AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್​’ ಚಿತ್ರದಲ್ಲಿ ಯಶ್​ ಜೊತೆ ನಟಿಸುತ್ತಾರಾ ಸಾಯಿ ಪಲ್ಲವಿ, ಶೃತಿ ಹಾಸನ್​?

‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ‘ಟಾಕ್ಸಿಕ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರಲಿದೆ. ಘಟಾನುಘಟಿ ತಂತ್ರಜ್ಞರು ಇದರಲ್ಲಿ ಕೆಲಸ ಮಾಡಲಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಯಶ್​ ಅವರು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ಭಾರಿ ನಿರೀಕ್ಷೆ ಮನೆ ಮಾಡಿದೆ.

‘ಟಾಕ್ಸಿಕ್​’ ಚಿತ್ರದಲ್ಲಿ ಯಶ್​ ಜೊತೆ ನಟಿಸುತ್ತಾರಾ ಸಾಯಿ ಪಲ್ಲವಿ, ಶೃತಿ ಹಾಸನ್​?
ಸಾಯಿ ಪಲ್ಲವಿ, ಯಶ್​, ಶ್ರುತಿ ಹಾಸನ್​
Follow us
ಮದನ್​ ಕುಮಾರ್​
|

Updated on: Dec 15, 2023 | 6:57 PM

‘ರಾಕಿಂಗ್​ ಸ್ಟಾರ್​’ ಯಶ್​ (Yash) ಅವರು ‘ಟಾಕ್ಸಿಕ್​’ ಸಿನಿಮಾ ಅನೌನ್ಸ್​ ಮಾಡಿದ ಬಳಿಕ ಹಲವು ಅಂತೆ-ಕಂತೆಗಳು ಹುಟ್ಟಿಕೊಂಡಿವೆ. ಈ ಸಿನಿಮಾದ ಬಗ್ಗೆ ಅನೇಕ ಗಾಸಿಪ್​ಗಳು ಹರಿದಾಡುತ್ತಿವೆ. ಇದು ಯಶ್​ ಪಾಲಿಗೆ ಚಾಲೆಂಜಿಂಗ್ ಪ್ರಾಜೆಕ್ಟ್​. ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಾಗಾಗಿ ಪ್ರತಿ ಅಪ್​ಡೇಟ್​ ಬಗ್ಗೆಯೂ ಕುತೂಹಲದಿಂದ ಕಾಯುತ್ತಿದ್ದಾರೆ. ‘ಟಾಕ್ಸಿಕ್​’ (Toxic) ಸಿನಿಮಾದಲ್ಲಿ ಯಶ್​ ಜೊತೆ ಯಾರು ನಟಿಸಬಹುದು ಎಂಬ ಕೌತುಕ ಮೂಡಿದೆ. ಸಾಯಿ ಪಲ್ಲವಿ (Sai Pallavi) ಮತ್ತು ಶ್ರುತಿ ಹಾಸನ್​ ಅವರ ಹೆಸರುಗಳು ಹರಿದಾಡುತ್ತಿವೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ‘ಟಾಕ್ಸಿಕ್​’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಟೈಟಲ್​ ಅನಾವರಣ ಮಾಡುವ ಸಲುವಾಗಿ ಬಿಡುಗಡೆ ಮಾಡಿದ ಟೀಸರ್​ ಗಮನ ಸೆಳೆದಿದೆ. ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಸಾಯಿ ಪಲ್ಲವಿ ಮತ್ತು ಶ್ರುತಿ ಹಾಸನ್​ ಅವರನ್ನು ಚಿತ್ರತಂಡ ಸಂಪರ್ಕಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Toxic: ಆಸ್ಕರ್​ ಪ್ರಶಸ್ತಿ ಮೇಲೆ ಯಶ್​ ಕಣ್ಣು? ‘ಟಾಕ್ಸಿಕ್​’ ಸಿನಿಮಾ ಹಿಂದಿನ ಲೆಕ್ಕಾಚಾರ ಹೀಗಿದೆ..

ಸಾಯಿ ಪಲ್ಲವಿ ಅವರು ಉತ್ತಮ ನಟಿ ಎಂಬುದರಲ್ಲಿ ಎರಡು ಮಾತಿಲ್ಲ. ಇನ್ನು, ಶ್ರುತಿ ಹಾಸನ್​ ಅವರನ್ನು ಲಕ್ಕಿ ಎಂದು ಚಿತ್ರರಂಗದ ಮಂದಿ ಪರಿಗಣಿಸುತ್ತಾರೆ. ಹಾಗಾಗಿ ಈ ನಟಿಯರಿಬ್ಬರು ‘ಟಾಕ್ಸಿಕ್​’ ಸಿನಿಮಾದ ಭಾಗವಾಗಲಿದ್ದಾರೆ ಎಂಬ ಗಾಸಿಪ್​ ಹರಡಿದೆ. ಅಧಿಕೃವಾಗಿ ಚಿತ್ರತಂಡದವರಿಂದ ಹೇಳಿಕೆ ಹೊರಬೀಳದ ಹೊರತು ಈ ಅಂತೆ-ಕಂತೆಗಳನ್ನು ನಂಬುವುದು ಕಷ್ಟ ಎನ್ನುತ್ತಿದ್ದಾರೆ ನೆಟ್ಟಿಗರು.

ಇದನ್ನೂ ಓದಿ: ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದ ನಿರ್ದೇಶಕಿ ಬಗ್ಗೆ ನಿಮಗೆಷ್ಟು ಗೊತ್ತು?

‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ‘ಟಾಕ್ಸಿಕ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರಲಿದೆ. ಘಟಾನುಘಟಿ ತಂತ್ರಜ್ಞರು ಇದರಲ್ಲಿ ಕೆಲಸ ಮಾಡಲಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಯಶ್​ ಅವರು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ಭಾರಿ ನಿರೀಕ್ಷೆ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್