AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು

‘ಟಾಕ್ಸಿಕ್​’ ಸಿನಿಮಾದಲ್ಲಿ ನಟ ಯಶ್​ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬ ಬಗ್ಗೆ ಸಿನಿಪ್ರಿಯರಿಗೆ ಕುತೂಹಲ ಇದೆ. ಈ ಸಿನಿಮಾದ ಶೂಟಿಂಗ್​ಗಾಗಿ ಬೃಹತ್​ ಸೆಟ್​ಗಳ ನಿರ್ಮಾಣ ಆಗುತ್ತಿದೆ. ಕಥೆಯ ವಿಚಾರದಲ್ಲಿ ‘ಕೆಜಿಎಫ್​ 2’ ರೀತಿಯೇ ರೆಟ್ರೋ ಸೂತ್ರವನ್ನು ‘ಟಾಕ್ಸಿಕ್​’ ಟೀಮ್​ ಅನುಸರಿಸುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು
ಯಶ್​
ಮದನ್​ ಕುಮಾರ್​
| Edited By: |

Updated on:Aug 08, 2024 | 11:33 AM

Share

ನಟ ಯಶ್​ (Yash) ಅವರಿಗೆ ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಸಿಕ್ಕ ಯಶಸ್ಸು ಎಷ್ಟು ದೊಡ್ಡ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಆ ಸಿನಿಮಾದ ಗೆಲುವಿನ ಹಿಂದೆ ಅನೇಕ ಅಂಶಗಳು ಕಾರಣ ಆಗಿದ್ದವು. ‘ಕೆಜಿಎಫ್​’ ಕಹಾನಿ ತುಂಬ ಡಿಫರೆಂಟ್​ ಆಗಿತ್ತು. ರೆಟ್ರೋ ಕಾಲದ ಕಥೆಯನ್ನು ನಿರ್ದೇಶಕ ಪ್ರಶಾಂತ್​ ನೀಲ್​ ಆಯ್ಕೆ ಮಾಡಿಕೊಂಡಿದ್ದರು. ಈಗ ಅದೇ ಸೂತ್ರವನ್ನು ಟಾಕ್ಸಿಕ್​’ (Toxic) ಸಿನಿಮಾದಲ್ಲೂ ಅನುಸರಿಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಅಂದರೆ, ಈ ಸಿನಿಮಾದ ಕಥೆ ಕೂಡ ರೆಟ್ರೋ ಕಾಲದ ಹಿನ್ನೆಲೆಯಲ್ಲಿ ಸಾಗಲಿದೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ‘ಟಾಕ್ಸಿಕ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಯಶ್​ ನಟನೆಯ 19ನೇ ಸಿನಿಮಾ. ‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಪ್ರಾಜೆಕ್ಟ್​ ಬಗ್ಗೆ ಯಶ್​ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದ ಕಥೆಯು 1950 ಹಾಗೂ 1970ರ ಕಾಲಘಟ್ಟದಲ್ಲಿ ನಡೆಯುತ್ತದೆ ಎಂದು ‘ಹಿಂದೂಸ್ತಾನ್​ ಟೈಮ್ಸ್​’ ವರದಿ ಮಾಡಿದೆ.

ವರದಿಗಳ ಪ್ರಕಾರ, ಬೆಂಗಳೂರಿನ ಹೊರವಲಯದಲ್ಲಿ ‘ಟಾಕ್ಸಿಕ್​’ ಸಿನಿಮಾಗೆ ಸೆಟ್​ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ರೆಟ್ರೋ ಕಥೆ ಆದ್ದರಿಂದ 1950, 1970ರ ಸಮಯದ ದೃಶ್ಯಗಳನ್ನು ತೆರೆ ಮೇಲೆ ತರಲು ವಿಶೇಷ ರೀತಿಯಲ್ಲಿ ಸೆಟ್​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸದ್ಯಕ್ಕೆ ಟೈಟಲ್​ ಟೀಸರ್​ ಹೊರತುಪಡಿಸಿ, ಚಿತ್ರತಂಡದಿಂದ ಬೇರೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ.

ಇದನ್ನೂ ಓದಿ: ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

‘ಟಾಕ್ಸಿಕ್’ ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವಾರು ಗಾಸಿಪ್​ಗಳು ಹರಿದಾಡುತ್ತಿವೆ. ಸಿನಿಮಾದ ಮುಖ್ಯ ಪಾತ್ರದಲ್ಲಿ ಕರೀನಾ ಕಪೂರ್​ ಖಾನ್​ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಸಂಭಾವನೆ ವಿಚಾರದಲ್ಲಿ ಹೊಂದಾಣಿಕೆ ಆಗದ ಕಾರಣ ಅವರು ಈ ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ ಎಂದು ವರದಿ ಆಯಿತು. ಈಗ ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಮುಂತಾದ ನಟಿಯರ ಹೆಸರು ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:28 pm, Mon, 1 July 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ