AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು

‘ಟಾಕ್ಸಿಕ್​’ ಸಿನಿಮಾದಲ್ಲಿ ನಟ ಯಶ್​ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬ ಬಗ್ಗೆ ಸಿನಿಪ್ರಿಯರಿಗೆ ಕುತೂಹಲ ಇದೆ. ಈ ಸಿನಿಮಾದ ಶೂಟಿಂಗ್​ಗಾಗಿ ಬೃಹತ್​ ಸೆಟ್​ಗಳ ನಿರ್ಮಾಣ ಆಗುತ್ತಿದೆ. ಕಥೆಯ ವಿಚಾರದಲ್ಲಿ ‘ಕೆಜಿಎಫ್​ 2’ ರೀತಿಯೇ ರೆಟ್ರೋ ಸೂತ್ರವನ್ನು ‘ಟಾಕ್ಸಿಕ್​’ ಟೀಮ್​ ಅನುಸರಿಸುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು
ಯಶ್​
ಮದನ್​ ಕುಮಾರ್​
| Edited By: |

Updated on:Aug 08, 2024 | 11:33 AM

Share

ನಟ ಯಶ್​ (Yash) ಅವರಿಗೆ ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಸಿಕ್ಕ ಯಶಸ್ಸು ಎಷ್ಟು ದೊಡ್ಡ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಆ ಸಿನಿಮಾದ ಗೆಲುವಿನ ಹಿಂದೆ ಅನೇಕ ಅಂಶಗಳು ಕಾರಣ ಆಗಿದ್ದವು. ‘ಕೆಜಿಎಫ್​’ ಕಹಾನಿ ತುಂಬ ಡಿಫರೆಂಟ್​ ಆಗಿತ್ತು. ರೆಟ್ರೋ ಕಾಲದ ಕಥೆಯನ್ನು ನಿರ್ದೇಶಕ ಪ್ರಶಾಂತ್​ ನೀಲ್​ ಆಯ್ಕೆ ಮಾಡಿಕೊಂಡಿದ್ದರು. ಈಗ ಅದೇ ಸೂತ್ರವನ್ನು ಟಾಕ್ಸಿಕ್​’ (Toxic) ಸಿನಿಮಾದಲ್ಲೂ ಅನುಸರಿಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಅಂದರೆ, ಈ ಸಿನಿಮಾದ ಕಥೆ ಕೂಡ ರೆಟ್ರೋ ಕಾಲದ ಹಿನ್ನೆಲೆಯಲ್ಲಿ ಸಾಗಲಿದೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ‘ಟಾಕ್ಸಿಕ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಯಶ್​ ನಟನೆಯ 19ನೇ ಸಿನಿಮಾ. ‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಪ್ರಾಜೆಕ್ಟ್​ ಬಗ್ಗೆ ಯಶ್​ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದ ಕಥೆಯು 1950 ಹಾಗೂ 1970ರ ಕಾಲಘಟ್ಟದಲ್ಲಿ ನಡೆಯುತ್ತದೆ ಎಂದು ‘ಹಿಂದೂಸ್ತಾನ್​ ಟೈಮ್ಸ್​’ ವರದಿ ಮಾಡಿದೆ.

ವರದಿಗಳ ಪ್ರಕಾರ, ಬೆಂಗಳೂರಿನ ಹೊರವಲಯದಲ್ಲಿ ‘ಟಾಕ್ಸಿಕ್​’ ಸಿನಿಮಾಗೆ ಸೆಟ್​ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ರೆಟ್ರೋ ಕಥೆ ಆದ್ದರಿಂದ 1950, 1970ರ ಸಮಯದ ದೃಶ್ಯಗಳನ್ನು ತೆರೆ ಮೇಲೆ ತರಲು ವಿಶೇಷ ರೀತಿಯಲ್ಲಿ ಸೆಟ್​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸದ್ಯಕ್ಕೆ ಟೈಟಲ್​ ಟೀಸರ್​ ಹೊರತುಪಡಿಸಿ, ಚಿತ್ರತಂಡದಿಂದ ಬೇರೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ.

ಇದನ್ನೂ ಓದಿ: ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

‘ಟಾಕ್ಸಿಕ್’ ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವಾರು ಗಾಸಿಪ್​ಗಳು ಹರಿದಾಡುತ್ತಿವೆ. ಸಿನಿಮಾದ ಮುಖ್ಯ ಪಾತ್ರದಲ್ಲಿ ಕರೀನಾ ಕಪೂರ್​ ಖಾನ್​ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಸಂಭಾವನೆ ವಿಚಾರದಲ್ಲಿ ಹೊಂದಾಣಿಕೆ ಆಗದ ಕಾರಣ ಅವರು ಈ ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ ಎಂದು ವರದಿ ಆಯಿತು. ಈಗ ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಮುಂತಾದ ನಟಿಯರ ಹೆಸರು ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:28 pm, Mon, 1 July 24

Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ