AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು

‘ಟಾಕ್ಸಿಕ್​’ ಸಿನಿಮಾದಲ್ಲಿ ನಟ ಯಶ್​ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬ ಬಗ್ಗೆ ಸಿನಿಪ್ರಿಯರಿಗೆ ಕುತೂಹಲ ಇದೆ. ಈ ಸಿನಿಮಾದ ಶೂಟಿಂಗ್​ಗಾಗಿ ಬೃಹತ್​ ಸೆಟ್​ಗಳ ನಿರ್ಮಾಣ ಆಗುತ್ತಿದೆ. ಕಥೆಯ ವಿಚಾರದಲ್ಲಿ ‘ಕೆಜಿಎಫ್​ 2’ ರೀತಿಯೇ ರೆಟ್ರೋ ಸೂತ್ರವನ್ನು ‘ಟಾಕ್ಸಿಕ್​’ ಟೀಮ್​ ಅನುಸರಿಸುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು
ಯಶ್​
ಮದನ್​ ಕುಮಾರ್​
| Edited By: |

Updated on:Aug 08, 2024 | 11:33 AM

Share

ನಟ ಯಶ್​ (Yash) ಅವರಿಗೆ ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಸಿಕ್ಕ ಯಶಸ್ಸು ಎಷ್ಟು ದೊಡ್ಡ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಆ ಸಿನಿಮಾದ ಗೆಲುವಿನ ಹಿಂದೆ ಅನೇಕ ಅಂಶಗಳು ಕಾರಣ ಆಗಿದ್ದವು. ‘ಕೆಜಿಎಫ್​’ ಕಹಾನಿ ತುಂಬ ಡಿಫರೆಂಟ್​ ಆಗಿತ್ತು. ರೆಟ್ರೋ ಕಾಲದ ಕಥೆಯನ್ನು ನಿರ್ದೇಶಕ ಪ್ರಶಾಂತ್​ ನೀಲ್​ ಆಯ್ಕೆ ಮಾಡಿಕೊಂಡಿದ್ದರು. ಈಗ ಅದೇ ಸೂತ್ರವನ್ನು ಟಾಕ್ಸಿಕ್​’ (Toxic) ಸಿನಿಮಾದಲ್ಲೂ ಅನುಸರಿಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಅಂದರೆ, ಈ ಸಿನಿಮಾದ ಕಥೆ ಕೂಡ ರೆಟ್ರೋ ಕಾಲದ ಹಿನ್ನೆಲೆಯಲ್ಲಿ ಸಾಗಲಿದೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ‘ಟಾಕ್ಸಿಕ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಯಶ್​ ನಟನೆಯ 19ನೇ ಸಿನಿಮಾ. ‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಪ್ರಾಜೆಕ್ಟ್​ ಬಗ್ಗೆ ಯಶ್​ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದ ಕಥೆಯು 1950 ಹಾಗೂ 1970ರ ಕಾಲಘಟ್ಟದಲ್ಲಿ ನಡೆಯುತ್ತದೆ ಎಂದು ‘ಹಿಂದೂಸ್ತಾನ್​ ಟೈಮ್ಸ್​’ ವರದಿ ಮಾಡಿದೆ.

ವರದಿಗಳ ಪ್ರಕಾರ, ಬೆಂಗಳೂರಿನ ಹೊರವಲಯದಲ್ಲಿ ‘ಟಾಕ್ಸಿಕ್​’ ಸಿನಿಮಾಗೆ ಸೆಟ್​ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ರೆಟ್ರೋ ಕಥೆ ಆದ್ದರಿಂದ 1950, 1970ರ ಸಮಯದ ದೃಶ್ಯಗಳನ್ನು ತೆರೆ ಮೇಲೆ ತರಲು ವಿಶೇಷ ರೀತಿಯಲ್ಲಿ ಸೆಟ್​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸದ್ಯಕ್ಕೆ ಟೈಟಲ್​ ಟೀಸರ್​ ಹೊರತುಪಡಿಸಿ, ಚಿತ್ರತಂಡದಿಂದ ಬೇರೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ.

ಇದನ್ನೂ ಓದಿ: ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

‘ಟಾಕ್ಸಿಕ್’ ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವಾರು ಗಾಸಿಪ್​ಗಳು ಹರಿದಾಡುತ್ತಿವೆ. ಸಿನಿಮಾದ ಮುಖ್ಯ ಪಾತ್ರದಲ್ಲಿ ಕರೀನಾ ಕಪೂರ್​ ಖಾನ್​ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಸಂಭಾವನೆ ವಿಚಾರದಲ್ಲಿ ಹೊಂದಾಣಿಕೆ ಆಗದ ಕಾರಣ ಅವರು ಈ ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ ಎಂದು ವರದಿ ಆಯಿತು. ಈಗ ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಮುಂತಾದ ನಟಿಯರ ಹೆಸರು ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:28 pm, Mon, 1 July 24

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​