AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ 

Toxic Movie Release Date Postponed: ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ ಆಗುವ ಲಕ್ಷಣ ಕಾಣಿಸುತ್ತಿಲ್ಲ. ಅಬುದಾಬಿ ಮೊದಲಾದ ಕಡೆಗಳಲ್ಲಿ ದಾಳಿ ಆಗುತ್ತಿದೆ. ಈ ಕಾರಣವನ್ನು ನೀಡಿ ಟಾಕ್ಸಿಕ್ ಮುಂದಕ್ಕೆ ಹಾಕಿರೋದಾಗಿ ತಂಡ ಮಾಹಿತಿ ಕೊಟ್ಟಿದೆ.

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ 
ಯಶ್
ರಾಜೇಶ್ ದುಗ್ಗುಮನೆ
|

Updated on:Mar 04, 2026 | 10:29 AM

Share

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾ ತಂಡ ಶಾಕಿಂಗ್ ಅಪ್​​ಡೇಟ್ ಕೊಟ್ಟಿದೆ. ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ರಿಲೀಸ್​​ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೊಸ ರಿಲೀಸ್ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಆಗಲಿದೆ.

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ ಆಗುವ ಲಕ್ಷಣ ಕಾಣಿಸುತ್ತಿಲ್ಲ. ಅಬುದಾಬಿ ಮೊದಲಾದ ಕಡೆಗಳಲ್ಲಿ ದಾಳಿ ಆಗುತ್ತಿದೆ. ಈ ಕಾರಣವನ್ನು ನೀಡಿ ಟಾಕ್ಸಿಕ್ ಮುಂದಕ್ಕೆ ಹಾಕಿರೋದಾಗಿ ತಂಡ ಮಾಹಿತಿ ಕೊಟ್ಟಿದೆ.

‘ಟಾಕ್ಸಿಕ್’ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿದ್ದವು. ಈ ಚಿತ್ರದ ಟ್ರೇಲರ್ ಮಾರ್ಚ್ 8ರಂದು ರಿಲೀಸ್ ಆಗಬೇಕಿತ್ತು. ಇದಕ್ಕೆ ಎಲ್ಲಾ ಸಿದ್ಧತೆಗಳು ಕೂಡ ನಡೆದಿದ್ದವು. ಆದರೆ, ಇಸ್ರೇಲ್-ಇರಾನ್ ಮಧ್ಯೆ ಸಮರ ನಡೆಯುತ್ತಿರುವುದರಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಗಲ್ಫ ರಾಷ್ಟ್ರಗಳಲ್ಲಿ ‘ಧುರಂಧರ್ 2’ ರಿಲೀಸ್ ಆಗುತ್ತಿಲ್ಲ. ಹೀಗಾಗಿ, ಈ ರಾಷ್ಟ್ರವನ್ನು ದೊಡ್ಡ ಮಾರುಕಟ್ಟೆ ಮಾಡಿಕೊಳ್ಳಬೇಕು ಎಂಬುದು ‘ಟಾಕ್ಸಿಕ್’ ಸಿನಿಮಾ ತಂಡದ ಪ್ಲ್ಯಾನ್ ಆಗಿತ್ತು. ಆದರೆ, ಇದು ಸಾಧ್ಯವಾಗುತ್ತಿಲ್ಲ. ಇದನ್ನು ತಂಡ ಗಮನದಲ್ಲಿ ಇಟ್ಟುಕೊಂಡಿದೆ.

ಇದನ್ನೂ ಓದಿ: ರಣವೀರ್ ನಟನೆಯ ‘ಧುರಂಧರ್ 2’ ವಿಳಂಬಕ್ಕೆ ಕಾರಣವಾಯ್ತು ಚಂದ್ರ ಗ್ರಹಣ

‘ಟಾಕ್ಸಿಕ್’ ಸಿನಿಮಾ ಮುಂದಕ್ಕೆ ಹೋಗಲು ‘ಧುರಂಧರ್ 2’ ಕಾರಣ ಎಂಬ ಚರ್ಚೆ ಕೂಡ ನಡೆದಿದೆ. ಆದರೆ, ತಂಡ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ನಮ್ಮ ಪಾಲುದಾರರನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿದೆ.

View this post on Instagram

A post shared by Yash (@thenameisyash)

‘ಟಾಕ್ಸಿಕ್’ ಸಿನಿಮಾನ ‘ಕೆವಿಎನ್’ ಸಂಸ್ಥೆ ನಿರ್ಮಾಣ ಮಾಡಿದೆ. ಈ ಚಿತ್ರಕ್ಕೆ ಯಶ್ ಕೂಡ ನಿರ್ಮಾಪಕ. ಗೀತು ಮೋಹನ್ ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:08 am, Wed, 4 March 26

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ