‘ಕೆಜಿಎಫ್​ 2’ ಟಿಕೆಟ್ ಬುಕಿಂಗ್ ಓಪನ್​ ಆದ 12 ಗಂಟೆಯಲ್ಲಿ 1 ಲಕ್ಷ ಟಿಕೆಟ್​ ಸೋಲ್ಡ್​ಔಟ್​; ಉತ್ತರ ಭಾರತದಲ್ಲಿ ಯಶ್ ಹವಾ

ಬಾಲಿವುಡ್ ತಜ್ಞರ ಪ್ರಕಾರ, ಈ ಸಿನಿಮಾ ಮೊದಲ ದಿನ ಹಿಂದಿಯಲ್ಲಿ 15 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘

‘ಕೆಜಿಎಫ್​ 2’ ಟಿಕೆಟ್ ಬುಕಿಂಗ್ ಓಪನ್​ ಆದ 12 ಗಂಟೆಯಲ್ಲಿ 1 ಲಕ್ಷ ಟಿಕೆಟ್​ ಸೋಲ್ಡ್​ಔಟ್​; ಉತ್ತರ ಭಾರತದಲ್ಲಿ ಯಶ್ ಹವಾ
ಯಶ್
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 08, 2022 | 2:29 PM

‘ಕೆಜಿಎಫ್​ ಚಾಪ್ಟರ್​ 2’ ಚಿತ್ರ (KGF Chapter 2) ಕೇವಲ ಸ್ಯಾಂಡಲ್​ವುಡ್​ ಸಿನಿಮಾ ಆಗಿ ಮಾತ್ರ ಉಳಿದುಕೊಂಡಿಲ್ಲ. ಕನ್ನಡಕ್ಕಿಂತ ಹೆಚ್ಚಾಗಿ ಬಾಲಿವುಡ್​ (Bollywood) ಮಂದಿ ಈ ಸಿನಿಮಾ ವೀಕ್ಷಿಸಲು ಕಾದು ಕೂತಿದ್ದಾರೆ. ಈ ಚಿತ್ರಕ್ಕೆ ಬಾಲಿವುಡ್​ ಸ್ಟಾರ್​ಗಳ ಆಗಮನ ಆಗಿರುವುದರಿಂದ ಸಿನಿಮಾದ ಮೈಲೇಜ್​ ಹೆಚ್ಚಿದೆ. ಉತ್ತರ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಈ ಚಿತ್ರಕ್ಕೆ ಪ್ರಚಾರ ನೀಡಲಾಗುತ್ತಿದೆ. ಯಶ್ (Yash)​ ಆ್ಯಂಡ್ ಟೀಂ ದೆಹಲಿ ಹಾಗೂ ಮೊದಲಾದ ಕಡೆಗಳಲ್ಲಿ ಸುತ್ತಾಟ ನಡೆಸುತ್ತಾ ಚಿತ್ರದ ಪ್ರಮೋಷ್​​ನಲ್ಲಿ ಬ್ಯುಸಿ ಆಗಿದೆ. ಬಾಲಿವುಡ್​ನ ತವರಾದ ಮುಂಬೈನಲ್ಲೂ ಚಿತ್ರದ ಅಬ್ಬರ ಜೋರಾಗಿದೆ. ಈಗ ಆನ್​ಲೈನ್​ನಲ್ಲಿ ‘ಕೆಜಿಎಫ್​ 2’ ಚಿತ್ರದ ಟಿಕೆಟ್​ ಬುಕಿಂಗ್ ಓಪನ್​ ಆಗಿದೆ. ವಿಶೇಷ ಎಂದರೆ ಈ ಚಿತ್ರ ಪ್ರೀ ಬುಕಿಂಗ್​ನಲ್ಲೂ ಧೂಳೆಬ್ಬಿಸಿದೆ.

ಕೆಲ ಪ್ರಮುಖ ನಗರಗಳಲ್ಲಿ ಸಿನಿಮಾದ ಟಿಕೆಟ್​ ಬುಕಿಂಗ್ ಬಿಡಲಾಗಿದೆ. ಮುಂಬೈ, ದೆಹಲಿ ಮೊದಲಾದ ಕಡೆಗಳಲ್ಲಿ ‘ಕೆಜಿಎಫ್​ ಚಾಪ್ಟರ್​ 2’ನ ಹಿಂದಿ ವರ್ಷನ್ ಟಿಕೆಟ್​​ ಬುಕಿಂಗ್ ಮಾಡಬಹುದು. ಟಿಕೆಟ್ ಬುಕಿಂಗ್ ಆರಂಭವಾದ 12 ಗಂಟೆಗಳಲ್ಲಿ 1 ಲಕ್ಷಕ್ಕೂ ಅಧಿಕ ಟಿಕೆಟ್​ಗಳು ಬಿಕರಿ ಆಗಿವೆ. ಅಂದರೆ, 12 ಗಂಟೆಯಲ್ಲಿ 3.35 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಚಿತ್ರ.

ಬಾಲಿವುಡ್ ತಜ್ಞರ ಪ್ರಕಾರ, ಈ ಸಿನಿಮಾ ಮೊದಲ ದಿನ ಹಿಂದಿಯಲ್ಲಿ 15 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘ಕೆಜಿಎಫ್​’ ಸಿನಿಮಾ ನೋಡಿ ಅಭಿಮಾನಿಗಳು ಸಖತ್​ ಖುಷಿ ಪಟ್ಟಿದ್ದಾರೆ. ಇನ್ನು ಬಾಲಿವುಡ್ ಸ್ಟಾರ್​​ಗಳಾದ ಸಂಜಯ್​ ದತ್​, ರವೀನಾ ಟಂಡನ್ ಎರಡನೇ ಚಾಪ್ಟರ್​ನಲ್ಲಿ ನಟಿಸಿದ್ದಾರೆ. ಇದರಿಂದ ‘ಕೆಜಿಎಫ್​ 2’ ಸಿನಿಮಾದ ಬೇಡಿಕೆ ಹೆಚ್ಚಿದೆ. ಈ ಚಿತ್ರವನ್ನು ನೋಡಲು ಬಾಲಿವುಡ್​ಮಂದಿ ತುದಿಗಾಲಿನಲ್ಲಿ ನಿಂತಿದ್ದಾರೆ. ಹಿಂದಿಯಲ್ಲಿ ಚಿತ್ರದ ಒಟ್ಟೂ ಕಲೆಕ್ಷನ್​ 100 ಕೋಟಿ ರೂಪಾಯಿ ದಾಟಲಿದೆ ಎಂಬುದು ತಜ್ಞರ ಲೆಕ್ಕಾಚಾರ.

ಇನ್ನು, ಹಿಂದಿಯಲ್ಲಿ ‘ಕೆಜಿಎಫ್​ 2’ಗೆ ಎದುರಾಗಿ ಶಾಹಿದ್ ಕಪೂರ್ ನಟನೆಯ ‘ಜೆರ್ಸಿ’ ಸಿನಿಮಾ ತೆರೆಗೆ ಬರುತ್ತಿದೆ. ಶೇ.60 ಚಿತ್ರಮಂದಿರಗಳು ‘ಕೆಜಿಎಫ್​ 2’ಗೆ ಸಿಕ್ಕರೆ ಉಳಿದ ಶೇ. 40 ಥಿಯೇಟರ್​ಗಳು ‘ಜೆರ್ಸಿ’ ಸಿನಿಮಾಗೆ ಸಿಗಲಿದೆ ಎಂಬ ಲೆಕ್ಕಾಚಾರವನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಫ್ಯಾನ್ಸ್- ಇಲ್ಲಿವೆ ಫೋಟೋಗಳು

‘ಸಲ್ಮಾನ್ ಖಾನ್​​, ಶಾರುಖ್ ಖಾನ್​​​ಗೆ ನನ್ನ ಹೋಲಿಸಬೇಡಿ’; ಯಶ್​ ನೇರ ಮಾತು

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ