ಸಂಜಯ್​ ದತ್​, ರವೀನಾ ಟಂಡನ್​ ಮುಂತಾದ ಕಲಾವಿದರು ಇರುವುದರಿಂದ ಉತ್ತರ ಭಾರತದಲ್ಲೂ ‘ಕೆಜಿಎಫ್​ 2’ ಧೂಳೆಬ್ಬಿಸಲಿದೆ.

ಇದನ್ನೂ ಓದಿ:

ಕೆಜಿಎಫ್​ 2ಗೆ ಬಂತು 255 ಕೋಟಿ ಆಫರ್​?  ದಯವಿಟ್ಟು ಒಪ್ಪಬೇಡಿ ಎಂದ ಫ್ಯಾನ್ಸ್​

ಶೂಟಿಂಗ್​ ಸೆಟ್​ನಲ್ಲಿ ಊಟ ಮಾಡಿ ಬೈಯಿಸಿಕೊಂಡಿದ್ದ ಸಂಜಯ್​ ದತ್​; ‘ಕೆಜಿಎಫ್​’ ಅಧೀರನ ಕಷ್ಟದ ಹಾದಿ

Published On - 3:18 pm, Fri, 8 October 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ