AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ರಾಕಿ ಸಾಮ್ರಾಜ್ಯ ವೀಕ್ಷಿಸುತ್ತಿರುವ ಬೆಂಗಳೂರು ಬಾಯ್ಸ್; ಆರ್​ಸಿಬಿ ತಂಡಕ್ಕೆ ‘ಕೆಜಿಎಫ್ ಚಾಪ್ಟರ್ 2’ ವಿಶೇಷ ಪ್ರದರ್ಶನ

IPL 2022 | Virat Kohli | Yash: ಐಪಿಎಲ್​ನಲ್ಲಿ ಗೆಲುವಿನ ಟ್ರ್ಯಾಕ್​ನಲ್ಲಿರುವ ‘ಆರ್​ಸಿಬಿ’ ತಂಡಕ್ಕೆ ‘ಕೆಜಿಎಫ್ ಚಾಪ್ಟರ್ 2’ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಬಗ್ಗೆ ತಂಡ ಮಾಹಿತಿ ಹಂಚಿಕೊಂಡಿದೆ. ಸುದ್ದಿ ತಿಳಿದ ಅಭಿಮಾನಿಗಳು ಥ್ರಿಲ್ ಆಗಿದ್ದು, ಆಟಗಾರರ ಪ್ರತಿಕ್ರಿಯೆ ಹೇಗಿರಬಹುದು ಎಂಬ ಕುತೂಹಲ ಹೊಂದಿದ್ದಾರೆ.

KGF Chapter 2: ರಾಕಿ ಸಾಮ್ರಾಜ್ಯ ವೀಕ್ಷಿಸುತ್ತಿರುವ ಬೆಂಗಳೂರು ಬಾಯ್ಸ್; ಆರ್​ಸಿಬಿ ತಂಡಕ್ಕೆ ‘ಕೆಜಿಎಫ್ ಚಾಪ್ಟರ್ 2’ ವಿಶೇಷ ಪ್ರದರ್ಶನ
ಆರ್​ಸಿಬಿ ತಾರಾ ಆಟಗಾರರಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​​ವೆಲ್, ಫಾಫ್​ಡು ಪ್ಲೆಸಿಸ್ (ಎಡ ಚಿತ್ರ), ‘ಕೆಜಿಎಫ್ 2’ ಚಿತ್ರದಲ್ಲಿ ಯಶ್ (ಬಲ ಚಿತ್ರ)
TV9 Web
| Updated By: shivaprasad.hs|

Updated on:Apr 17, 2022 | 8:47 PM

Share

ವಿಶ್ವಾದ್ಯಂತ ‘ಕೆಜಿಎಫ್ ಚಾಪ್ಟರ್ 2’ (KGF Chapter 2) ಹವಾ ಜೋರಾಗಿದೆ. ಯಶ್, ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಮೊದಲಾದ ತಾರೆಯರು ಬಣ್ಣಹಚ್ಚಿರುವ ಚಿತ್ರ ಬಾಕ್ಸಾಫೀಸ್​ನಲ್ಲಿ ಜಯಭೇರಿ ಬಾರಿಸಿದ್ದು, ಈಗಾಗಲೇ ಚಿತ್ರದ ಗಳಿಕೆ 400 ಕೋಟಿ ರೂ ದಾಟಿದೆ. ಇತ್ತೀಚೆಗಷ್ಟೇ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಹೊಸ ಒಪ್ಪಂದ ಮಾಡಿಕೊಂಡಿದ್ದವು. ಕ್ರೀಡೆ ಹಾಗೂ ಮನರಂಜನೆಯಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಲು ಜತೆಯಾಗಿ ಸಾಗುವುದಾಗಿ ಎರಡೂ ಸಂಸ್ಥೆಗಳು ಘೋಷಿಸಿದ್ದವು. ಎಲ್ಲೆಡೆ ‘ಕೆಜಿಎಫ್’ ಟ್ರೆಂಡ್ ಜೋರಾಗಿರುವಂತೆಯೇ ಐಪಿಎಲ್ ಬಯೋಬಬಲ್ ಒಳಗಡೆಯೇ ಆರ್​ಸಿಬಿ ಆಟಗಾರರು ‘ಕೆಜಿಎಫ್ ಚಾಪ್ಟರ್ 2’ ವೀಕ್ಷಿಸುತ್ತಿದ್ದಾರೆ. ಹೌದು. ಇಂದು (ಏ.17) ಆರ್​ಸಿಬಿ ಈ ಬಗ್ಗೆ ಟ್ವೀಟ್ ಹಂಚಿಕೊಂಡಿದ್ದು, ಶೋ ಆರಂಭಗೊಂಡಿದೆ ಎಂದು ಬರೆದುಕೊಂಡಿದೆ.

‘ಆರ್​ಸಿಬಿ ಬಯೋಬಬಲ್​ನಲ್ಲಿ ಕೆಜಿಎಫ್ ಚಾಪ್ಟರ್ 2 ವಿಶೇಷ ಪ್ರದರ್ಶನ. ಬ್ಲಾಕ್​ಬಸ್ಟರ್ ಚಿತ್ರವನ್ನು ವೀಕ್ಷಿಸಲು ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ’ ಎಂದು ಆರ್​ಸಿಬಿ ಟ್ವೀಟ್ ಮಾಡಿದೆ. ನಟ, ನಿರೂಪಕ ದಾನಿಶ್ ಸೇಠ್ ಚಿತ್ರ ಪ್ರದರ್ಶನದ ಫೋಟೋ ಹಂಚಿಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

ಆರ್​ಸಿಬಿ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ನಟ, ನಿರೂಪಕ ದಾನಿಶ್ ಸೇಠ್ ಹಂಚಿಕೊಂಡ ಟ್ವೀಟ್:

ಇತ್ತೀಚೆಗಷ್ಟೇ ಹೊಂಬಾಳೆ ಫಿಲ್ಮ್ಸ್ ಹಾಗೂ ಆರ್​ಸಿಬಿ ಸಹಯೋಗವು ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಕಾರಣ, ಐಪಿಎಲ್​ ತಂಡ ಹಾಗೂ ನಿರ್ಮಾಣ ಸಂಸ್ಥೆಯೊಂದು ಮೊಟ್ಟಮೊದಲ ಬಾರಿಗೆ ಕೈಜೋಡಿಸಿದ್ದವು. ಬೆಂಗಳೂರೇ ತವರೂರಾಗಿರುವ ಎರಡೂ ಸಂಸ್ಥೆಗಳ ಮುಂದಿನ ಸಹಯೋಗದ ಬಗ್ಗೆ ತೀವ್ರ ಕುತೂಹಲ ಮೂಡಿತ್ತು.  ಕ್ರೀಡೆ ಮತ್ತು ಚಲನಚಿತ್ರ ಮನರಂಜನಾ ವಲಯದಲ್ಲಿ ಅಭಿಮಾನಿಗಳಿಗೆ ಮ್ಯಾಜಿಕ್ ಮೂಮೆಂಟ್‌ಗಳನ್ನು ಸೃಷ್ಟಿಸಲು ನಾವು ಒಟ್ಟಾಗಿ ಪ್ರಯತ್ನಿಸುತ್ತೇವೆ ಎಂದು ನಿರ್ಮಾಪಕ ವಿಜಯ್​ ಕಿರಗಂದೂರು ತಿಳಿಸಿದ್ದರು.

ನಂತರದಲ್ಲಿ ಆರ್​ಸಿಬಿ ಹಾಗೂ ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿವೆ. ಆರ್​ಸಿಬಿ ತಂಡದಲ್ಲಿರುವ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಕಪ್ತಾನ ಫಾಫ್​ಡು ಪ್ಲೆಸಿಸ್​ರನ್ನು ‘ಕೆಜಿಎಫ್’ ಎಂದೇ ಅಭಿಮಾನಿಗಳು ಗುರುತಿಸುತ್ತಿದ್ದಾರೆ. ಚಿತ್ರದ ರಿಲೀಸ್ ಸಂದರ್ಭದಲ್ಲಿ ಆರ್​ಸಿಬಿ ಆಟಗಾರರನ್ನು ಒಳಗೊಂಡ ‘ಕೆಜಿಎಫ್’ ಪ್ರೋಮೋ ಒಂದನ್ನು ರಿಲೀಸ್ ಮಾಡಲಾಗಿತ್ತು. ಅದು ವೈರಲ್ ಆಗಿತ್ತು. ಇದೀಗ ಆರ್​ಸಿಬಿ ತಂಡ ಚಿತ್ರ ವೀಕ್ಷಣೆ ನಡೆಸುತ್ತಿದ್ದು, ತಾರಾ ಆಟಗಾರರ ಪ್ರತಿಕ್ರಿಯೆ ಹೇಗಿರಬಹುದು ಎಂಬುದರ ಬಗ್ಗೆ ಅಭಿಮಾನಿಗಳು ಕುತೂಹಲಗೊಂಡಿದ್ದಾರೆ.

ಇದನ್ನೂ ಓದಿ: ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ವಿಜಯ ಪತಾಕೆ: ಪರಭಾಷೆ ಸೆಲೆಬ್ರಿಟಿಗಳ ಪ್ರತಿಕ್ರಿಯೆ ಏನು?​

James: ಪುನೀತ್ ಧ್ವನಿಯಲ್ಲಿಯೇ ಪ್ರದರ್ಶನ ಕಾಣಲಿದೆ ‘ಜೇಮ್ಸ್’; ಹೇಗೆ? ಎಂದಿನಿಂದ? ಅಪ್ಪು ಅಭಿಮಾನಿಗಳಿಗಿದು ಖುಷಿಯ ವಿಚಾರ

Published On - 8:27 pm, Sun, 17 April 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ