AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್​’ ಚಿತ್ರದಲ್ಲಿ ಯಶ್​ ಜೊತೆ ನಟಿಸುತ್ತಾರಾ ಸಾಯಿ ಪಲ್ಲವಿ, ಶೃತಿ ಹಾಸನ್​?

‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ‘ಟಾಕ್ಸಿಕ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರಲಿದೆ. ಘಟಾನುಘಟಿ ತಂತ್ರಜ್ಞರು ಇದರಲ್ಲಿ ಕೆಲಸ ಮಾಡಲಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಯಶ್​ ಅವರು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ಭಾರಿ ನಿರೀಕ್ಷೆ ಮನೆ ಮಾಡಿದೆ.

‘ಟಾಕ್ಸಿಕ್​’ ಚಿತ್ರದಲ್ಲಿ ಯಶ್​ ಜೊತೆ ನಟಿಸುತ್ತಾರಾ ಸಾಯಿ ಪಲ್ಲವಿ, ಶೃತಿ ಹಾಸನ್​?
ಸಾಯಿ ಪಲ್ಲವಿ, ಯಶ್​, ಶ್ರುತಿ ಹಾಸನ್​
ಮದನ್​ ಕುಮಾರ್​
|

Updated on: Dec 15, 2023 | 6:57 PM

Share

‘ರಾಕಿಂಗ್​ ಸ್ಟಾರ್​’ ಯಶ್​ (Yash) ಅವರು ‘ಟಾಕ್ಸಿಕ್​’ ಸಿನಿಮಾ ಅನೌನ್ಸ್​ ಮಾಡಿದ ಬಳಿಕ ಹಲವು ಅಂತೆ-ಕಂತೆಗಳು ಹುಟ್ಟಿಕೊಂಡಿವೆ. ಈ ಸಿನಿಮಾದ ಬಗ್ಗೆ ಅನೇಕ ಗಾಸಿಪ್​ಗಳು ಹರಿದಾಡುತ್ತಿವೆ. ಇದು ಯಶ್​ ಪಾಲಿಗೆ ಚಾಲೆಂಜಿಂಗ್ ಪ್ರಾಜೆಕ್ಟ್​. ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಾಗಾಗಿ ಪ್ರತಿ ಅಪ್​ಡೇಟ್​ ಬಗ್ಗೆಯೂ ಕುತೂಹಲದಿಂದ ಕಾಯುತ್ತಿದ್ದಾರೆ. ‘ಟಾಕ್ಸಿಕ್​’ (Toxic) ಸಿನಿಮಾದಲ್ಲಿ ಯಶ್​ ಜೊತೆ ಯಾರು ನಟಿಸಬಹುದು ಎಂಬ ಕೌತುಕ ಮೂಡಿದೆ. ಸಾಯಿ ಪಲ್ಲವಿ (Sai Pallavi) ಮತ್ತು ಶ್ರುತಿ ಹಾಸನ್​ ಅವರ ಹೆಸರುಗಳು ಹರಿದಾಡುತ್ತಿವೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ‘ಟಾಕ್ಸಿಕ್​’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಟೈಟಲ್​ ಅನಾವರಣ ಮಾಡುವ ಸಲುವಾಗಿ ಬಿಡುಗಡೆ ಮಾಡಿದ ಟೀಸರ್​ ಗಮನ ಸೆಳೆದಿದೆ. ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಸಾಯಿ ಪಲ್ಲವಿ ಮತ್ತು ಶ್ರುತಿ ಹಾಸನ್​ ಅವರನ್ನು ಚಿತ್ರತಂಡ ಸಂಪರ್ಕಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Toxic: ಆಸ್ಕರ್​ ಪ್ರಶಸ್ತಿ ಮೇಲೆ ಯಶ್​ ಕಣ್ಣು? ‘ಟಾಕ್ಸಿಕ್​’ ಸಿನಿಮಾ ಹಿಂದಿನ ಲೆಕ್ಕಾಚಾರ ಹೀಗಿದೆ..

ಸಾಯಿ ಪಲ್ಲವಿ ಅವರು ಉತ್ತಮ ನಟಿ ಎಂಬುದರಲ್ಲಿ ಎರಡು ಮಾತಿಲ್ಲ. ಇನ್ನು, ಶ್ರುತಿ ಹಾಸನ್​ ಅವರನ್ನು ಲಕ್ಕಿ ಎಂದು ಚಿತ್ರರಂಗದ ಮಂದಿ ಪರಿಗಣಿಸುತ್ತಾರೆ. ಹಾಗಾಗಿ ಈ ನಟಿಯರಿಬ್ಬರು ‘ಟಾಕ್ಸಿಕ್​’ ಸಿನಿಮಾದ ಭಾಗವಾಗಲಿದ್ದಾರೆ ಎಂಬ ಗಾಸಿಪ್​ ಹರಡಿದೆ. ಅಧಿಕೃವಾಗಿ ಚಿತ್ರತಂಡದವರಿಂದ ಹೇಳಿಕೆ ಹೊರಬೀಳದ ಹೊರತು ಈ ಅಂತೆ-ಕಂತೆಗಳನ್ನು ನಂಬುವುದು ಕಷ್ಟ ಎನ್ನುತ್ತಿದ್ದಾರೆ ನೆಟ್ಟಿಗರು.

ಇದನ್ನೂ ಓದಿ: ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದ ನಿರ್ದೇಶಕಿ ಬಗ್ಗೆ ನಿಮಗೆಷ್ಟು ಗೊತ್ತು?

‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ‘ಟಾಕ್ಸಿಕ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರಲಿದೆ. ಘಟಾನುಘಟಿ ತಂತ್ರಜ್ಞರು ಇದರಲ್ಲಿ ಕೆಲಸ ಮಾಡಲಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಯಶ್​ ಅವರು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ಭಾರಿ ನಿರೀಕ್ಷೆ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ