AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟೈಲಿಷ್ ಪೋಸ್ಟರ್ ಮೂಲಕ ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಘೋಷಿಸಿದ ಯಶ್

Toxic movie: ‘ಟಾಕ್ಸಿಕ್’ ಸಿನಿಮಾವನ್ನು ಹಾಲಿವುಡ್ ಲೆವೆಲ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಇದೀಗ ಯಶ್ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ ನೋಡಿದರೆ ಹಾಲಿವುಡ್​ನ ಕಲ್ಟ್ ಕ್ಲಾಸಿಕ್ ಗ್ಯಾಂಗ್ಸ್​ಸ್ಟರ್ ಸಿನಿಮಾಗಳು ನೆನಪಿಗೆ ಬರುತ್ತಿವೆ. ಪೋಸ್ಟರ್ ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಸಹ ಘೋಷಿಸಿದ್ದಾರೆ ಯಶ್.

ಸ್ಟೈಲಿಷ್ ಪೋಸ್ಟರ್ ಮೂಲಕ ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಘೋಷಿಸಿದ ಯಶ್
Toxic Movie
ಮಂಜುನಾಥ ಸಿ.
|

Updated on:Mar 22, 2025 | 5:48 PM

Share

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಿ ಅಭಿಮಾನಿಗಳು ಸಹ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾವನ್ನು ಹಾಲಿವುಡ್ ಲೆವೆಲ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಇದೀಗ ಯಶ್ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ ನೋಡಿದರೆ ಹಾಲಿವುಡ್​ನ ಕಲ್ಟ್ ಕ್ಲಾಸಿಕ್ ಗ್ಯಾಂಗ್ಸ್​ಸ್ಟರ್ ಸಿನಿಮಾಗಳು ನೆನಪಿಗೆ ಬರುತ್ತಿವೆ. ಪೋಸ್ಟರ್ ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಸಹ ಘೋಷಿಸಿದ್ದಾರೆ ಯಶ್.

ಇಂದು ಸಂಜೆ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ ‘ಟಾಕ್ಸಿಕ್’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೋಸ್ಟರ್​ನಲ್ಲಿ ಯಶ್ ಬಂದೂಕು ಹಿಡಿದುಕೊಂಡು ನಡೆದು ಬರುತ್ತಿರುವ ದೃಶ್ಯವಿದೆ. ಯಶ್ ಹಿಂದೆ ಬೆಂಕಿ ತುಂಬಿಕೊಂಡಿದೆ. ಎಲ್ಲವನ್ನೂ ವಿಧ್ವಂಸ ಮಾಡಿ ಸ್ಟೈಲ್ ಆಗಿ ನಡೆದು ಬರುತ್ತಿರುವ ಯಶ್ ಕೈಯಲ್ಲಿ ಹಳೆಯ ಮಾದರಿಯ ಮಷಿನ್ ಗನ್ ಒಂದಿದೆ. ಇದರ ಜೊತೆಗೆ ಯಶ್​ ಪಾತ್ರದ ಕ್ಲೋಸ್ ಅಪ್ ಫೋಟೊ ಸಹ ಒಂದಿದೆ ಆದರೆ ಆ ಫೋಟೊನಲ್ಲಿ ಯಶ್​ನ ಮುಖ ಕಾಣುತ್ತಿಲ್ಲ. ಆದರೆ ಯಶ್​ ಧರಿಸಿರುವ ಕಿವಿಯೋಲೆ, ಹೇರ್​ ಸ್ಟೈಲ್ ಮತ್ತು ಧರಿಸಿರುವ ಕೌವ್ ಬಾಯ್ ಹ್ಯಾಟ್ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:ಅಭಿಮಾನಿಗಳಿಗೆ ಯಶ್​ನ ಹತ್ತಿರದಿಂದ ನೋಡೋ ಅವಕಾಶ; ಎಲ್ಲಿ? ಯಾವಾಗ?

ಪೋಸ್ಟರ್​ನಲ್ಲಿ ಸಿನಿಮಾ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಒಂದು ವರ್ಷದ ಬಳಿಕ ಅಂದರೆ 2026 ಮಾರ್ಚ್ 19 ರಂದು ಆಗಲಿದೆ. ಯಶ್​, ‘ಟಾಕ್ಸಿಕ್’ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ ಕೆಲವೇ ನಿಮಿಷಗಳಲ್ಲಿ ಪೋಸ್ಟರ್ ವೈರಲ್ ಆಗಿದೆ. ಕೆಲವೇ ನಿಮಿಷಗಳಲ್ಲಿ ಯಶ್ ಅವರ ಪೋಸ್ಟ್ ಅನ್ನು ಅಭಿಮಾನಿಗಳು ಷೇರ್ ಮಾಡುತ್ತಿದ್ದಾರೆ. ಕಮೆಂಟ್​ಗಳ ಸುರಿ ಮಳೆಯನ್ನೇ ಸುರಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Sat, 22 March 25

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?