AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಟಿಕೆಟ್ ಬುಕಿಂಗ್ ಓಪನ್​ ಆದ 12 ಗಂಟೆಯಲ್ಲಿ 1 ಲಕ್ಷ ಟಿಕೆಟ್​ ಸೋಲ್ಡ್​ಔಟ್​; ಉತ್ತರ ಭಾರತದಲ್ಲಿ ಯಶ್ ಹವಾ

ಬಾಲಿವುಡ್ ತಜ್ಞರ ಪ್ರಕಾರ, ಈ ಸಿನಿಮಾ ಮೊದಲ ದಿನ ಹಿಂದಿಯಲ್ಲಿ 15 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘

‘ಕೆಜಿಎಫ್​ 2’ ಟಿಕೆಟ್ ಬುಕಿಂಗ್ ಓಪನ್​ ಆದ 12 ಗಂಟೆಯಲ್ಲಿ 1 ಲಕ್ಷ ಟಿಕೆಟ್​ ಸೋಲ್ಡ್​ಔಟ್​; ಉತ್ತರ ಭಾರತದಲ್ಲಿ ಯಶ್ ಹವಾ
ಯಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 08, 2022 | 2:29 PM

Share

‘ಕೆಜಿಎಫ್​ ಚಾಪ್ಟರ್​ 2’ ಚಿತ್ರ (KGF Chapter 2) ಕೇವಲ ಸ್ಯಾಂಡಲ್​ವುಡ್​ ಸಿನಿಮಾ ಆಗಿ ಮಾತ್ರ ಉಳಿದುಕೊಂಡಿಲ್ಲ. ಕನ್ನಡಕ್ಕಿಂತ ಹೆಚ್ಚಾಗಿ ಬಾಲಿವುಡ್​ (Bollywood) ಮಂದಿ ಈ ಸಿನಿಮಾ ವೀಕ್ಷಿಸಲು ಕಾದು ಕೂತಿದ್ದಾರೆ. ಈ ಚಿತ್ರಕ್ಕೆ ಬಾಲಿವುಡ್​ ಸ್ಟಾರ್​ಗಳ ಆಗಮನ ಆಗಿರುವುದರಿಂದ ಸಿನಿಮಾದ ಮೈಲೇಜ್​ ಹೆಚ್ಚಿದೆ. ಉತ್ತರ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಈ ಚಿತ್ರಕ್ಕೆ ಪ್ರಚಾರ ನೀಡಲಾಗುತ್ತಿದೆ. ಯಶ್ (Yash)​ ಆ್ಯಂಡ್ ಟೀಂ ದೆಹಲಿ ಹಾಗೂ ಮೊದಲಾದ ಕಡೆಗಳಲ್ಲಿ ಸುತ್ತಾಟ ನಡೆಸುತ್ತಾ ಚಿತ್ರದ ಪ್ರಮೋಷ್​​ನಲ್ಲಿ ಬ್ಯುಸಿ ಆಗಿದೆ. ಬಾಲಿವುಡ್​ನ ತವರಾದ ಮುಂಬೈನಲ್ಲೂ ಚಿತ್ರದ ಅಬ್ಬರ ಜೋರಾಗಿದೆ. ಈಗ ಆನ್​ಲೈನ್​ನಲ್ಲಿ ‘ಕೆಜಿಎಫ್​ 2’ ಚಿತ್ರದ ಟಿಕೆಟ್​ ಬುಕಿಂಗ್ ಓಪನ್​ ಆಗಿದೆ. ವಿಶೇಷ ಎಂದರೆ ಈ ಚಿತ್ರ ಪ್ರೀ ಬುಕಿಂಗ್​ನಲ್ಲೂ ಧೂಳೆಬ್ಬಿಸಿದೆ.

ಕೆಲ ಪ್ರಮುಖ ನಗರಗಳಲ್ಲಿ ಸಿನಿಮಾದ ಟಿಕೆಟ್​ ಬುಕಿಂಗ್ ಬಿಡಲಾಗಿದೆ. ಮುಂಬೈ, ದೆಹಲಿ ಮೊದಲಾದ ಕಡೆಗಳಲ್ಲಿ ‘ಕೆಜಿಎಫ್​ ಚಾಪ್ಟರ್​ 2’ನ ಹಿಂದಿ ವರ್ಷನ್ ಟಿಕೆಟ್​​ ಬುಕಿಂಗ್ ಮಾಡಬಹುದು. ಟಿಕೆಟ್ ಬುಕಿಂಗ್ ಆರಂಭವಾದ 12 ಗಂಟೆಗಳಲ್ಲಿ 1 ಲಕ್ಷಕ್ಕೂ ಅಧಿಕ ಟಿಕೆಟ್​ಗಳು ಬಿಕರಿ ಆಗಿವೆ. ಅಂದರೆ, 12 ಗಂಟೆಯಲ್ಲಿ 3.35 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಚಿತ್ರ.

ಬಾಲಿವುಡ್ ತಜ್ಞರ ಪ್ರಕಾರ, ಈ ಸಿನಿಮಾ ಮೊದಲ ದಿನ ಹಿಂದಿಯಲ್ಲಿ 15 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘ಕೆಜಿಎಫ್​’ ಸಿನಿಮಾ ನೋಡಿ ಅಭಿಮಾನಿಗಳು ಸಖತ್​ ಖುಷಿ ಪಟ್ಟಿದ್ದಾರೆ. ಇನ್ನು ಬಾಲಿವುಡ್ ಸ್ಟಾರ್​​ಗಳಾದ ಸಂಜಯ್​ ದತ್​, ರವೀನಾ ಟಂಡನ್ ಎರಡನೇ ಚಾಪ್ಟರ್​ನಲ್ಲಿ ನಟಿಸಿದ್ದಾರೆ. ಇದರಿಂದ ‘ಕೆಜಿಎಫ್​ 2’ ಸಿನಿಮಾದ ಬೇಡಿಕೆ ಹೆಚ್ಚಿದೆ. ಈ ಚಿತ್ರವನ್ನು ನೋಡಲು ಬಾಲಿವುಡ್​ಮಂದಿ ತುದಿಗಾಲಿನಲ್ಲಿ ನಿಂತಿದ್ದಾರೆ. ಹಿಂದಿಯಲ್ಲಿ ಚಿತ್ರದ ಒಟ್ಟೂ ಕಲೆಕ್ಷನ್​ 100 ಕೋಟಿ ರೂಪಾಯಿ ದಾಟಲಿದೆ ಎಂಬುದು ತಜ್ಞರ ಲೆಕ್ಕಾಚಾರ.

ಇನ್ನು, ಹಿಂದಿಯಲ್ಲಿ ‘ಕೆಜಿಎಫ್​ 2’ಗೆ ಎದುರಾಗಿ ಶಾಹಿದ್ ಕಪೂರ್ ನಟನೆಯ ‘ಜೆರ್ಸಿ’ ಸಿನಿಮಾ ತೆರೆಗೆ ಬರುತ್ತಿದೆ. ಶೇ.60 ಚಿತ್ರಮಂದಿರಗಳು ‘ಕೆಜಿಎಫ್​ 2’ಗೆ ಸಿಕ್ಕರೆ ಉಳಿದ ಶೇ. 40 ಥಿಯೇಟರ್​ಗಳು ‘ಜೆರ್ಸಿ’ ಸಿನಿಮಾಗೆ ಸಿಗಲಿದೆ ಎಂಬ ಲೆಕ್ಕಾಚಾರವನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಫ್ಯಾನ್ಸ್- ಇಲ್ಲಿವೆ ಫೋಟೋಗಳು

‘ಸಲ್ಮಾನ್ ಖಾನ್​​, ಶಾರುಖ್ ಖಾನ್​​​ಗೆ ನನ್ನ ಹೋಲಿಸಬೇಡಿ’; ಯಶ್​ ನೇರ ಮಾತು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ